25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಆಚರಣೆ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅಂಗಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ವಿಜ್ಞಾನ ಸಂಘದ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನವನ್ನು ಬಹಳ ವಿಶಿಷ್ಟ ರೀತಿಯಲ್ಲಿ, ಅರ್ಥಪೂರ್ಣವಾಗಿ ಆಚರಿಸಲಾಯಿತು.

ರಾಷ್ಟ್ರೀಯ ವಿಜ್ಞಾನ ದಿನದ ವಿಶೇಷ ಪ್ರತಿಜ್ಞಾವಿಧಿ ಮತ್ತು ರಾಷ್ಟ್ರೀಯ ವಿಜ್ಞಾನ ದಿನದ ಮಹತ್ವದ ಕುರಿತು ವಿಚಾರ ಮಂಡನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಿಜ್ಞಾನಕ್ಕೆ ಸಂಬಂಧಪಟ್ಟ ವಿಶಿಷ್ಟವಾದ ರಂಗೋಲಿ, ಭಿತ್ತಿ ಪತ್ರಗಳನ್ನು ರಚಿಸಲಾಗಿತ್ತು. ವಿವಿಧ ತರಗತಿಯ ಮಕ್ಕಳಿಗೆ ವಿಜ್ಞಾನದ ಕುರಿತ ಪದಬಂಧ, ಚಿತ್ರಕಲಾ ಸ್ಪರ್ಧೆ, ವಿಜ್ಞಾನ ರಸಪ್ರಶ್ನೆ , ವಿಜ್ಞಾನ ಹಾಗೂ ಗಣಿತದ ಮಾದರಿಗಳ ತಯಾರಿಕೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

ಸಂಜೆಯ ಅಸೆಂಬ್ಲಿಯಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿಯವರಾದ ಶ್ರೀಮತಿ ಪರಿಮಳ ಎಮ್.ವಿ ಇವರು ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು. ಶಿಕ್ಷಕಿಯರಾದ ಶ್ರೀಮತಿ ಅನುಷಾ ಮತ್ತು ಶ್ರೀಮತಿ ಅಂಜು ರೂಪುಗೊಳಿಸಿದ ಕಾರ್ಯಕ್ರಮದಲ್ಲಿ ಎಲ್ಲ ವಿಜ್ಞಾನ ಹಾಗೂ ಗಣಿತ ಶಿಕ್ಷಕರು ಪಾಲ್ಗೊಂಡಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ಪಟು ಕು. ತನುಶ್ರೀ ರವರಿಂದ ಯೋಗ ಪ್ರದರ್ಶನ

Suddi Udaya

ಗುರುವಾಯನಕೆರೆ ಮಂಜುಬೆಟ್ಟುವಿನಲ್ಲಿ ಎಫ್.ಎಮ್ ಗಾರ್ಡನ್ & ಕನ್ವೆನ್ಶನ್ ಎ.ಸಿ ಸಭಾಂಗಣ ಉದ್ಘಾಟನೆ

Suddi Udaya

ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ಫ್ರೆಶರ್ಸ್ ಡೇ, ವಿದ್ಯಾರ್ಥಿ ಪರಿಷತ್ ಉದ್ಘಾಟನೆ ಹಾಗೂ ಪ್ರತಿಭಾ ಸನ್ಮಾನ

Suddi Udaya

ಬೆಳ್ತಂಗಡಿ ಜ್ಯೋತಿ ಹಾಸ್ಪಿಟಲ್ ವತಿಯಿಂದ ನಾರಾವಿಯ ಕುತ್ಲೂರಿನಲ್ಲಿ ಕ್ಯಾನ್ಸರ್ ತಪಾಸಣಾ ಶಿಬಿರ

Suddi Udaya

ಕೊಕ್ಕಡ ಹಿಂದೂ ಸಂಗಮ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!