September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕಲಿಕಾ ಹಬ್ಬ

ಕುವೆಟ್ಟು: ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುವೆಟ್ಟು ಗುರುವಾಯನಕೆರೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಫೆ.28 ರಂದು ಜರುಗಿತು.


ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಕಲಿಕಾ ಹಬ್ಬವನ್ನು ಉದ್ಘಾಟಿಸಿ ಶುಭ ಹಾರೈಸಿದರು.‌
ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಶ್ರೀಮತಿ ಲಾವಣ್ಯ ಶೆಟ್ಟಿ ಅರ್ಕಜೆ, ಸದಸ್ಯರುಗಳಾದ ಯೋಗೀಶ್ ಕುಮಾರ್, ಶ್ರೀಧರ್ ಕುಲಾಲ್, ಸಮೀರ್, ಗುರುವಾಯನಕೆರೆ ಸಿ ಆರ್ ಪಿ ರಾಜೇಶ್, ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್, ಶಾಲಾ ನಾಯಕಿ ಕುಮಾರಿ ಶಿವಾನಿ ಮತ್ತಿತರರು ಉಪಸ್ಥಿತರಿದ್ದರು.


ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಹಾಗೂ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನ ನೀಡಿ ಗೌರವಿಸಲಾಯಿತು.


ಬೆಳ್ತಂಗಡಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ, ಬೆಳ್ತಂಗಡಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀಮತಿ ಸುಜಯ, ಬೆಳ್ತಂಗಡಿ ತಾಲೂಕಿನ ಶಿಕ್ಷಣ ಸಂಯೋಜಕರಾದ ಸಿದ್ದಲಿಂಗಸ್ವಾಮಿ ಆಗಮಿಸಿ ಶುಭ ಹಾರೈಸಿದರು.
ಗುರುವಾಯನಕೆರೆ ಕ್ಲಸ್ಟರ್ ಸಿ ಆರ್ ಪಿ ರಾಜೇಶ್ ಸ್ವಾಗತಿಸಿ ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್ ಧನ್ಯವಾದ ಸಲ್ಲಿಸಿ, ಶಿಕ್ಷಕಿ ಶಶಿಕಲಾ ಕಾರ್ಯಕ್ರಮ ನಿರೂಪಿಸಿ, ಅಧ್ಯಾಪಕ ವೃಂದ ಹಾಗೂ ಎಸ್ ಡಿ ಎಂ ಸಿ ಸದಸ್ಯರು ಸಹಕಾರ ನೀಡಿದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಬಹುಮಾನ ವಿತರಣಾ ದಿನ”

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಧ್ಯಕ್ಷತೆ ಮತ್ತು ಸಂಸದೀಯ ಕಾರ್ಯವಿಧಾನಗಳ ತರಬೇತಿ ಕಾರ್ಯಾಗಾರ

Suddi Udaya

ಉಜಿರೆಯಲ್ಲಿ “ಖಿಯಾದ” ಎಸ್.ಎಸ್. ಎಫ್ ರಾಜ್ಯ ಪ್ರತಿನಿಧಿ ಸಮಾವೇಶ

Suddi Udaya

ಅಳದಂಗಡಿ ಬೆಟ್ಟದ ಬಸದಿ ಅಭಿವೃದ್ಧಿಯ ಕಾರ್ಯಕ್ಕೆ ಸರಕಾರದಿಂದ ರೂ. 50ಲಕ್ಷ ಮಂಜೂರು ಸಹಕರಿಸಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರಿಗೆ ಆಡಳಿತ ಮಂಡಳಿಯಿಂದ ಗೌರವ

Suddi Udaya

ಹಾಸನ ಮೂಲದ ವ್ಯಕ್ತಿ ಚಾರ್ಮಾಡಿ ಘಾಟ್ ನಲ್ಲಿ ಆತ್ಮಹತ್ಯೆಗೆ ಯತ್ನ: ಜೀವ ಉಳಿಸಿದ ಪೊಲೀಸರು

Suddi Udaya

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಿಗೆ ಷೂ ಎಸೆದ ಪ್ರಕರಣ ತನಿಖೆ ನಡೆಸಿ ಆರೋಪಿಯ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿ: ರಕ್ಷಿತ್ ಶಿವರಾಂ

Suddi Udaya
error: Content is protected !!