23.1 C
ಪುತ್ತೂರು, ಬೆಳ್ತಂಗಡಿ
March 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅರಸಿನಮಕ್ಕಿಯಲ್ಲಿ ಫೆ.28 ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಯಿತು.

ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಸೀತಾರಾಮ ಗೌಡ ಕೆ. ಅಲಂಕರಿಸಿದರು. ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿಗಳಾದ ಜಯರಾಜ್ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿಜ್ಞಾನ ದಿನದ ಪ್ರತಿಜ್ಞೆಯನ್ನು ಬೋಧಿಸಿ, ವಿಜ್ಞಾನ ಮತ್ತು ಗಣಿತ ಜೀವನದಲ್ಲಿ ಹೇಗೆ ಹಾಸುಹೊಕ್ಕಾಗಿದೆ ಎಂದು ಕಥೆಯ ಮೂಲಕ ವಿವರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಪಂಚಾಯತ್ ನ ಸಿಬ್ಬಂದಿಗಳಾದ ಶ್ರೀಮತಿ ವಿಂಧ್ಯಾ, ಉಮೇಶ್, ಗ್ರಂಥಾಲಯ ಪಾಲಕಿ ಶ್ರೀಮತಿ ಮಮತಾ ವೇದಿಕೆಯಲ್ಲಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವಿದ್ಯಾರ್ಥಿಗಳು ವಿಜ್ಞಾನದ ವಿವಿಧ ಮಾದರಿಗಳನ್ನು ಉತ್ತಮವಾಗಿ ಪ್ರದರ್ಶಿದರು. ಶಿಕ್ಷಕಿಯರಾದ ದಿವ್ಯಶ್ರೀ, ವಿದ್ಯಾಲಕ್ಷ್ಮಿ ಹೇಮಾವತಿ, ಸಂಧ್ಯಾ, ಸ್ವಾತಿ ಯವರು ವಿದ್ಯಾರ್ಥಿಗಳಿಗೆ ಸೂಕ್ತ ಸಲಹೆ ಸೂಚನೆ ನೀಡಿದರು.

Related posts

ಇಂದಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಚುನಾವಣೆ: ಸತತ ಎರಡನೇ ಅವಧಿಗೆ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತರು

Suddi Udaya

ವಾಣಿ ಕಾಲೇಜು: ಗೀತಗಾಯನ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಮುಂಡಾಜೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ನಂದಿನಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಸಂತೋಷ್ ಪಿ ಕೋಟ್ಯಾನ್ ಬಳಂಜ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಹಾರಮೇಳ

Suddi Udaya

ಪಾರೆಂಕಿ ಶ್ರೀ ಮಹಿಷಮರ್ದಿನಿ ಯಕ್ಷಗಾನ ಸಂಘದ ವಾರ್ಷಿಕೋತ್ಸವದ ಅಂಗವಾಗಿ ಶಷ್ಟಬ್ಧಿ ಪೂರೈಸಿದ ಸುಣ್ಣೆಂಬಳ ವಿಶೇಶ್ವರ ಭಟ್ ರಿಗೆ ಗೌರವಾರ್ಪಣೆ

Suddi Udaya
error: Content is protected !!