30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ಗ್ರಾ.ಪಂ. ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

ಶಿರ್ಲಾಲು ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ವಿಶೇಷಚೇತನರ ಸಮನ್ವಯ ಗ್ರಾಮ ಸಭೆಯನ್ನು ಸರ್ಕಾರದ ಆದೇಶದಂತೆ ಫೆ. 28 ರಂದು ಶಿರ್ಲಾಲು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾ ಎಂ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸುಶೀಲಾ ಸ್ವಾಗತಿಸಿದರು. ಹಾಗೂ 2024-25 ನೇ ಸಾಲಿನ ವಿಶೇಷಚೇತನರ ವಾರ್ಷಿಕ ವರದಿಯನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ಹರೀಶ್ ಇವರು ವಾಚಿಸಿದರು.
ವಿಕಲಚೇತನರಿಗೆ ವಿಕಲಚೇತನರ ಇಲಾಖೆ ಹಾಗೂ ಇತರ ಎಲ್ಲಾ ಇಲಾಖೆಗಳಿಂದ ಸಿಗುವ ಸರಕಾರದ ಸಮಗ್ರ ಮಾಹಿತಿಯನ್ನು ತಾಲೂಕು ವಿವಿದೊದ್ದೇಶ ಪುನರ್ವಸತಿ ಸಂಯೋಜಕರಾದ ಜೋನ್ ಬ್ಯಾಪ್ಟಿಸ್ಟ್ ಡಿ ಸೋಜಾ ನೀಡಿದರು.
2024-25 ನೇ ಸಾಲಿನ ಶೇಕಡಾ 5% ರ ಅನುದಾನದಲ್ಲಿ 3 ಜನ ವಿಕಲಚೇತನರಿಗೆ ನೀರಿನ ಟ್ಯಾಂಕ್ ಹಾಗೂ ಒಬ್ಬರಿಗೆ ವಾಕಿಂಗ್ ಸ್ಟಿಕ್ ಮತ್ತು ವಿಶೇಷಚೇತನ ವಿದ್ಯಾರ್ಥಿಗೆ ಸ್ಟಡಿ ಟೇಬಲ್ ನೀಡಲಾಯಿತು, ಹಾಗೂ 5 ಜನ ವಿಕಲಚೇತನರಿಗೆ ಮನೆದುರಸ್ತಿಗೆ ಮತ್ತು ವೈದ್ಯಕೀಯ ಸಹಾಯಧನದ ಚೆಕ್ ಹಸ್ತಾಂತರಿಸಲಾಯಿತು.

ಪಂಚಾಯತ್ ಅಬಿವೃದ್ದಿ ಅಧಿಕಾರಿಯವರು ಪಂಚಾಯತ್ ನಿಂದ ವಿಕಲಚೇತನರಿಗೆ ಸಿಗುವ ಸೌಲಭ್ಯ ಹಾಗೂ ಉದ್ಯೋಗ ಖಾತರಿ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಪಂಚಾಯತ್ ಉಪಾಧ್ಯಕ್ಷರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಗ್ರಾಮ ಪಂಚಾಯತ್ ಅಧ್ಯಕ್ಷರು ಪಂಚಾಯತ್ ಹಾಗೂ ಇತರ ಇಲಾಖೆಗಳ ಪ್ರಯೋಜನಗಳನ್ನು ಹೆಚ್ಚಿನ ರೀತಿಯಲ್ಲಿ ಸದುಪಯೋಗಪಡಿಸಿಕೊಳ್ಳಬೇಕಾಗಿ ತಿಳಿಸಿದರು.


ವಿಕಲಚೇತನರ ಬೇಡಿಕೆಗಳನ್ನು ಸಭೆಯಲ್ಲಿ ಪಡೆದುಕೊಳ್ಳಲಾಯಿತು.
ಸಭೆಯಲ್ಲಿ ಪಂಚಾಯತ್ ಸಿಬ್ಬಂದಿಗಳು, ಗ್ರಂಥಾಲಯ ಮೇಲ್ವೀಚಾರಕಿ, ಸಂಜೀವಿನಿ ಒಕ್ಕೂಟದ ಎಮ್.ಬಿ.ಕೆ, ಎಲ್.ಸಿಆರ್ ಪಿ, ಪಶುಸಖಿ ಸಹಕರಿಸಿದರು. ಸಭೆಯಲ್ಲಿ ಪಂಚಾಯತ್ ನ ಸರ್ವ ಸದಸ್ಯರು, ಅಳದಂಗಡಿ ಗ್ರಾಮ ಪಂಚಾಯತ್ ನ ವಿ ಆರ್ ಡಬ್ಲೂ ಸಂದ್ಯಾ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ವಿಕಲಚೇತನರು ಹಾಗೂ ಪೋಷಕರು ಉಪಸ್ಥಿತರಿದ್ದರು.

Related posts

ಮಚ್ಚಿನ: ಬಂಗೇರಕಟ್ಟೆಯಲ್ಲಿ ರಸ್ತೆ ದುರಸ್ಥಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ವತಿಯಿಂದ ಪ್ರತಿಭಟನೆ

Suddi Udaya

ಮಂಗ, ಕಾಡುಹಂದಿ, ನವಿಲುಗಳ ಹಾವಳಿಯಿಂದ ಕೃಷಿ ಮತ್ತು ಫಸಲು ನಾಶದ ಬಗ್ಗೆ ಶಾಶ್ವತ ಪರಿಹಾರ ಒದಗಿಸುವಂತೆ ಅರಣ್ಯ ಸಚಿವರಿಗೆ ಬೆಳ್ತಂಗಡಿ ಅಖಿಲ ಭಾರತ ಕಿಸಾನ್ ಮಹಾಸಭಾ ವತಿಯಿಂದ ಮನವಿ ಸಲ್ಲಿಕೆ

Suddi Udaya

ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಲಾಯಿಲ ಚಂದ್ರಿಕಾ ರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಸಹಪ್ರಯಾಣಿಕನಿಂದ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ಮೂಲದ ಅಝೀಮ್ ಬಂಧನ

Suddi Udaya

ಕುವೆಟ್ಟು: ದಿ| ಪ್ರಭಾಕರ ಶೆಣೈರವರ ಪತ್ನಿ ವಿದ್ಯಾವತಿ ನಿಧನ

Suddi Udaya

ಕೊಕ್ಕಡ: ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!