25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಆಚರಣೆ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅಂಗಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ವಿಜ್ಞಾನ ಸಂಘದ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನವನ್ನು ಬಹಳ ವಿಶಿಷ್ಟ ರೀತಿಯಲ್ಲಿ, ಅರ್ಥಪೂರ್ಣವಾಗಿ ಆಚರಿಸಲಾಯಿತು.

ರಾಷ್ಟ್ರೀಯ ವಿಜ್ಞಾನ ದಿನದ ವಿಶೇಷ ಪ್ರತಿಜ್ಞಾವಿಧಿ ಮತ್ತು ರಾಷ್ಟ್ರೀಯ ವಿಜ್ಞಾನ ದಿನದ ಮಹತ್ವದ ಕುರಿತು ವಿಚಾರ ಮಂಡನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಿಜ್ಞಾನಕ್ಕೆ ಸಂಬಂಧಪಟ್ಟ ವಿಶಿಷ್ಟವಾದ ರಂಗೋಲಿ, ಭಿತ್ತಿ ಪತ್ರಗಳನ್ನು ರಚಿಸಲಾಗಿತ್ತು. ವಿವಿಧ ತರಗತಿಯ ಮಕ್ಕಳಿಗೆ ವಿಜ್ಞಾನದ ಕುರಿತ ಪದಬಂಧ, ಚಿತ್ರಕಲಾ ಸ್ಪರ್ಧೆ, ವಿಜ್ಞಾನ ರಸಪ್ರಶ್ನೆ , ವಿಜ್ಞಾನ ಹಾಗೂ ಗಣಿತದ ಮಾದರಿಗಳ ತಯಾರಿಕೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

ಸಂಜೆಯ ಅಸೆಂಬ್ಲಿಯಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿಯವರಾದ ಶ್ರೀಮತಿ ಪರಿಮಳ ಎಮ್.ವಿ ಇವರು ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು. ಶಿಕ್ಷಕಿಯರಾದ ಶ್ರೀಮತಿ ಅನುಷಾ ಮತ್ತು ಶ್ರೀಮತಿ ಅಂಜು ರೂಪುಗೊಳಿಸಿದ ಕಾರ್ಯಕ್ರಮದಲ್ಲಿ ಎಲ್ಲ ವಿಜ್ಞಾನ ಹಾಗೂ ಗಣಿತ ಶಿಕ್ಷಕರು ಪಾಲ್ಗೊಂಡಿದ್ದರು.

Related posts

ಸ್ವಾತಂತ್ರ್ಯ ಸಿಕ್ಕಿ 75 ವರ್ಷ ಕಳೆದರೂ ಹಲವಾರು ಕುಟುಂಬಗಳಿಗೆ ಇನ್ನೂ ವಿದ್ಯುತ್ ಭಾಗ್ಯವಿಲ್ಲ: ವಿದ್ಯುತ್ ವ್ಯವಸ್ಥೆ ಕಲ್ಪಿಸಲು ಅಳದಂಗಡಿ ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಒತ್ತಾಯ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ, ಶಾಲೆಯಲ್ಲಿ ಮಾನವ ಹಕ್ಕುಗಳ ಮಹತ್ವದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಮುಂಡಾಜೆ: ರಬ್ಬರ್ ತೋಟದಲ್ಲಿ ನಾಲ್ಕು ಚಿರತೆಗಳು ಪ್ರತ್ಯಕ್ಷ: ಅಪಾಯದಿಂದ ಪಾರಾದ ಕಾರ್ಮಿಕರು

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಮಲವಂತಿಗೆ ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಕೆ ಎನ್ ಆಯ್ಕೆ

Suddi Udaya
error: Content is protected !!