April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅರಸಿನಮಕ್ಕಿಯಲ್ಲಿ ಫೆ.28 ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಯಿತು.

ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಸೀತಾರಾಮ ಗೌಡ ಕೆ. ಅಲಂಕರಿಸಿದರು. ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿಗಳಾದ ಜಯರಾಜ್ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿಜ್ಞಾನ ದಿನದ ಪ್ರತಿಜ್ಞೆಯನ್ನು ಬೋಧಿಸಿ, ವಿಜ್ಞಾನ ಮತ್ತು ಗಣಿತ ಜೀವನದಲ್ಲಿ ಹೇಗೆ ಹಾಸುಹೊಕ್ಕಾಗಿದೆ ಎಂದು ಕಥೆಯ ಮೂಲಕ ವಿವರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಪಂಚಾಯತ್ ನ ಸಿಬ್ಬಂದಿಗಳಾದ ಶ್ರೀಮತಿ ವಿಂಧ್ಯಾ, ಉಮೇಶ್, ಗ್ರಂಥಾಲಯ ಪಾಲಕಿ ಶ್ರೀಮತಿ ಮಮತಾ ವೇದಿಕೆಯಲ್ಲಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವಿದ್ಯಾರ್ಥಿಗಳು ವಿಜ್ಞಾನದ ವಿವಿಧ ಮಾದರಿಗಳನ್ನು ಉತ್ತಮವಾಗಿ ಪ್ರದರ್ಶಿದರು. ಶಿಕ್ಷಕಿಯರಾದ ದಿವ್ಯಶ್ರೀ, ವಿದ್ಯಾಲಕ್ಷ್ಮಿ ಹೇಮಾವತಿ, ಸಂಧ್ಯಾ, ಸ್ವಾತಿ ಯವರು ವಿದ್ಯಾರ್ಥಿಗಳಿಗೆ ಸೂಕ್ತ ಸಲಹೆ ಸೂಚನೆ ನೀಡಿದರು.

Related posts

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಶುಭಮಸ್ತು” ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಶ್ರೀ ಕ್ಷೇತ್ರ ಧರ್ಮಸ್ಥಳ ಧಮಾ೯ಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಡಾ.ಗುರುರಾಜ ಕರ್ಜಗಿಯವರಿಂದ ಸರ್ವಧರ್ಮ ಸಮ್ಮೇಳನ 91ನೇ ಅಧಿವೇಶನ ಉದ್ಘಾಟನೆ

Suddi Udaya

ನಡ ಗ್ರಾಮದಲ್ಲಿ ಸನ್‌ರಾಕ್ ಬಲಿಪ ರೆಸಾರ್ಟ್ ಶುಭಾರಂಭ

Suddi Udaya

ಚಿರಂಜೀವಿ ಶೆಟ್ಟಿ ನಾಳ ನಿರ್ಮಾಣದ ‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆ ಬಿಡುಗಡೆ

Suddi Udaya

ಪಬ್ಲಿಕ್ ಪರೀಕ್ಷೆ : ಉಣ್ಣಾಲು , ಕೊಯ್ಯೂರು ಸಿರಾಜುಲ್ ಹುದಾ ಅರೇಬಿಕ್ ಸ್ಕೂಲ್ ವಿದ್ಯಾರ್ಥಿ ನೂರುನ್ನಿಸಾ ರಾಷ್ಟ್ರ ಮಟ್ಟದಲ್ಲಿ ಪ್ರಥಮ ರ್‍ಯಾಂಕ್: ಉಣ್ಣಾಲು ಕೊಯ್ಯೂರು ಮದರಸಕ್ಕೆ ಶೇಕಡಾ 100 ಫಲಿತಾಂಶ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಯು ಶೇಪ್ ವಾಕರ್ ವಿತರಣೆ

Suddi Udaya
error: Content is protected !!