July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು : ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಬಂದಾರು : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಶ್ರಯದಲ್ಲಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಮೈರೋಳ್ತಡ್ಕ ಬಂದಾರು ಇಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮ ಭಾಗವಾಗಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯು ಫೆ 28ರಂದು ನೆರವೇರಿತು.


ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀ.ಧ.ಮಂ.ಪ್ರೌಢ ಶಾಲಾ ನಿವೃತ್ತ ಶಿಕ್ಷಕ ರಾಮಕೃಷ್ಣ ಚೊಕ್ಕಾಡಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸಿ.ವಿ.ರಾಮನ್ ಅವರ ವೈಜ್ಞಾನಿಕ ಸಂಶೋಧನೆ, ಸಾಧನೆಗಳನ್ನು ತಿಳಿಸಿ ವಿದ್ಯಾರ್ಥಿಗಳು ದಿನನಿತ್ಯ ಜೀವನದಲ್ಲಿ ಅನೇಕ ವೈಜ್ಞಾನಿಕ ಕಲಿಕೆಗಳಿಗೆ ಅವಕಾಶಗಳಿವೆ ಅವುಗಳಿಂದ ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಂಡು ವಿಜ್ಞಾನ ಕ್ಷೇತ್ರದಲ್ಲಿ ಸಾಧನೆಗಳನ್ನು ಮಾಡಿ ಭವಿಷ್ಯದಲ್ಲಿ ಸಂಶೋಧನೆಗಳ ಮೂಲಕ ವಿಜ್ಞಾನಿಗಳಾಗಿ ದೇಶದ ಸಂಪತ್ತುಗಳಾಗಬೇಕು ಎಂದು ಶುಭ ಹಾರೈಸಿದರು.

ನಿವೃತ್ತ ಶಿಕ್ಷಕಿ ರೇವತಿ ಅನಾಬೆ, ಕೃಷ್ಣಯ್ಯ ಆಚಾರ್ಯ, ಗ್ರಾ.ಪಂ. ಅಧ್ಯಕ್ಷ ದಿನೇಶ್ ಖಂಡಿಗ ಶುಭ ಹಾರೈಸಿದರು.
ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗುರುಪ್ರಸಾದ್ , ಎಸ್.ಡಿ.ಎಂ.ಸಿ. ಅಧ್ಯಕ್ಷ ಪ್ರಶಾಂತ್ ನಿರುಂಬುಡ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಹ ಶಿಕ್ಷಕಿ ರಾಜಶ್ರೀ ಪಿ.ವಿ. ಕಾರ್ಯಕ್ರಮ ನಿರೂಪಿಸಿ ಸಹ ಶಿಕ್ಷಕ ಶ್ರೀಧರ್ ಸ್ವಾಗತಿಸಿದರು. ಎಸ್.ಡಿ.ಎಂಸಿ.ಸದಸ್ಯರು, ವಿದ್ಯಾರ್ಥಿಗಳು, ಪೋಷಕರು ಶಿಕ್ಷಕ ವೃಂದ ಪಾಲ್ಗೊಂಡರು.


ವಿದ್ಯಾರ್ಥಿಗಳು ತಾವು ವಿವಿಧ ಪರಿಕರಗಳಿಂದ ತಯಾರಿಸಿದ ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಿದರು. ಸಹ ಶಿಕ್ಷಕಿ ರಾಜಶ್ರೀ ಪಿ.ವಿ. ಕಾರ್ಯಕ್ರಮ ನಿರೂಪಿಸಿ ಸಹ ಶಿಕ್ಷಕ ಶ್ರೀಧರ್ ಸ್ವಾಗತಿಸಿದರು. ಎಸ್.ಡಿ.ಎಂಸಿ. ಸದಸ್ಯರು, ವಿದ್ಯಾರ್ಥಿಗಳು, ಪೋಷಕರು ಶಿಕ್ಷಕ ವೃಂದ ಪಾಲ್ಗೊಂಡರು. ವಿದ್ಯಾರ್ಥಿಗಳು ತಾವು ವಿವಿಧ ಪರಿಕರಗಳಿಂದ ತಯಾರಿಸಿದ ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಿದರು.

Related posts

ಸಿಇಟಿ ಫಲಿತಾಂಶ : ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳಿಗೆ ಅತ್ಯುತ್ತಮ ರ‍್ಯಾಂಕ್

Suddi Udaya

ಡಿ.3: ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ ಆಶ್ರಯದಲ್ಲಿ ಬಂಟೋತ್ಸವ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಶೈಕ್ಷಣಿಕ ಸಮ್ಮೇಳನ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಹೊರಾಂಗಣಕ್ಕೆ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ರೂ.9 ಲಕ್ಷ ವೆಚ್ಚದಲ್ಲಿ ಹಾಸುಕಲ್ಲು ಸಮರ್ಪಣೆ

Suddi Udaya

ನಡ: ಸಿಡಿಲು ಬಡಿದು 2 ವರ್ಷದ ಮಗು ಅಸ್ವಸ್ತ

Suddi Udaya
error: Content is protected !!