September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉರುವಾಲು ಶ್ರೀ ಭಾರತೀ ಆ.ಮಾ. ಪ್ರೌಢ ಶಾಲೆ ಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

ಉರುವಾಲು: ಇಲ್ಲಿನ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಯಲ್ಲಿ ಫೆ.28 ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಯಿತು.ಈ ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ.ಆರ್ ಇವರು ಉದ್ಘಾಟಿಸಿ, ವಿಜ್ಞಾನ ದಿನವನ್ನು ಆಚರಿಸುವ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಮಾಹಿತಿ ಹಂಚಿಕೊಂಡರು ಅಲ್ಲದೆ ಭಾರತೀಯ ಹಲವು ಶ್ರೇಷ್ಠ ಸಾಧಕ ವಿಜ್ಞಾನಿಗಳ ಬಗ್ಗೆ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿಜ್ಞಾನ ವಿಷಯ ಶಿಕ್ಷಕಿಯರಾದ ರಕ್ಷಿತಾ ಹಾಗೂ ಅಂಜಲಿ ಇವರು ಆಧುನಿಕ ಜಗತ್ತಿನಲ್ಲಿ ವಿಜ್ಞಾನದ ಮಹತ್ವ ಹಾಗೂ ಅವಶ್ಯಕತೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ 5, 6 ಹಾಗೂ 7 ನೇಯ ತರಗತಿ ವಿದ್ಯಾರ್ಥಿಗಳು ಸ್ವತಃ ತಾವೇ ಸಿದ್ಧಪಡಿಸಿದ ಹಲವು ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಿ, ಅದರ ಬಗ್ಗೆ ಉತ್ತಮ ಮಾಹಿತಿ ನೀಡಿದರು.

Related posts

ಬೆಳಾಲು ಗೌಡರ ಯಾನೆ ಒಕ್ಕಲಿಗರ ವಾರ್ಷಿಕೋತ್ಸವ

Suddi Udaya

ಶಿಶಿಲ: ಆನೆ ದಾಳಿ ಬಗ್ಗೆ ಗ್ರಾಮಸ್ಥರು ಕೈಗೊಳ್ಳಬಹುದಾದ ಮುನ್ನೆಚ್ಚರಿಕೆ ಕ್ರಮಗಳ ಮಾಹಿತಿ ಕಾರ್ಯಾಗಾರ

Suddi Udaya

ಧರ್ಮಸ್ಥಳ ಡಿ ಹರ್ಷೇಂದ್ರ ಕುಮಾರ್ ರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಕನ್ಯಾಡಿ ಗಣೇಶೋತ್ಸವ ಸಮಿತಿ

Suddi Udaya

ಸೆ 29 : ತೋಟತ್ತಾಡಿ 9ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ

Suddi Udaya

ಬೆಳ್ತಂಗಡಿ: “ಗೃಹಜ್ಯೋತಿ ಹೆಚ್ಚುವರಿ ಮಾಹಿತಿ ಸಂಗ್ರಹಣೆಯ” ಪ್ರಗತಿ ಸಭೆ

Suddi Udaya

ಮಚ್ಚಿನ: ಪ.ಜಾತಿ, ಪ. ಪಂಗಡ ಮತ್ತು ವಿಶೇಷ ಚೇತನರ ಫಲಾನುಭವಿಗಳಿಗೆ ಸಿಂಟೆಕ್ಸ್ ಮತ್ತು ವೀಲ್ ಚೇರ್ ವಿತರಣೆ

Suddi Udaya
error: Content is protected !!