23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ನವೀಕೃತ ಕೊಠಡಿಯ ಉದ್ಘಾಟನಾ ಸಮಾರಂಭವು

ಇಂದಬೆಟ್ಟು : ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ನವೀಕೃತ ಕೊಠಡಿಯ ಉದ್ಘಾಟನಾ ಸಮಾರಂಭವು ಮಾ. 1ರಂದು ನೆರವೇರಿತು.

ಈ ಸಮಾರಂಭದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಯುತ ಹರೀಶ್ ಪೂಂಜ ಇವರು ನವೀಕೃತ ಕೊಠಡಿಯನ್ನು ಉದ್ಘಾಟನೆ ಮಾಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದಂತಹ ವಿಧಾನ ಪರಿಷತ್ ಶಾಸಕರಾದ ಶ್ರೀಯುತ ಪ್ರತಾಪ್ ಸಿಂಹ ನಾಯಕ್ ಇವರು ಮಾತನಾಡಿ ಶಾಲಾ ಕೊಠಡಿಗಳನ್ನು ಬಣ್ಣದ ರಂಗಿನಿಂದ ವರ್ಣ ರಂಜಿತಗೊಳಿಸಿ ಮುದ್ದು ಮಕ್ಕಳ ಮತ್ತು ಊರಿನ ಜನತೆಯ ಮುಖದಲ್ಲಿ ಮಂದಹಾಸ ಮೂಡಿಸಿದಂತಹ ಲಯನ್ಸ್ ಕ್ಲಬ್ ನ ಅಧ್ಯಕ್ಷರನ್ನು ಅಭಿನಂದಿಸಿದರು

. ಹಾಗೂ ಎಲ್ಲಾ ಊರಿನ ಜನರು ತಮ್ಮ ಮಕ್ಕಳನ್ನು ಕನ್ನಡ ಮಾಧ್ಯಮ ಶಾಲೆಗೆ ಸೇರಿಸಬೇಕೆಂಬ ಕಿವಿ ಮಾತನ್ನು ಕೂಡ ನೀಡಿದರು. ಮತ್ತೋರ್ವ ಅತಿಥಿಯಾಗಿ ಆಗಮಿಸಿದಂತಹ ಬದುಕು ಕಟ್ಟೋಣ ತಂಡದ ಸಂಚಾಲಕರಾದಂತಹ ಮೋಹನ್ ಕುಮಾರ್ ಇವರು ನಮ್ಮ ಮನಸ್ಸಿನಲ್ಲಿ ಸರಕಾರಿ ಶಾಲೆಗಳು ಹೀಗೆ ಇರಬೇಕೆಂಬ ಒಂದು ನಿರೀಕ್ಷೆ ಇದೆ.ಈ ನಿರೀಕ್ಷೆಗೆ ಅನುಗುಣವಾಗಿ ಲಯನ್ಸ್ ಕ್ಲಬ್ ಬೆಳ್ತಂಗಡಿ ಈ ಸರಕಾರಿ ಶಾಲೆಯನ್ನು ವರ್ಣ ರಂಜಿತ ಗೊಳಿಸಿದೆ. ಎಂದು ತಿಳಿಸಿದರು. ಲಯನ್ಸ್ ಅಧ್ಯಕ್ಷರಾದಂತಹ ದೇವದಾಸ್ ಶೆಟ್ಟಿ ಇವರು ಬಂದಂತಹ ಎಲ್ಲಾ ಅತಿಥಿಗಳನ್ನು ಸ್ವಾಗತಿಸಿದರು. ಶಾಲೆಯ ಮುಖ್ಯ ಶಿಕ್ಷಕಿಯಾದಂತಹ ದೀಪಾ ಇವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಲಯನ್ ಕಿರಣ್ ಕುಮಾರ್ ಶೆಟ್ಟಿ ಮಾತನಾಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶಾಸಕರಾದ ಹರೀಶ್ ಪೂಂಜ, ವಿಧಾನ ಪರಿಷತ್
ಶಾಸಕರಾದಂತಹ ಪ್ರತಾಪ್ ಸಿಂಹ ನಾಯಕ,ಲಯನ್ ದೇವದಾಸ್ ಶೆಟ್ಟಿ ಹಾಗೂ ಚಿತ್ರ ಕಲಾವಿದ ಧನುಷ್ ಇವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಆಶಾಲತಾ ಗುಡಿಗಾರ್ ಗ್ರಾಮ ಪಂಚಾಯತ್, ಸದಸ್ಯರಾದ ಆನಂದ ಅಡಿಲು, ಎಸ್ಡಿಎಂಸಿ ಅಧ್ಯಕ್ಷರಾದ ಆನಂದ ಕೊಪ್ಪದ ಕೋಡಿ ಹಾಗೂ ಲಯನ್ ಅಶೋಕ್ ಬಿ.ಪಿ ಉಪಸ್ಥಿತರಿದ್ದರು. ಅತಿಥಿ ಶಿಕ್ಷಕಿ ಸುಜಾತ ಧನ್ಯವಾದ ವಿತ್ತರು.ಪ್ರಾಥಮಿಕ ಪದವೀಧರ ಶಿಕ್ಷಕಿ ಮೇಘ ಎಮ್.ಕೆ ಇವರು ಕಾರ್ಯಕ್ರಮ ನಿರೂಪಣೆ ಮಾಡಿದರು.

Related posts

ಧರ್ಮಸ್ಥಳ ಕ್ಷೇತ್ರದ ಮೇಲೆ ನಡೆಯುತ್ತಿರುವ ಅಪಪ್ರಚಾರ ಕೊನೆಯಾಗುವಂತೆ ಕರವೇ ಮಹಿಳಾ ತಂಡದ ಸದಸ್ಯರಿಂದ ಉರುಳು ಸೇವೆ

Suddi Udaya

ಬೆಳ್ತಂಗಡಿ ತಾ| ಕಚೇರಿಯ ನಿವೃತ್ತ ಉಪತಹಶೀಲ್ದಾರ್ ನಿಡ್ಲೆ ಚೆನ್ನಪ್ಪ ಗೌಡ ನಿಧನ

Suddi Udaya

ಎಸ್.ಡಿ.ಎಂ ಕಾಲೇಜಿನ ಸ್ಥಾಪಕ ಪ್ರಾಂಶುಪಾಲರು, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ.ಎಸ್ ಪ್ರಭಾಕರ್ ವಿಧಿವಶ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶತಚಂಡಿಕಾಯಾಗ

Suddi Udaya

ಮಚ್ಚಿನ ಮೂಲ್ಯರ ಯಾನೆ ಕುಂಬಾರರ ಮಹಿಳಾ ಸಂಘದಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ: ‘ಶ್ರೀರಾಮದರ್ಶನ’ ಯಕ್ಷಗಾನ ತಾಳಮದ್ದಳೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಮಡಂತ್ಯಾರು ಬಿಲ್ಲವ ಸಂಘದ ಗೌರವಾಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ ಹಾಗೂ ಸದಸ್ಯರು ಭೇಟಿ

Suddi Udaya
error: Content is protected !!