ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಗತಿಯ ಸಮಾರೋಪ ಸಮಾರಂಭ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷಗಾನ ತರಗತಿಯ ಸಮಾರೋಪ ಸಮಾರಂಭ ಮಾ.1ರಂದು ನಡೆಯಿತು.


ಯಕ್ಷಗಾನ ಗುರುಗಳಾದ ಲಕ್ಷ್ಮಣ ಗೌಡ ಇವರು ಮಕ್ಕಳನ್ನು ಕುರಿತು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕಲೆಯನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕು. ನೀವು ಯಾವುದೇ ಉದ್ಯೋಗವನ್ನು ಹೊಂದಿರಬಹುದು ಆದರೆ ನೀವು ಕಲಿತ ಈ ಯಕ್ಷಗಾನ ವಿದ್ಯೆಯನ್ನು ಮರೆಯಬೇಡಿ. ನೀವೆಲ್ಲರೂ ಸತ್ಪ್ರಜೆಯಾಗಿ ಬಾಳಿ ಬದುಕಿ ಎಂದು ಶುಭ ಹಾರೈಸಿದರು.


ಹಿರಿಯ ಶಿಕ್ಷಕ ಜೋಸೆಫ್ ರವರು ಮಾತನಾಡಿ ಯಕ್ಷಗಾನ ಒಂದು ವಿಶೇಷ ಕಲೆ . ಎಲ್ಲಾ ಕಲೆಗಳ ಹಿರಿಯ ಕಲೆಯಾಗಿದೆ. ವಿದ್ಯಾರ್ಥಿಗಳಾದ ನೀವು ತಂದೆ ತಾಯಿ ದೇವರನ್ನು ಪ್ರೀತಿಸಬೇಕು. ಇತರರನ್ನು ಪ್ರೀತಿಸುವ ಗುಣವನ್ನು ಹೊಂದಿರಬೇಕು ಎಂದು ಹೇಳಿದರು.
ಯಕ್ಷಗಾನ ತರಗತಿಯ ಮಕ್ಕಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಕಾರ್ಯಕ್ರಮವನ್ನು ಶಿಕ್ಷಕ ಶೇಖರ್ ಗೌಡ ನಿರ್ವಹಿಸಿ, ಸಂಜೀವ ಕೆ ಸ್ವಾಗತಿಸಿ, ಶ್ರೀಮತಿ ಪೂರ್ಣಿಮಾ ವಂದಿಸಿದರು .

Related posts

ಪಣಕಜೆ ಮುಹಿಯ್ಯದ್ದೀನ್ ಜುಮಾ ಮಸೀದಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆದ ಸ್ಥಳದ ಸ್ವಚ್ಛತೆ

Suddi Udaya

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕೈ ಮತ್ತು ಮೈಕ್ರೊಸರ್ಜರಿ ಸೇವೆಗೆ ಚಾಲನೆ

Suddi Udaya

ಪಡಂಗಡಿ ಗ್ರಾ.ಪಂ. ಸದಸ್ಯ ಹಾಮದ್ ಬಾವ ಹೃದಯಾಘಾತದಿಂದ ನಿಧನ

Suddi Udaya

ಕ್ಷುಲಕ ವಿಚಾರದಲ್ಲಿ ಮಕ್ಕಳ ಜೊತೆ ಗಲಾಟೆ: ಬೆಂಗಳೂರಿನ ವೃದ್ಧ ಧಮ೯ಸ್ಥಳಕ್ಕೆ ಬಂದು ಖಾಸಗಿ ಲಾಡ್ಜ್ ನಲ್ಲಿ ವಿಷಸೇವಿಸಿ ಆತ್ಮಹತ್ಯೆ

Suddi Udaya

ಚಿನ್ನದ ಕರಿಮಣಿ ಸರ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ

Suddi Udaya
error: Content is protected !!