24.4 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿ

ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ನವೀಕೃತ ಕೊಠಡಿಯ ಉದ್ಘಾಟನಾ ಸಮಾರಂಭವು

ಇಂದಬೆಟ್ಟು : ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ನವೀಕೃತ ಕೊಠಡಿಯ ಉದ್ಘಾಟನಾ ಸಮಾರಂಭವು ಮಾ. 1ರಂದು ನೆರವೇರಿತು.

ಈ ಸಮಾರಂಭದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಯುತ ಹರೀಶ್ ಪೂಂಜ ಇವರು ನವೀಕೃತ ಕೊಠಡಿಯನ್ನು ಉದ್ಘಾಟನೆ ಮಾಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದಂತಹ ವಿಧಾನ ಪರಿಷತ್ ಶಾಸಕರಾದ ಶ್ರೀಯುತ ಪ್ರತಾಪ್ ಸಿಂಹ ನಾಯಕ್ ಇವರು ಮಾತನಾಡಿ ಶಾಲಾ ಕೊಠಡಿಗಳನ್ನು ಬಣ್ಣದ ರಂಗಿನಿಂದ ವರ್ಣ ರಂಜಿತಗೊಳಿಸಿ ಮುದ್ದು ಮಕ್ಕಳ ಮತ್ತು ಊರಿನ ಜನತೆಯ ಮುಖದಲ್ಲಿ ಮಂದಹಾಸ ಮೂಡಿಸಿದಂತಹ ಲಯನ್ಸ್ ಕ್ಲಬ್ ನ ಅಧ್ಯಕ್ಷರನ್ನು ಅಭಿನಂದಿಸಿದರು

. ಹಾಗೂ ಎಲ್ಲಾ ಊರಿನ ಜನರು ತಮ್ಮ ಮಕ್ಕಳನ್ನು ಕನ್ನಡ ಮಾಧ್ಯಮ ಶಾಲೆಗೆ ಸೇರಿಸಬೇಕೆಂಬ ಕಿವಿ ಮಾತನ್ನು ಕೂಡ ನೀಡಿದರು. ಮತ್ತೋರ್ವ ಅತಿಥಿಯಾಗಿ ಆಗಮಿಸಿದಂತಹ ಬದುಕು ಕಟ್ಟೋಣ ತಂಡದ ಸಂಚಾಲಕರಾದಂತಹ ಮೋಹನ್ ಕುಮಾರ್ ಇವರು ನಮ್ಮ ಮನಸ್ಸಿನಲ್ಲಿ ಸರಕಾರಿ ಶಾಲೆಗಳು ಹೀಗೆ ಇರಬೇಕೆಂಬ ಒಂದು ನಿರೀಕ್ಷೆ ಇದೆ.ಈ ನಿರೀಕ್ಷೆಗೆ ಅನುಗುಣವಾಗಿ ಲಯನ್ಸ್ ಕ್ಲಬ್ ಬೆಳ್ತಂಗಡಿ ಈ ಸರಕಾರಿ ಶಾಲೆಯನ್ನು ವರ್ಣ ರಂಜಿತ ಗೊಳಿಸಿದೆ. ಎಂದು ತಿಳಿಸಿದರು. ಲಯನ್ಸ್ ಅಧ್ಯಕ್ಷರಾದಂತಹ ದೇವದಾಸ್ ಶೆಟ್ಟಿ ಇವರು ಬಂದಂತಹ ಎಲ್ಲಾ ಅತಿಥಿಗಳನ್ನು ಸ್ವಾಗತಿಸಿದರು. ಶಾಲೆಯ ಮುಖ್ಯ ಶಿಕ್ಷಕಿಯಾದಂತಹ ದೀಪಾ ಇವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಲಯನ್ ಕಿರಣ್ ಕುಮಾರ್ ಶೆಟ್ಟಿ ಮಾತನಾಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶಾಸಕರಾದ ಹರೀಶ್ ಪೂಂಜ, ವಿಧಾನ ಪರಿಷತ್
ಶಾಸಕರಾದಂತಹ ಪ್ರತಾಪ್ ಸಿಂಹ ನಾಯಕ,ಲಯನ್ ದೇವದಾಸ್ ಶೆಟ್ಟಿ ಹಾಗೂ ಚಿತ್ರ ಕಲಾವಿದ ಧನುಷ್ ಇವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಆಶಾಲತಾ ಗುಡಿಗಾರ್ ಗ್ರಾಮ ಪಂಚಾಯತ್, ಸದಸ್ಯರಾದ ಆನಂದ ಅಡಿಲು, ಎಸ್ಡಿಎಂಸಿ ಅಧ್ಯಕ್ಷರಾದ ಆನಂದ ಕೊಪ್ಪದ ಕೋಡಿ ಹಾಗೂ ಲಯನ್ ಅಶೋಕ್ ಬಿ.ಪಿ ಉಪಸ್ಥಿತರಿದ್ದರು. ಅತಿಥಿ ಶಿಕ್ಷಕಿ ಸುಜಾತ ಧನ್ಯವಾದ ವಿತ್ತರು.ಪ್ರಾಥಮಿಕ ಪದವೀಧರ ಶಿಕ್ಷಕಿ ಮೇಘ ಎಮ್.ಕೆ ಇವರು ಕಾರ್ಯಕ್ರಮ ನಿರೂಪಣೆ ಮಾಡಿದರು.

Related posts

ದಿ| ವಸಂತ ಬಂಗೇರರ ಮನೆಗೆ ರಾಜ್ಯದ ಮಾಜಿ ಸಚಿವ ಪಿ.ಜಿ. ಆರ್ ಸಿಂಧ್ಯ ಭೇಟಿ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ಪ್ರಸಿದ್ದ ಪುಣ್ಯಕ್ಷೇತ್ರ ಶಿರ್ಡಿ ಸಾಯಿಬಾಬಾ ಕ್ಷೇತ್ರಕ್ಕೆ ತೀರ್ಥಯಾತ್ರೆ ಕೈಗೊಂಡ ಬೆಳ್ತಂಗಡಿಯ ನೂರಾರು ಭಕ್ತರು

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.14 ರಂದು ವಿದ್ಯುತ್ ನಿಲುಗಡೆ

Suddi Udaya

ಮಾಜಿ ಅಧ್ಯಕ್ಷ ಹಾಲಿ ಗ್ರಾ.ಪಂ ಸದಸ್ಯ ಅಬ್ದುಲ್ ರಝಾಕ್ ಸತತ ಹೋರಾಟದಿಂದ ತೆಕ್ಕಾರು ಗ್ರಾಮಕ್ಕೆ ಉಪ ಆರೋಗ್ಯ ಕೇಂದ್ರ ಮಂಜೂರು ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಆರೋಗ್ಯ ಸಚಿವರಿಗೆ ಮತ್ತೊಂದು ಮನವಿ

Suddi Udaya

ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಗುರುವಾಯನಕೆರೆ ಹುತಾತ್ಮ ಯೋಧ ಏಕನಾಥ್ ಶೆಟ್ಟಿ ರವರ ಪ್ರತಿಮೆಗೆ ಮಾಲಾರ್ಪಣೆ, ನುಡಿನಮನ

Suddi Udaya
error: Content is protected !!