23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ಗ್ರಾ.ಪಂ. ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

ಶಿರ್ಲಾಲು ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ವಿಶೇಷಚೇತನರ ಸಮನ್ವಯ ಗ್ರಾಮ ಸಭೆಯನ್ನು ಸರ್ಕಾರದ ಆದೇಶದಂತೆ ಫೆ. 28 ರಂದು ಶಿರ್ಲಾಲು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾ ಎಂ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸುಶೀಲಾ ಸ್ವಾಗತಿಸಿದರು. ಹಾಗೂ 2024-25 ನೇ ಸಾಲಿನ ವಿಶೇಷಚೇತನರ ವಾರ್ಷಿಕ ವರದಿಯನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ಹರೀಶ್ ಇವರು ವಾಚಿಸಿದರು.
ವಿಕಲಚೇತನರಿಗೆ ವಿಕಲಚೇತನರ ಇಲಾಖೆ ಹಾಗೂ ಇತರ ಎಲ್ಲಾ ಇಲಾಖೆಗಳಿಂದ ಸಿಗುವ ಸರಕಾರದ ಸಮಗ್ರ ಮಾಹಿತಿಯನ್ನು ತಾಲೂಕು ವಿವಿದೊದ್ದೇಶ ಪುನರ್ವಸತಿ ಸಂಯೋಜಕರಾದ ಜೋನ್ ಬ್ಯಾಪ್ಟಿಸ್ಟ್ ಡಿ ಸೋಜಾ ನೀಡಿದರು.
2024-25 ನೇ ಸಾಲಿನ ಶೇಕಡಾ 5% ರ ಅನುದಾನದಲ್ಲಿ 3 ಜನ ವಿಕಲಚೇತನರಿಗೆ ನೀರಿನ ಟ್ಯಾಂಕ್ ಹಾಗೂ ಒಬ್ಬರಿಗೆ ವಾಕಿಂಗ್ ಸ್ಟಿಕ್ ಮತ್ತು ವಿಶೇಷಚೇತನ ವಿದ್ಯಾರ್ಥಿಗೆ ಸ್ಟಡಿ ಟೇಬಲ್ ನೀಡಲಾಯಿತು, ಹಾಗೂ 5 ಜನ ವಿಕಲಚೇತನರಿಗೆ ಮನೆದುರಸ್ತಿಗೆ ಮತ್ತು ವೈದ್ಯಕೀಯ ಸಹಾಯಧನದ ಚೆಕ್ ಹಸ್ತಾಂತರಿಸಲಾಯಿತು.

ಪಂಚಾಯತ್ ಅಬಿವೃದ್ದಿ ಅಧಿಕಾರಿಯವರು ಪಂಚಾಯತ್ ನಿಂದ ವಿಕಲಚೇತನರಿಗೆ ಸಿಗುವ ಸೌಲಭ್ಯ ಹಾಗೂ ಉದ್ಯೋಗ ಖಾತರಿ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಪಂಚಾಯತ್ ಉಪಾಧ್ಯಕ್ಷರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಗ್ರಾಮ ಪಂಚಾಯತ್ ಅಧ್ಯಕ್ಷರು ಪಂಚಾಯತ್ ಹಾಗೂ ಇತರ ಇಲಾಖೆಗಳ ಪ್ರಯೋಜನಗಳನ್ನು ಹೆಚ್ಚಿನ ರೀತಿಯಲ್ಲಿ ಸದುಪಯೋಗಪಡಿಸಿಕೊಳ್ಳಬೇಕಾಗಿ ತಿಳಿಸಿದರು.


ವಿಕಲಚೇತನರ ಬೇಡಿಕೆಗಳನ್ನು ಸಭೆಯಲ್ಲಿ ಪಡೆದುಕೊಳ್ಳಲಾಯಿತು.
ಸಭೆಯಲ್ಲಿ ಪಂಚಾಯತ್ ಸಿಬ್ಬಂದಿಗಳು, ಗ್ರಂಥಾಲಯ ಮೇಲ್ವೀಚಾರಕಿ, ಸಂಜೀವಿನಿ ಒಕ್ಕೂಟದ ಎಮ್.ಬಿ.ಕೆ, ಎಲ್.ಸಿಆರ್ ಪಿ, ಪಶುಸಖಿ ಸಹಕರಿಸಿದರು. ಸಭೆಯಲ್ಲಿ ಪಂಚಾಯತ್ ನ ಸರ್ವ ಸದಸ್ಯರು, ಅಳದಂಗಡಿ ಗ್ರಾಮ ಪಂಚಾಯತ್ ನ ವಿ ಆರ್ ಡಬ್ಲೂ ಸಂದ್ಯಾ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ವಿಕಲಚೇತನರು ಹಾಗೂ ಪೋಷಕರು ಉಪಸ್ಥಿತರಿದ್ದರು.

Related posts

ಉಜಿರೆ ಬೆನಕ ಹೆಲ್ತ್ ಸೆಂಟರ್‌ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

Suddi Udaya

ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು: ಅಧ್ಯಕ್ಷರಾಗಿ ಕಿರಣ್‌ ಬುಡ್ಲೆಗುತ್ತು, ಕಾರ್ಯದರ್ಶಿಯಾಗಿ ನವೀನಚಂದ್ರ ಗೌಡ ಭೋಜಾರ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ದ.ಕ ಜಿಲ್ಲಾ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ಸ್ವಚ್ಚತಾ ಆಂದೋಲನ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬೆಳ್ತಂಗಡಿ ಕೌಶಲ್ಯಭಿವೃದ್ಧಿ ತರಬೇತಿಯಡಿ ಬಟ್ಟೆ ಚೀಲ ಮತ್ತು ಎಂಬ್ರಾಯಿಡರಿ ಉಚಿತ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ತಾಲೂಕು ಮಹಿಳಾ ವೇದಿಕೆ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಫೇಸ್‌ಬುಕ್ ಜಾಲತಾಣದಲ್ಲಿ ಮಹಿಳೆಗೆ ಚಾರಿತ್ರ್ಯಕ್ಕೆ ಧಕ್ಕೆಯಾಗುವ ಬರಹ ಬೆದರಿಕೆ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!