23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಗತಿಯ ಸಮಾರೋಪ ಸಮಾರಂಭ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷಗಾನ ತರಗತಿಯ ಸಮಾರೋಪ ಸಮಾರಂಭ ಮಾ.1ರಂದು ನಡೆಯಿತು.


ಯಕ್ಷಗಾನ ಗುರುಗಳಾದ ಲಕ್ಷ್ಮಣ ಗೌಡ ಇವರು ಮಕ್ಕಳನ್ನು ಕುರಿತು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕಲೆಯನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕು. ನೀವು ಯಾವುದೇ ಉದ್ಯೋಗವನ್ನು ಹೊಂದಿರಬಹುದು ಆದರೆ ನೀವು ಕಲಿತ ಈ ಯಕ್ಷಗಾನ ವಿದ್ಯೆಯನ್ನು ಮರೆಯಬೇಡಿ. ನೀವೆಲ್ಲರೂ ಸತ್ಪ್ರಜೆಯಾಗಿ ಬಾಳಿ ಬದುಕಿ ಎಂದು ಶುಭ ಹಾರೈಸಿದರು.


ಹಿರಿಯ ಶಿಕ್ಷಕ ಜೋಸೆಫ್ ರವರು ಮಾತನಾಡಿ ಯಕ್ಷಗಾನ ಒಂದು ವಿಶೇಷ ಕಲೆ . ಎಲ್ಲಾ ಕಲೆಗಳ ಹಿರಿಯ ಕಲೆಯಾಗಿದೆ. ವಿದ್ಯಾರ್ಥಿಗಳಾದ ನೀವು ತಂದೆ ತಾಯಿ ದೇವರನ್ನು ಪ್ರೀತಿಸಬೇಕು. ಇತರರನ್ನು ಪ್ರೀತಿಸುವ ಗುಣವನ್ನು ಹೊಂದಿರಬೇಕು ಎಂದು ಹೇಳಿದರು.
ಯಕ್ಷಗಾನ ತರಗತಿಯ ಮಕ್ಕಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಕಾರ್ಯಕ್ರಮವನ್ನು ಶಿಕ್ಷಕ ಶೇಖರ್ ಗೌಡ ನಿರ್ವಹಿಸಿ, ಸಂಜೀವ ಕೆ ಸ್ವಾಗತಿಸಿ, ಶ್ರೀಮತಿ ಪೂರ್ಣಿಮಾ ವಂದಿಸಿದರು .

Related posts

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಅಮೂಲ್ಯ ವಜ್ರಗಳ ಹಬ್ಬಕ್ಕೆ ಚಾಲನೆ: ಗ್ರಾಹಕರ ಕೈಗೆಟಕುವ ರೀತಿಯಲ್ಲಿ ‘ಡೈಮಂಡ್ ಫೆಸ್ಟ್’

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಸoಪನ್ನ

Suddi Udaya

ಅ.2: ನಾಗರಿಕ ಅಭಿನಂದನಾ ಸಮಿತಿ ವತಿಯಿಂದ ನಿವೃತ್ತ ಯೋಧ ಮಂಜುನಾಥ ಹಾಗೂ ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಇಂದಬೆಟ್ಟು ಶ್ರೀ ವೀರಭದ್ರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ದ.ಕ. ಸ.ಹಾ.ಉ. ಒಕ್ಕೂಟದ ನೂತನ ಜಿಲ್ಲಾ ನಿರ್ದೇಶಕರಾಗಿ ಆಯ್ಕೆಯಾದ ಎಚ್. ಪ್ರಭಾಕರ ಹುಲಿಮೇರು ರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya
error: Content is protected !!