25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಗತಿಯ ಸಮಾರೋಪ ಸಮಾರಂಭ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷಗಾನ ತರಗತಿಯ ಸಮಾರೋಪ ಸಮಾರಂಭ ಮಾ.1ರಂದು ನಡೆಯಿತು.


ಯಕ್ಷಗಾನ ಗುರುಗಳಾದ ಲಕ್ಷ್ಮಣ ಗೌಡ ಇವರು ಮಕ್ಕಳನ್ನು ಕುರಿತು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕಲೆಯನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕು. ನೀವು ಯಾವುದೇ ಉದ್ಯೋಗವನ್ನು ಹೊಂದಿರಬಹುದು ಆದರೆ ನೀವು ಕಲಿತ ಈ ಯಕ್ಷಗಾನ ವಿದ್ಯೆಯನ್ನು ಮರೆಯಬೇಡಿ. ನೀವೆಲ್ಲರೂ ಸತ್ಪ್ರಜೆಯಾಗಿ ಬಾಳಿ ಬದುಕಿ ಎಂದು ಶುಭ ಹಾರೈಸಿದರು.


ಹಿರಿಯ ಶಿಕ್ಷಕ ಜೋಸೆಫ್ ರವರು ಮಾತನಾಡಿ ಯಕ್ಷಗಾನ ಒಂದು ವಿಶೇಷ ಕಲೆ . ಎಲ್ಲಾ ಕಲೆಗಳ ಹಿರಿಯ ಕಲೆಯಾಗಿದೆ. ವಿದ್ಯಾರ್ಥಿಗಳಾದ ನೀವು ತಂದೆ ತಾಯಿ ದೇವರನ್ನು ಪ್ರೀತಿಸಬೇಕು. ಇತರರನ್ನು ಪ್ರೀತಿಸುವ ಗುಣವನ್ನು ಹೊಂದಿರಬೇಕು ಎಂದು ಹೇಳಿದರು.
ಯಕ್ಷಗಾನ ತರಗತಿಯ ಮಕ್ಕಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಕಾರ್ಯಕ್ರಮವನ್ನು ಶಿಕ್ಷಕ ಶೇಖರ್ ಗೌಡ ನಿರ್ವಹಿಸಿ, ಸಂಜೀವ ಕೆ ಸ್ವಾಗತಿಸಿ, ಶ್ರೀಮತಿ ಪೂರ್ಣಿಮಾ ವಂದಿಸಿದರು .

Related posts

ಅಂಡಿಂಜೆ: 31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಆರ್ಯಭಟ ಪ್ರಶಸ್ತಿ ಪುರಸ್ಕೃತ ದೇವೇಂದ್ರ ಹೆಗ್ಡೆ ಕೊಕ್ರಾಡಿ ರವರಿಗೆ ಸನ್ಮಾನ

Suddi Udaya

ಉಜಿರೆ ಹೆಗ್ಡೆ ಮೆಡಿಕಲ್ ವತಿಯಿಂದ ಆರ್ಥಿಕ ಸಂಕಷ್ಟಗೊಳಗಾದವರಿಗೆ ಉಚಿತ ಔಷಧಿ

Suddi Udaya

ಬೆಳ್ತಂಗಡಿ‌ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ಸಾಮಾಜಿಕ ನ್ಯಾಯದ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ 109ನೇ ಜನ್ಮದಿನಾಚರಣೆ: 36 ಮಂದಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Suddi Udaya

ರಾಜ್ಯಾದಾದ್ಯಂತ ಬಾಂಬೆ ಮಿಠಾಯಿ ನಿಷೇಧ: ಆರೋಗ್ಯ ಸಚಿವರಿಂದ ಅಧಿಕೃತ ಆದೇಶ – ಇನ್ಮುಂದೆ ಮಾರಾಟ ಮಾಡಿದ್ರೆ ದಂಡ, ಜೈಲು ಶಿಕ್ಷೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವರಿಗೆ ಸಹಸ್ರ ಸೀಯಾಳಾಭಿಷೇಕ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ

Suddi Udaya
error: Content is protected !!