23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕಲಿಕಾ ಹಬ್ಬ

ಕುವೆಟ್ಟು: ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುವೆಟ್ಟು ಗುರುವಾಯನಕೆರೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಫೆ.28 ರಂದು ಜರುಗಿತು.


ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಕಲಿಕಾ ಹಬ್ಬವನ್ನು ಉದ್ಘಾಟಿಸಿ ಶುಭ ಹಾರೈಸಿದರು.‌
ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಶ್ರೀಮತಿ ಲಾವಣ್ಯ ಶೆಟ್ಟಿ ಅರ್ಕಜೆ, ಸದಸ್ಯರುಗಳಾದ ಯೋಗೀಶ್ ಕುಮಾರ್, ಶ್ರೀಧರ್ ಕುಲಾಲ್, ಸಮೀರ್, ಗುರುವಾಯನಕೆರೆ ಸಿ ಆರ್ ಪಿ ರಾಜೇಶ್, ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್, ಶಾಲಾ ನಾಯಕಿ ಕುಮಾರಿ ಶಿವಾನಿ ಮತ್ತಿತರರು ಉಪಸ್ಥಿತರಿದ್ದರು.


ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಹಾಗೂ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನ ನೀಡಿ ಗೌರವಿಸಲಾಯಿತು.


ಬೆಳ್ತಂಗಡಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ, ಬೆಳ್ತಂಗಡಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀಮತಿ ಸುಜಯ, ಬೆಳ್ತಂಗಡಿ ತಾಲೂಕಿನ ಶಿಕ್ಷಣ ಸಂಯೋಜಕರಾದ ಸಿದ್ದಲಿಂಗಸ್ವಾಮಿ ಆಗಮಿಸಿ ಶುಭ ಹಾರೈಸಿದರು.
ಗುರುವಾಯನಕೆರೆ ಕ್ಲಸ್ಟರ್ ಸಿ ಆರ್ ಪಿ ರಾಜೇಶ್ ಸ್ವಾಗತಿಸಿ ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್ ಧನ್ಯವಾದ ಸಲ್ಲಿಸಿ, ಶಿಕ್ಷಕಿ ಶಶಿಕಲಾ ಕಾರ್ಯಕ್ರಮ ನಿರೂಪಿಸಿ, ಅಧ್ಯಾಪಕ ವೃಂದ ಹಾಗೂ ಎಸ್ ಡಿ ಎಂ ಸಿ ಸದಸ್ಯರು ಸಹಕಾರ ನೀಡಿದರು.

Related posts

ರಾಜ್ಯ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ: ಎಸ್.ಡಿ.ಎಂ. ವಿದ್ಯಾರ್ಥಿಗೆ ಪ್ರಶಂಸಾ ಪ್ರಮಾಣಪತ್ರ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ವತಿಯಿಂದ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಸಹಭಾಗಿತ್ವದಲ್ಲಿ ಯಶೋವನ ಭೇಟಿ ಕಾರ್ಯಕ್ರಮ

Suddi Udaya

ಶಿಬಾಜೆ: ತುಂಬತ್ತಾಜೆ ನಿವಾಸಿ ಲೀಲಮ್ಮ ನಿಧನ

Suddi Udaya

ಮಿತ್ತಬಾಗಿಲು ಗ್ರಾ.ಪಂ. ನ ವಿಶೇಷ ಗ್ರಾಮಸಭೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಹತ್ಯಡ್ಕ: ಕಾಂಗ್ರೆಸ್ ಬೂತ್ ಕಾರ್ಯಕರ್ತರ ಸಭೆ

Suddi Udaya

ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ, ಎಸ್.ಡಿ.ಪಿ.ಐ ನಿಯೋಗ ಭೇಟಿ

Suddi Udaya
error: Content is protected !!