September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಕ್ರೈಸ್ತ ಶಿಕ್ಷಣ ದಿನ

ಉಜಿರೆ: ಮಕ್ಕಳಿಗೆ ಶಿಕ್ಷಣ ಅತ್ಯಗತ್ಯ. ಶಿಕ್ಷಣ ಇಲ್ಲದೆ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಸಮಾಜದಲ್ಲಿ ಕಲಿಯಲು ಬೇಕಾದಷ್ಟು ಇದೆ. ಶಿಕ್ಷಣ ಯಾವತ್ತೂ ಮುಗಿಯುವುದಿಲ್ಲ ಎಂದು ಪತ್ರಿಕಾ ವರದಿಗಾರ ಹೆರಾಲ್ಡ್ ಪಿಂಟೊ ಹೇಳಿದರು.

ಅವರು ಫೆ. 23ರಂದು ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಕ್ರೈಸ್ತ ಧರ್ಮ ಶಿಕ್ಷಣ ದಿನದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಅವರವರ ಪೋಷಕರು ಮಕ್ಕಳ ಉತ್ತಮ ಶಿಕ್ಷಣಕ್ಕಾಗಿ ದುಡಿಯುತ್ತಾರೆ. ಮಕ್ಕಳಿಗೆ ಶಿಕ್ಷಣ ಪಡೆಯುವುದೇ ಮುಖ್ಯ ಹೊರತು ಬೇರೆ ಏನು ಕೆಲಸ ಇಲ್ಲ. ಕೆಟ್ಟ ಕೆಲಸಗಳನ್ನು ಮಾಡದೆ, ಪರರನ್ನು ಗೌರವಿಸುವುದು ಪ್ರೀತಿಸುವ ಗುಣ ಹೊಂದಿರಬೇಕು. ನಮ್ಮ ಸಹಪಾಠಿಗಳು ವಿದ್ಯಾಭ್ಯಾಸದಲ್ಲಿ ದೂರ ಇದ್ದರೆ ಅಂತವರಿಗೆ ಸಹಾಯ ಮಾಡಬೇಕು. ಅದೇ ದೊಡ್ಡ ಸೇವೆ. ಮೊದಲೆಲ್ಲ ಮಕ್ಕಳು ರಜೆಯಲ್ಲಿ ಕೆಲಸಕ್ಕೆ ಹೋಗಿ ದುಡಿಯುತ್ತಿದ್ದರು ಈಗ ಮಕ್ಕಳು ದುಡಿಯಲು ಅವಕಾಶ ಇಲ್ಲ ಅದುದರಿಂದ ಮಕ್ಕಳು ಉತ್ತಮ ಶಿಕ್ಷಣ ಪಡೆದು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಜೀವಿಸಬೇಕು. ಅನಗತ್ಯ ಮೊಬೈಲ್, ಟಿವಿಯಿಂದ ದೂರವಿರಬೇಕು ಎಂದು ಹೇಳಿದರು.

ಚರ್ಚ್ ಪ್ರಧಾನ ಧರ್ಮಗುರು ಅಬೆಲ್ ಲೋಬೋ ಅಧ್ಯಕ್ಷತೆ ವಹಿಸಿದ್ದರು. ಅನುಗ್ರಹ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಶುಭ ಹಾರೈಸಿದರು. ಚರ್ಚ್ ಪಾಲನಾ ಮಂಡಳಿ ಉಪಾಧ್ಯ ಕ್ಷ ಆಂಟೋನಿ ಫೆರ್ನಾಂಡಿಸ್, ಉಜಿರೆ ಸಿಸ್ಟರ್ ಆಫ್ ಮೇರಿ ಇಮ್ಯಕುಲೆಟ್ ಕಾನ್ವೆಂಟ್ ಸುಪೀರಿಯರ್ ಸಿಸ್ಟರ್ ನ್ಯಾನ್ಸಿ ಡಯಸ್, ಆಯೋಗದ ಸಂಚಾಲಕಿ ಲವೀನಾ ಫೆರ್ನಾಂಡೀಸ್, ಶಿಕ್ಷಣ ಸಂಯೋಜಕ ಗ್ರೆಗ್ ಮೆಲ್ಸ್ಟಾರ್, ಬಹುಮಾನಗಳ ಪ್ರಾಯೋಜಕ ಅನಿಲ್ ಡಿಸೋಜಾ ಉಪಸ್ಥಿತರಿದ್ದರು. ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಶಿಕ್ಷಣದಲ್ಲಿ ಪ್ರಥಮ, ದ್ವೀತಿಯ ಸ್ಥಾನ ಮತ್ತು ಪೂರ್ಣ ಹಾಜರಾತಿ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಹೆಜಲ್ ಜೀಶ ಪಿಂಟೊ ಕಾರ್ಯಕ್ರಮದ ನಿರೂಪಿಸಿದರು. ಶರಣ್ ಡಿಸೋಜಾ ಸ್ವಾಗತಿಸಿ, ಸಂಯೋಜಕ ಗ್ರೆಗ್ ವಂದಿಸಿದರು. ದನ ಸಹಾಯ ಮಾಡಿದವರಿಗೆ ಗೌರವಿಸಲಾಯಿತು.

Related posts

ನಿಡ್ಲೆ : ಅಗ್ರಿಲೀಫ್ ಎಕ್ಸ್‌ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಅಂತರಾಷ್ಟ್ರೀಯ ಮನ್ನಣೆ

Suddi Udaya

ಎನ್ನೆಸ್ಸೆ ಸ್: ಉಜಿರೆ ಶ್ರೀ ಧ. ಮಂ.ಪ.ಪೂ. ಕಾಲೇಜಿನ ಸುದರ್ಶನ್ ನಾಯಕ್ ಗೆ ಉತ್ತಮ ಪರ್ಫಾರ್ಮರ್ ಪ್ರಶಸ್ತಿ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ಮಹಾಸಭೆ: ರೂ.69.68 ಲಕ್ಷ ನಿವ್ವಳ ಲಾಭ, ಶೇ. 10.25ಡಿವಿಡೆಂಟ್ ಘೋಷಣೆ

Suddi Udaya

ಬೆಳ್ತಂಗಡಿ ಪಿಎಸ್‌ಐ ಧನರಾಜ್ ಟಿ.ಎಂ ಹಾಗೂ ಪುಂಜಾಲಕಟ್ಟೆ ಪಿಎಸ್‌ಐ ಓಡಿಯಪ್ಪ ವರ್ಗಾವಣೆ

Suddi Udaya

ವಾಣಿ ಕಾಲೇಜು: ಅಕ್ಷರವಾಣಿ ಭಿತ್ತಿಪತ್ರಿಕೆ ಅನಾವರಣ

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ “ಪೆರ್ಲ ಬೈಪಾಡಿ ಊರುದ ಭಕ್ತಿದ ಎಸಲ್” ತುಳು ಆಡಿಯೋ & ವಿಡಿಯೋ ಆಲ್ಬಮ್ ಬಿಡುಗಡೆ

Suddi Udaya
error: Content is protected !!