22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಆಚರಣೆ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅಂಗಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ವಿಜ್ಞಾನ ಸಂಘದ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನವನ್ನು ಬಹಳ ವಿಶಿಷ್ಟ ರೀತಿಯಲ್ಲಿ, ಅರ್ಥಪೂರ್ಣವಾಗಿ ಆಚರಿಸಲಾಯಿತು.

ರಾಷ್ಟ್ರೀಯ ವಿಜ್ಞಾನ ದಿನದ ವಿಶೇಷ ಪ್ರತಿಜ್ಞಾವಿಧಿ ಮತ್ತು ರಾಷ್ಟ್ರೀಯ ವಿಜ್ಞಾನ ದಿನದ ಮಹತ್ವದ ಕುರಿತು ವಿಚಾರ ಮಂಡನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಿಜ್ಞಾನಕ್ಕೆ ಸಂಬಂಧಪಟ್ಟ ವಿಶಿಷ್ಟವಾದ ರಂಗೋಲಿ, ಭಿತ್ತಿ ಪತ್ರಗಳನ್ನು ರಚಿಸಲಾಗಿತ್ತು. ವಿವಿಧ ತರಗತಿಯ ಮಕ್ಕಳಿಗೆ ವಿಜ್ಞಾನದ ಕುರಿತ ಪದಬಂಧ, ಚಿತ್ರಕಲಾ ಸ್ಪರ್ಧೆ, ವಿಜ್ಞಾನ ರಸಪ್ರಶ್ನೆ , ವಿಜ್ಞಾನ ಹಾಗೂ ಗಣಿತದ ಮಾದರಿಗಳ ತಯಾರಿಕೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

ಸಂಜೆಯ ಅಸೆಂಬ್ಲಿಯಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿಯವರಾದ ಶ್ರೀಮತಿ ಪರಿಮಳ ಎಮ್.ವಿ ಇವರು ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು. ಶಿಕ್ಷಕಿಯರಾದ ಶ್ರೀಮತಿ ಅನುಷಾ ಮತ್ತು ಶ್ರೀಮತಿ ಅಂಜು ರೂಪುಗೊಳಿಸಿದ ಕಾರ್ಯಕ್ರಮದಲ್ಲಿ ಎಲ್ಲ ವಿಜ್ಞಾನ ಹಾಗೂ ಗಣಿತ ಶಿಕ್ಷಕರು ಪಾಲ್ಗೊಂಡಿದ್ದರು.

Related posts

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಚಾಲನೆ: ಗೊನೆ ಮುಹೂರ್ತ, ತೋರಣ ಮುಹೂರ್ತ, ನವಕಕಲಶ, ಧ್ವಜಾರೋಹಣ

Suddi Udaya

ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಗೆ ರೂ.31 ಸಾವಿರ ಹಸ್ತಾಂತರ

Suddi Udaya

ಅಳದಂಗಡಿ ಪ.ಪೂ. ಕಾಲೇಜಿನಲ್ಲಿ ನೂತನ ವಿಜ್ಞಾನ ಪ್ರಯೋಗಾಲಯ ಕೊಠಡಿ ಮತ್ತು ಇತರ ಮೂಲಭೂತ ಸೌಕರ್ಯಗಳ ಉದ್ಘಾಟನೆ

Suddi Udaya

ಎ.10-14: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಉಜಿರೆ : ಶ್ರೀ ಧ.ಮಂ. ಕಾಲೇಜಿನ ಸ್ವಚ್ಛತಾ ಸಿಬ್ಬಂದಿಗೆ ಬೀಳ್ಕೊಡುಗೆ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya
error: Content is protected !!