25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ಗ್ರಾ.ಪಂ. ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

ಶಿರ್ಲಾಲು ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ವಿಶೇಷಚೇತನರ ಸಮನ್ವಯ ಗ್ರಾಮ ಸಭೆಯನ್ನು ಸರ್ಕಾರದ ಆದೇಶದಂತೆ ಫೆ. 28 ರಂದು ಶಿರ್ಲಾಲು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾ ಎಂ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸುಶೀಲಾ ಸ್ವಾಗತಿಸಿದರು. ಹಾಗೂ 2024-25 ನೇ ಸಾಲಿನ ವಿಶೇಷಚೇತನರ ವಾರ್ಷಿಕ ವರದಿಯನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ಹರೀಶ್ ಇವರು ವಾಚಿಸಿದರು.
ವಿಕಲಚೇತನರಿಗೆ ವಿಕಲಚೇತನರ ಇಲಾಖೆ ಹಾಗೂ ಇತರ ಎಲ್ಲಾ ಇಲಾಖೆಗಳಿಂದ ಸಿಗುವ ಸರಕಾರದ ಸಮಗ್ರ ಮಾಹಿತಿಯನ್ನು ತಾಲೂಕು ವಿವಿದೊದ್ದೇಶ ಪುನರ್ವಸತಿ ಸಂಯೋಜಕರಾದ ಜೋನ್ ಬ್ಯಾಪ್ಟಿಸ್ಟ್ ಡಿ ಸೋಜಾ ನೀಡಿದರು.
2024-25 ನೇ ಸಾಲಿನ ಶೇಕಡಾ 5% ರ ಅನುದಾನದಲ್ಲಿ 3 ಜನ ವಿಕಲಚೇತನರಿಗೆ ನೀರಿನ ಟ್ಯಾಂಕ್ ಹಾಗೂ ಒಬ್ಬರಿಗೆ ವಾಕಿಂಗ್ ಸ್ಟಿಕ್ ಮತ್ತು ವಿಶೇಷಚೇತನ ವಿದ್ಯಾರ್ಥಿಗೆ ಸ್ಟಡಿ ಟೇಬಲ್ ನೀಡಲಾಯಿತು, ಹಾಗೂ 5 ಜನ ವಿಕಲಚೇತನರಿಗೆ ಮನೆದುರಸ್ತಿಗೆ ಮತ್ತು ವೈದ್ಯಕೀಯ ಸಹಾಯಧನದ ಚೆಕ್ ಹಸ್ತಾಂತರಿಸಲಾಯಿತು.

ಪಂಚಾಯತ್ ಅಬಿವೃದ್ದಿ ಅಧಿಕಾರಿಯವರು ಪಂಚಾಯತ್ ನಿಂದ ವಿಕಲಚೇತನರಿಗೆ ಸಿಗುವ ಸೌಲಭ್ಯ ಹಾಗೂ ಉದ್ಯೋಗ ಖಾತರಿ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಪಂಚಾಯತ್ ಉಪಾಧ್ಯಕ್ಷರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಗ್ರಾಮ ಪಂಚಾಯತ್ ಅಧ್ಯಕ್ಷರು ಪಂಚಾಯತ್ ಹಾಗೂ ಇತರ ಇಲಾಖೆಗಳ ಪ್ರಯೋಜನಗಳನ್ನು ಹೆಚ್ಚಿನ ರೀತಿಯಲ್ಲಿ ಸದುಪಯೋಗಪಡಿಸಿಕೊಳ್ಳಬೇಕಾಗಿ ತಿಳಿಸಿದರು.


ವಿಕಲಚೇತನರ ಬೇಡಿಕೆಗಳನ್ನು ಸಭೆಯಲ್ಲಿ ಪಡೆದುಕೊಳ್ಳಲಾಯಿತು.
ಸಭೆಯಲ್ಲಿ ಪಂಚಾಯತ್ ಸಿಬ್ಬಂದಿಗಳು, ಗ್ರಂಥಾಲಯ ಮೇಲ್ವೀಚಾರಕಿ, ಸಂಜೀವಿನಿ ಒಕ್ಕೂಟದ ಎಮ್.ಬಿ.ಕೆ, ಎಲ್.ಸಿಆರ್ ಪಿ, ಪಶುಸಖಿ ಸಹಕರಿಸಿದರು. ಸಭೆಯಲ್ಲಿ ಪಂಚಾಯತ್ ನ ಸರ್ವ ಸದಸ್ಯರು, ಅಳದಂಗಡಿ ಗ್ರಾಮ ಪಂಚಾಯತ್ ನ ವಿ ಆರ್ ಡಬ್ಲೂ ಸಂದ್ಯಾ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ವಿಕಲಚೇತನರು ಹಾಗೂ ಪೋಷಕರು ಉಪಸ್ಥಿತರಿದ್ದರು.

Related posts

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಉದ್ಯಮಿ ವಾಸುದೇವ ಗೌಡ ರಿಗೆ ಸನ್ಮಾನ

Suddi Udaya

ಪೆರ್ಲ ಕ್ಲಸ್ಟರ್ ನ ಪ್ರತಿಭಾ ಕಾರಂಜಿ: ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಗೆ ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ: ಅನುಗ್ರಹ ಕಾಲೇಜು ಪ್ರಾರಂಭೋತ್ಸವ ಹಾಗೂ ನೂತನ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ಸೂಳಬೆಟ್ಟು ಬರಾಯ ಶ್ರೀಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವದ ಯಶಸ್ಸಿಗಾಗಿ ಪೂರ್ವಭಾವಿ ಪ್ರಾರ್ಥನೆ

Suddi Udaya

ಅ.31: ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ 5ನೇ ವರ್ಷದ ದೀಪಾವಳಿ ದೋಸೆ ಹಬ್ಬ: ಪೂರ್ವಭಾವಿ ಸಭೆ

Suddi Udaya

ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಸಾರ್ವಜನಿಕ ಗಣೇಶೋತ್ಸವದ ಪೂರ್ವಭಾವಿ ಸಭೆ

Suddi Udaya
error: Content is protected !!