32.5 C
ಪುತ್ತೂರು, ಬೆಳ್ತಂಗಡಿ
March 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉರುವಾಲು ಶ್ರೀ ಭಾರತೀ ಆ.ಮಾ. ಪ್ರೌಢ ಶಾಲೆ ಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

ಉರುವಾಲು: ಇಲ್ಲಿನ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಯಲ್ಲಿ ಫೆ.28 ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಯಿತು.ಈ ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ.ಆರ್ ಇವರು ಉದ್ಘಾಟಿಸಿ, ವಿಜ್ಞಾನ ದಿನವನ್ನು ಆಚರಿಸುವ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಮಾಹಿತಿ ಹಂಚಿಕೊಂಡರು ಅಲ್ಲದೆ ಭಾರತೀಯ ಹಲವು ಶ್ರೇಷ್ಠ ಸಾಧಕ ವಿಜ್ಞಾನಿಗಳ ಬಗ್ಗೆ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿಜ್ಞಾನ ವಿಷಯ ಶಿಕ್ಷಕಿಯರಾದ ರಕ್ಷಿತಾ ಹಾಗೂ ಅಂಜಲಿ ಇವರು ಆಧುನಿಕ ಜಗತ್ತಿನಲ್ಲಿ ವಿಜ್ಞಾನದ ಮಹತ್ವ ಹಾಗೂ ಅವಶ್ಯಕತೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ 5, 6 ಹಾಗೂ 7 ನೇಯ ತರಗತಿ ವಿದ್ಯಾರ್ಥಿಗಳು ಸ್ವತಃ ತಾವೇ ಸಿದ್ಧಪಡಿಸಿದ ಹಲವು ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಿ, ಅದರ ಬಗ್ಗೆ ಉತ್ತಮ ಮಾಹಿತಿ ನೀಡಿದರು.

Related posts

ಯಶೋವರ್ಮರವರ ಜನ್ಮದಿನದ ಪ್ರಯುಕ್ತ ಎಸ್‌ಡಿಎಂ ಬಿವೋಕ್ ವಿಭಾಗದ ವತಿಯಿಂದ ವಿವಿಧ ಕಾರ್ಯಕ್ರಮ

Suddi Udaya

ಕುತ್ಲೂರು ಸ.ಉ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಪ್ರಯುಕ್ತ ಹಳೆ ವಿದ್ಯಾರ್ಥಿಗಳಿಂದ ಮಕ್ಕಳಿಗೆ ಐಡಿ ಕಾರ್ಡ್ ಮತ್ತು ಪ್ರೋತ್ಸಾಹ ಧನ ವಿತರಣೆ

Suddi Udaya

ಮಾರಾಟ ತೆರಿಗೆ ಹೆಚ್ಚಿಸಿ ಪೆಟ್ರೋಲ್ ಡೀಸಿಲ್ ದರ ಏರಿಸಿದ‌ ರಾಜ್ಯದ ಕಾಂಗ್ರೇಸ್ ಸರಕಾರದ ನಡೆ ಖಂಡನೀಯ ಸಿಪಿಐಎಂ ಬೆಳ್ತಂಗಡಿ ತಾಲೂಕು ಮುಖಂಡ ನ್ಯಾಯವಾದಿ ಬಿ.ಎಂ.ಭಟ್

Suddi Udaya

ಮುಂಡಾಜೆ: ಚಾಮುಂಡಿನಗರ ಸ.ಕಿ.ಪ್ರಾ. ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳದಲ್ಲಿ25ನೇ ವರ್ಷದ ಭಜನಾ ತರಬೇತಿ ಕಮ್ಮಟ: ಮಂಡ್ಯ ಜಿಲ್ಲೆಯ ಆರತಿಪುರದ ಸಿದ್ಧಾಂತಕೀರ್ತಿ ಸ್ವಾಮೀಜಿಯವರಿಂದ ಉದ್ಘಾಟನೆ: ಧಮ೯ಸ್ಥಳದ ಧಮಾ೯ಧಿಕಾರಿ ಡಾ.ಹೆಗ್ಗಡೆ, ಮಣಿಲಶ್ರೀ ಉಪಸ್ಥಿತಿ: 115 ಭಜನಾ ಮಂಡಳಿಗಳ 202 ಮಂದಿ ಶಿಬಿರಾಥಿ೯ಗಳು ಭಾಗಿ

Suddi Udaya

ಮದ್ದಡ್ಕ ವಿ.ಹಿಂ.ಪ. ಭಜರಂಗದಳ ಘಟಕದಿಂದ ಅನಾರೋಗ್ಯ ಪಿಡೀತರಿಗೆ ಆರ್ಥಿಕ ನೆರವು

Suddi Udaya
error: Content is protected !!