23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಆಚರಣೆ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅಂಗಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ವಿಜ್ಞಾನ ಸಂಘದ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನವನ್ನು ಬಹಳ ವಿಶಿಷ್ಟ ರೀತಿಯಲ್ಲಿ, ಅರ್ಥಪೂರ್ಣವಾಗಿ ಆಚರಿಸಲಾಯಿತು.

ರಾಷ್ಟ್ರೀಯ ವಿಜ್ಞಾನ ದಿನದ ವಿಶೇಷ ಪ್ರತಿಜ್ಞಾವಿಧಿ ಮತ್ತು ರಾಷ್ಟ್ರೀಯ ವಿಜ್ಞಾನ ದಿನದ ಮಹತ್ವದ ಕುರಿತು ವಿಚಾರ ಮಂಡನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಿಜ್ಞಾನಕ್ಕೆ ಸಂಬಂಧಪಟ್ಟ ವಿಶಿಷ್ಟವಾದ ರಂಗೋಲಿ, ಭಿತ್ತಿ ಪತ್ರಗಳನ್ನು ರಚಿಸಲಾಗಿತ್ತು. ವಿವಿಧ ತರಗತಿಯ ಮಕ್ಕಳಿಗೆ ವಿಜ್ಞಾನದ ಕುರಿತ ಪದಬಂಧ, ಚಿತ್ರಕಲಾ ಸ್ಪರ್ಧೆ, ವಿಜ್ಞಾನ ರಸಪ್ರಶ್ನೆ , ವಿಜ್ಞಾನ ಹಾಗೂ ಗಣಿತದ ಮಾದರಿಗಳ ತಯಾರಿಕೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

ಸಂಜೆಯ ಅಸೆಂಬ್ಲಿಯಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿಯವರಾದ ಶ್ರೀಮತಿ ಪರಿಮಳ ಎಮ್.ವಿ ಇವರು ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು. ಶಿಕ್ಷಕಿಯರಾದ ಶ್ರೀಮತಿ ಅನುಷಾ ಮತ್ತು ಶ್ರೀಮತಿ ಅಂಜು ರೂಪುಗೊಳಿಸಿದ ಕಾರ್ಯಕ್ರಮದಲ್ಲಿ ಎಲ್ಲ ವಿಜ್ಞಾನ ಹಾಗೂ ಗಣಿತ ಶಿಕ್ಷಕರು ಪಾಲ್ಗೊಂಡಿದ್ದರು.

Related posts

ಉದಯವಾಣಿ ಪತ್ರಿಕೆಯ ಮಡಂತ್ಯಾರು ವಲಯದ ಬಿಡಿ ವರದಿಗಾರ ರಾಗಿ ಕೆ.ಎನ್ ಗೌಡ ನೇಮಕ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಇಲOತಿಲ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ

Suddi Udaya

ಧರ್ಮಸ್ಥಳ ಶ್ರೀ ಧ ಮ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಸಂಚಾರಿ ಪೊಲೀಸರಿಂದ ವಾಹನಗಳ ಎಲ್‌ಇಡಿ ಬಲ್ಬ್ ತೆರವು ಕಾರ್ಯಾಚರಣೆ

Suddi Udaya

ಬರೆಂಗಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಯಕ್ಷಸಂಭ್ರಮ ಉದ್ಘಾಟನೆ: ನಾಲ್ವರು ಯಕ್ಷಗಾನ ತರಬೇತಿ ಗುರುಗಳಿಗೆ ಗೌರವಾರ್ಪಣೆ: 8 ಶಾಲೆಗಳು 480 ಯಕ್ಷ ವಿದ್ಯಾರ್ಥಿಗಳಿಂದ ಯಕ್ಷಗಾನ ರಂಗಪ್ರವೇಶ

Suddi Udaya
error: Content is protected !!