23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ನವೀಕೃತ ಕೊಠಡಿಯ ಉದ್ಘಾಟನಾ ಸಮಾರಂಭವು

ಇಂದಬೆಟ್ಟು : ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ನವೀಕೃತ ಕೊಠಡಿಯ ಉದ್ಘಾಟನಾ ಸಮಾರಂಭವು ಮಾ. 1ರಂದು ನೆರವೇರಿತು.

ಈ ಸಮಾರಂಭದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಯುತ ಹರೀಶ್ ಪೂಂಜ ಇವರು ನವೀಕೃತ ಕೊಠಡಿಯನ್ನು ಉದ್ಘಾಟನೆ ಮಾಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದಂತಹ ವಿಧಾನ ಪರಿಷತ್ ಶಾಸಕರಾದ ಶ್ರೀಯುತ ಪ್ರತಾಪ್ ಸಿಂಹ ನಾಯಕ್ ಇವರು ಮಾತನಾಡಿ ಶಾಲಾ ಕೊಠಡಿಗಳನ್ನು ಬಣ್ಣದ ರಂಗಿನಿಂದ ವರ್ಣ ರಂಜಿತಗೊಳಿಸಿ ಮುದ್ದು ಮಕ್ಕಳ ಮತ್ತು ಊರಿನ ಜನತೆಯ ಮುಖದಲ್ಲಿ ಮಂದಹಾಸ ಮೂಡಿಸಿದಂತಹ ಲಯನ್ಸ್ ಕ್ಲಬ್ ನ ಅಧ್ಯಕ್ಷರನ್ನು ಅಭಿನಂದಿಸಿದರು

. ಹಾಗೂ ಎಲ್ಲಾ ಊರಿನ ಜನರು ತಮ್ಮ ಮಕ್ಕಳನ್ನು ಕನ್ನಡ ಮಾಧ್ಯಮ ಶಾಲೆಗೆ ಸೇರಿಸಬೇಕೆಂಬ ಕಿವಿ ಮಾತನ್ನು ಕೂಡ ನೀಡಿದರು. ಮತ್ತೋರ್ವ ಅತಿಥಿಯಾಗಿ ಆಗಮಿಸಿದಂತಹ ಬದುಕು ಕಟ್ಟೋಣ ತಂಡದ ಸಂಚಾಲಕರಾದಂತಹ ಮೋಹನ್ ಕುಮಾರ್ ಇವರು ನಮ್ಮ ಮನಸ್ಸಿನಲ್ಲಿ ಸರಕಾರಿ ಶಾಲೆಗಳು ಹೀಗೆ ಇರಬೇಕೆಂಬ ಒಂದು ನಿರೀಕ್ಷೆ ಇದೆ.ಈ ನಿರೀಕ್ಷೆಗೆ ಅನುಗುಣವಾಗಿ ಲಯನ್ಸ್ ಕ್ಲಬ್ ಬೆಳ್ತಂಗಡಿ ಈ ಸರಕಾರಿ ಶಾಲೆಯನ್ನು ವರ್ಣ ರಂಜಿತ ಗೊಳಿಸಿದೆ. ಎಂದು ತಿಳಿಸಿದರು. ಲಯನ್ಸ್ ಅಧ್ಯಕ್ಷರಾದಂತಹ ದೇವದಾಸ್ ಶೆಟ್ಟಿ ಇವರು ಬಂದಂತಹ ಎಲ್ಲಾ ಅತಿಥಿಗಳನ್ನು ಸ್ವಾಗತಿಸಿದರು. ಶಾಲೆಯ ಮುಖ್ಯ ಶಿಕ್ಷಕಿಯಾದಂತಹ ದೀಪಾ ಇವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಲಯನ್ ಕಿರಣ್ ಕುಮಾರ್ ಶೆಟ್ಟಿ ಮಾತನಾಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶಾಸಕರಾದ ಹರೀಶ್ ಪೂಂಜ, ವಿಧಾನ ಪರಿಷತ್
ಶಾಸಕರಾದಂತಹ ಪ್ರತಾಪ್ ಸಿಂಹ ನಾಯಕ,ಲಯನ್ ದೇವದಾಸ್ ಶೆಟ್ಟಿ ಹಾಗೂ ಚಿತ್ರ ಕಲಾವಿದ ಧನುಷ್ ಇವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಆಶಾಲತಾ ಗುಡಿಗಾರ್ ಗ್ರಾಮ ಪಂಚಾಯತ್, ಸದಸ್ಯರಾದ ಆನಂದ ಅಡಿಲು, ಎಸ್ಡಿಎಂಸಿ ಅಧ್ಯಕ್ಷರಾದ ಆನಂದ ಕೊಪ್ಪದ ಕೋಡಿ ಹಾಗೂ ಲಯನ್ ಅಶೋಕ್ ಬಿ.ಪಿ ಉಪಸ್ಥಿತರಿದ್ದರು. ಅತಿಥಿ ಶಿಕ್ಷಕಿ ಸುಜಾತ ಧನ್ಯವಾದ ವಿತ್ತರು.ಪ್ರಾಥಮಿಕ ಪದವೀಧರ ಶಿಕ್ಷಕಿ ಮೇಘ ಎಮ್.ಕೆ ಇವರು ಕಾರ್ಯಕ್ರಮ ನಿರೂಪಣೆ ಮಾಡಿದರು.

Related posts

ಬೆಳ್ತಂಗಡಿ ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘ ಇದರ ಸ್ವಂತ ಕಟ್ಟಡ “ಆಶಾಕಿರಣ” ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಹಾಗೂ ಸಂಘದ ಪ್ರಧಾನ ಕಚೇರಿ ಉದ್ಘಾಟನೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya

ಬಜಿರೆ ಪಿ.ಎಂ. ಶ್ರೀ ಸ. ಉ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ – ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಹದಿಹರೆಯದ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಜು.13: ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ಆಷಾಡ (ಆಟಿ) ಸೇಲ್: 10% ಫ್ಲ್ಯಾಟ್, 50-50 ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ರಿಷಬ್ ಶೆಟ್ಟಿ ಭೇಟಿ

Suddi Udaya
error: Content is protected !!