24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ನಿವೃತ್ತ ಪ್ರಾಂಶುಪಾಲರಾದ ಶ್ರೀಮತಿ ಜಾಲಿ ಓ ಎ ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ನೂತನ ಪ್ರಾಂಶುಪಾಲರಿಗೆ ಅಧಿಕಾರ ಹಸ್ತಾಂತರ

ಮುಂಡಾಜೆ: ಶ್ರೀಮತಿ ಜಾಲಿ ಓ ಎ ಅವರು ಮುಂಡಾಜೆ ಪದವಿ ಪೂರ್ವ ಕಾಲೇಜಿಗೆ 1991ರಲ್ಲಿ ಅರ್ಥಶಾಸ್ತ್ರ ಉಪನ್ಯಾಸಕರಾಗಿ ಸೇವೆಗೆ ಸೇರಿ, 2004ರಿಂದ ಪ್ರಾಂಶುಪಾಲರಾಗಿ ಪದೋನ್ನತಿ ಹೊಂದಿ, ಸುಮಾರು 34 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ಫೆ.28ರಂದು ವಯೋ ನಿವೃತ್ತಿ ಹೊಂದಿದರು.

ಈ ವೇಳೆ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಕಾರ್ಯದರ್ಶಿಯವರಾದ ಕೃಷ್ಣ ಭಟ್ ರವರು ನಿವೃತ್ತರ ಮುಂದಿನ ಜೀವನ ಸುಖಕರವಾಗಿರಲಿ ಎಂದು ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಖಜಾಂಚಿಯವರಾದ ಅಚ್ಯುತ ನಾಯಕ್, ಶತಾಬ್ದಿ ವಿದ್ಯಾಲಯ ಸಮಿತಿ ಮುಂಡಾಜೆಯ ಸಂಚಾಲಕರಾದ ನಾರಾಯಣ ಫಡ್ಕೆ, ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆಯ ಅಧ್ಯಕ್ಷ ವಿನಯಚಂದ್ರ, ಸದಸ್ಯರಾದ ವಿಶ್ವನಾಥ ಶೆಟ್ಟಿ, ಶ್ರೀಮತಿ ಭಾರತಿ ಫಡ್ಕೆ, ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿಯ ಸಹ ಪ್ರಾಧ್ಯಾಪಕರಾದ ಡಾ. ರವಿ ಎಂ. ಎನ್ ರವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ನೂತನ ಪ್ರಾಂಶುಪಾಲರಾಗಿ ನಿಯುಕ್ತಿಗೊಂಡ ಇತಿಹಾಸ ಉಪನ್ಯಾಸಕಿ ಶ್ರೀಮತಿ ಗೀತಾ ಅವರಿಗೆ ಅಧಿಕಾರ ಹಸ್ತಾಂತರಿಸಲಾಯಿತು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 2023ನೇ ವರ್ಷದ ಚಟುವಟಿಕೆಗಳು ಸಂಪನ್ನ

Suddi Udaya

ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್‌ಶಿಪ್ ತ್ರೋಬಾಲ್ ಪಂದ್ಯಾಟ: ಕಣಿಯೂರಿನ ಯೂನಿತ್ ಕೆ. ನಾಯಕತ್ವದ ತಂಡ ಪ್ರಥಮ ಸ್ಥಾನ

Suddi Udaya

ಇಂದು ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ, ವಧು-ವರರಿಗೆ ಸೀರೆ, ಧೋತಿ ವಿತರಣೆ

Suddi Udaya

ಮಾ.10: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ 2ನೇ ಬಾರಿ ಎನ್.ಎ.ಬಿ.ಹೆಚ್ ಪ್ರಮಾಣಪತ್ರ

Suddi Udaya

ಖ್ಯಾತ ಹೃದ್ರೋಗ ತಜ್ಞ ಡಾ. ರಾಮಯ್ಯ ಗೌಡ ದಂಪತಿ ಉಜಿರೆಯ ಎಸ್‌ಡಿಎಂ ಆಸ್ಪತ್ರೆಗೆ ಭೇಟಿ

Suddi Udaya
error: Content is protected !!