23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉರುವಾಲು ಶ್ರೀ ಭಾರತೀ ಆ.ಮಾ. ಪ್ರೌಢ ಶಾಲೆ ಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

ಉರುವಾಲು: ಇಲ್ಲಿನ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಯಲ್ಲಿ ಫೆ.28 ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಯಿತು.ಈ ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ.ಆರ್ ಇವರು ಉದ್ಘಾಟಿಸಿ, ವಿಜ್ಞಾನ ದಿನವನ್ನು ಆಚರಿಸುವ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಮಾಹಿತಿ ಹಂಚಿಕೊಂಡರು ಅಲ್ಲದೆ ಭಾರತೀಯ ಹಲವು ಶ್ರೇಷ್ಠ ಸಾಧಕ ವಿಜ್ಞಾನಿಗಳ ಬಗ್ಗೆ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿಜ್ಞಾನ ವಿಷಯ ಶಿಕ್ಷಕಿಯರಾದ ರಕ್ಷಿತಾ ಹಾಗೂ ಅಂಜಲಿ ಇವರು ಆಧುನಿಕ ಜಗತ್ತಿನಲ್ಲಿ ವಿಜ್ಞಾನದ ಮಹತ್ವ ಹಾಗೂ ಅವಶ್ಯಕತೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ 5, 6 ಹಾಗೂ 7 ನೇಯ ತರಗತಿ ವಿದ್ಯಾರ್ಥಿಗಳು ಸ್ವತಃ ತಾವೇ ಸಿದ್ಧಪಡಿಸಿದ ಹಲವು ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಿ, ಅದರ ಬಗ್ಗೆ ಉತ್ತಮ ಮಾಹಿತಿ ನೀಡಿದರು.

Related posts

ತಣ್ಣೀರುಪಂತ: ದೀಪಾವಳಿ ಪ್ರಯುಕ್ತ ದೀಪ ಸಂಜೀವಿನಿ, ಹಳ್ಳಿ ಸಂತೆ

Suddi Udaya

ಪಂಜ: ವಲಯ ಅರಣ್ಯಾಧಿಕಾರಿಯಾಗಿ ಬೆಳ್ತಂಗಡಿಯ ಶ್ರೀಮತಿ ಸಂಧ್ಯಾ ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿ: ಆರ್ ಐ ಪ್ರತೀಶ್ ಉಪ ತಹಶೀಲ್ದಾರ್ ಆಗಿ ಭಡ್ತಿಗೊಂಡು ಬಂಟ್ವಾಳ ತಾಲೂಕಿಗೆ ವರ್ಗಾವಣೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಧರ್ಮಸ್ಥಳದ ಆಕರ್ಷ್‌ ರಾಜ್ಯಕ್ಕೆ ಐದನೇ ಸ್ಥಾನ

Suddi Udaya

ಬೆಳಾಲು : ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು

Suddi Udaya

ಮಿತ್ತಬಾಗಿಲು: ಮನೆಯ ಬೀಗ ಮುರಿದು ನಗದು ಕಳ್ಳತನ

Suddi Udaya
error: Content is protected !!