24.1 C
ಪುತ್ತೂರು, ಬೆಳ್ತಂಗಡಿ
March 3, 2025
ಗ್ರಾಮಾಂತರ ಸುದ್ದಿ

ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ನವೀಕೃತ ಕೊಠಡಿಯ ಉದ್ಘಾಟನಾ ಸಮಾರಂಭವು

ಇಂದಬೆಟ್ಟು : ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ನವೀಕೃತ ಕೊಠಡಿಯ ಉದ್ಘಾಟನಾ ಸಮಾರಂಭವು ಮಾ. 1ರಂದು ನೆರವೇರಿತು.

ಈ ಸಮಾರಂಭದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಯುತ ಹರೀಶ್ ಪೂಂಜ ಇವರು ನವೀಕೃತ ಕೊಠಡಿಯನ್ನು ಉದ್ಘಾಟನೆ ಮಾಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದಂತಹ ವಿಧಾನ ಪರಿಷತ್ ಶಾಸಕರಾದ ಶ್ರೀಯುತ ಪ್ರತಾಪ್ ಸಿಂಹ ನಾಯಕ್ ಇವರು ಮಾತನಾಡಿ ಶಾಲಾ ಕೊಠಡಿಗಳನ್ನು ಬಣ್ಣದ ರಂಗಿನಿಂದ ವರ್ಣ ರಂಜಿತಗೊಳಿಸಿ ಮುದ್ದು ಮಕ್ಕಳ ಮತ್ತು ಊರಿನ ಜನತೆಯ ಮುಖದಲ್ಲಿ ಮಂದಹಾಸ ಮೂಡಿಸಿದಂತಹ ಲಯನ್ಸ್ ಕ್ಲಬ್ ನ ಅಧ್ಯಕ್ಷರನ್ನು ಅಭಿನಂದಿಸಿದರು

. ಹಾಗೂ ಎಲ್ಲಾ ಊರಿನ ಜನರು ತಮ್ಮ ಮಕ್ಕಳನ್ನು ಕನ್ನಡ ಮಾಧ್ಯಮ ಶಾಲೆಗೆ ಸೇರಿಸಬೇಕೆಂಬ ಕಿವಿ ಮಾತನ್ನು ಕೂಡ ನೀಡಿದರು. ಮತ್ತೋರ್ವ ಅತಿಥಿಯಾಗಿ ಆಗಮಿಸಿದಂತಹ ಬದುಕು ಕಟ್ಟೋಣ ತಂಡದ ಸಂಚಾಲಕರಾದಂತಹ ಮೋಹನ್ ಕುಮಾರ್ ಇವರು ನಮ್ಮ ಮನಸ್ಸಿನಲ್ಲಿ ಸರಕಾರಿ ಶಾಲೆಗಳು ಹೀಗೆ ಇರಬೇಕೆಂಬ ಒಂದು ನಿರೀಕ್ಷೆ ಇದೆ.ಈ ನಿರೀಕ್ಷೆಗೆ ಅನುಗುಣವಾಗಿ ಲಯನ್ಸ್ ಕ್ಲಬ್ ಬೆಳ್ತಂಗಡಿ ಈ ಸರಕಾರಿ ಶಾಲೆಯನ್ನು ವರ್ಣ ರಂಜಿತ ಗೊಳಿಸಿದೆ. ಎಂದು ತಿಳಿಸಿದರು. ಲಯನ್ಸ್ ಅಧ್ಯಕ್ಷರಾದಂತಹ ದೇವದಾಸ್ ಶೆಟ್ಟಿ ಇವರು ಬಂದಂತಹ ಎಲ್ಲಾ ಅತಿಥಿಗಳನ್ನು ಸ್ವಾಗತಿಸಿದರು. ಶಾಲೆಯ ಮುಖ್ಯ ಶಿಕ್ಷಕಿಯಾದಂತಹ ದೀಪಾ ಇವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಲಯನ್ ಕಿರಣ್ ಕುಮಾರ್ ಶೆಟ್ಟಿ ಮಾತನಾಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶಾಸಕರಾದ ಹರೀಶ್ ಪೂಂಜ, ವಿಧಾನ ಪರಿಷತ್
ಶಾಸಕರಾದಂತಹ ಪ್ರತಾಪ್ ಸಿಂಹ ನಾಯಕ,ಲಯನ್ ದೇವದಾಸ್ ಶೆಟ್ಟಿ ಹಾಗೂ ಚಿತ್ರ ಕಲಾವಿದ ಧನುಷ್ ಇವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಆಶಾಲತಾ ಗುಡಿಗಾರ್ ಗ್ರಾಮ ಪಂಚಾಯತ್, ಸದಸ್ಯರಾದ ಆನಂದ ಅಡಿಲು, ಎಸ್ಡಿಎಂಸಿ ಅಧ್ಯಕ್ಷರಾದ ಆನಂದ ಕೊಪ್ಪದ ಕೋಡಿ ಹಾಗೂ ಲಯನ್ ಅಶೋಕ್ ಬಿ.ಪಿ ಉಪಸ್ಥಿತರಿದ್ದರು. ಅತಿಥಿ ಶಿಕ್ಷಕಿ ಸುಜಾತ ಧನ್ಯವಾದ ವಿತ್ತರು.ಪ್ರಾಥಮಿಕ ಪದವೀಧರ ಶಿಕ್ಷಕಿ ಮೇಘ ಎಮ್.ಕೆ ಇವರು ಕಾರ್ಯಕ್ರಮ ನಿರೂಪಣೆ ಮಾಡಿದರು.

Related posts

‘ದಸ್ಕತ್’ ತುಳು ಸಿನೆಮಾದ ಮೋಷನ್ ಪೋಸ್ಟರ್ ಗೆ ಫಿದಾ ಆದ ತುಳುನಾಡಿನ ದಿಗ್ಗಜರು

Suddi Udaya

ಕುಕ್ಕೇಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ಯೋಜನೆಯ ‘ಪಂಚ ಅಭಿಯಾನದಡಿ’ ಕೋಟಿ ವೃಕ್ಷ ಅಭಿಯಾನ

Suddi Udaya

ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆ ದುರಸ್ತಿ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಆಗಬೇಕಾಗಿರುವ ಬದಲಾವಣೆ ಬಗ್ಗೆ ಲೋಕೋಪಯೋಗಿ ಸಚಿವರಿಗೆ ಮನವಿ ಸಲ್ಲಿಕೆ

Suddi Udaya

ಅ.15 : ಚರ್ಚ್ ರೋಡ್ ಬಳಿ ನೂತನ ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಅಮೂಲ್ಯ ವಜ್ರಗಳ ಹಬ್ಬಕ್ಕೆ ಚಾಲನೆ: ಗ್ರಾಹಕರ ಕೈಗೆಟಕುವ ರೀತಿಯಲ್ಲಿ ‘ಡೈಮಂಡ್ ಫೆಸ್ಟ್’

Suddi Udaya

ಅಲಂಕೃತಗೊಂಡ ಮಚ್ಚಿನ ಶಾಲೆ ಹಾಗೂ ಪುಂಜಾಲಕಟ್ಟೆ ಶಾಲೆಯ ಮತದಾನ ಕೇಂದ್ರದಲ್ಲಿ ಬಿರುಸಿನ ಮತದಾನ

Suddi Udaya
error: Content is protected !!