April 21, 2025
ಗ್ರಾಮಾಂತರ ಸುದ್ದಿ

ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ನವೀಕೃತ ಕೊಠಡಿಯ ಉದ್ಘಾಟನಾ ಸಮಾರಂಭವು

ಇಂದಬೆಟ್ಟು : ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ನವೀಕೃತ ಕೊಠಡಿಯ ಉದ್ಘಾಟನಾ ಸಮಾರಂಭವು ಮಾ. 1ರಂದು ನೆರವೇರಿತು.

ಈ ಸಮಾರಂಭದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಯುತ ಹರೀಶ್ ಪೂಂಜ ಇವರು ನವೀಕೃತ ಕೊಠಡಿಯನ್ನು ಉದ್ಘಾಟನೆ ಮಾಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದಂತಹ ವಿಧಾನ ಪರಿಷತ್ ಶಾಸಕರಾದ ಶ್ರೀಯುತ ಪ್ರತಾಪ್ ಸಿಂಹ ನಾಯಕ್ ಇವರು ಮಾತನಾಡಿ ಶಾಲಾ ಕೊಠಡಿಗಳನ್ನು ಬಣ್ಣದ ರಂಗಿನಿಂದ ವರ್ಣ ರಂಜಿತಗೊಳಿಸಿ ಮುದ್ದು ಮಕ್ಕಳ ಮತ್ತು ಊರಿನ ಜನತೆಯ ಮುಖದಲ್ಲಿ ಮಂದಹಾಸ ಮೂಡಿಸಿದಂತಹ ಲಯನ್ಸ್ ಕ್ಲಬ್ ನ ಅಧ್ಯಕ್ಷರನ್ನು ಅಭಿನಂದಿಸಿದರು

. ಹಾಗೂ ಎಲ್ಲಾ ಊರಿನ ಜನರು ತಮ್ಮ ಮಕ್ಕಳನ್ನು ಕನ್ನಡ ಮಾಧ್ಯಮ ಶಾಲೆಗೆ ಸೇರಿಸಬೇಕೆಂಬ ಕಿವಿ ಮಾತನ್ನು ಕೂಡ ನೀಡಿದರು. ಮತ್ತೋರ್ವ ಅತಿಥಿಯಾಗಿ ಆಗಮಿಸಿದಂತಹ ಬದುಕು ಕಟ್ಟೋಣ ತಂಡದ ಸಂಚಾಲಕರಾದಂತಹ ಮೋಹನ್ ಕುಮಾರ್ ಇವರು ನಮ್ಮ ಮನಸ್ಸಿನಲ್ಲಿ ಸರಕಾರಿ ಶಾಲೆಗಳು ಹೀಗೆ ಇರಬೇಕೆಂಬ ಒಂದು ನಿರೀಕ್ಷೆ ಇದೆ.ಈ ನಿರೀಕ್ಷೆಗೆ ಅನುಗುಣವಾಗಿ ಲಯನ್ಸ್ ಕ್ಲಬ್ ಬೆಳ್ತಂಗಡಿ ಈ ಸರಕಾರಿ ಶಾಲೆಯನ್ನು ವರ್ಣ ರಂಜಿತ ಗೊಳಿಸಿದೆ. ಎಂದು ತಿಳಿಸಿದರು. ಲಯನ್ಸ್ ಅಧ್ಯಕ್ಷರಾದಂತಹ ದೇವದಾಸ್ ಶೆಟ್ಟಿ ಇವರು ಬಂದಂತಹ ಎಲ್ಲಾ ಅತಿಥಿಗಳನ್ನು ಸ್ವಾಗತಿಸಿದರು. ಶಾಲೆಯ ಮುಖ್ಯ ಶಿಕ್ಷಕಿಯಾದಂತಹ ದೀಪಾ ಇವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಲಯನ್ ಕಿರಣ್ ಕುಮಾರ್ ಶೆಟ್ಟಿ ಮಾತನಾಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶಾಸಕರಾದ ಹರೀಶ್ ಪೂಂಜ, ವಿಧಾನ ಪರಿಷತ್
ಶಾಸಕರಾದಂತಹ ಪ್ರತಾಪ್ ಸಿಂಹ ನಾಯಕ,ಲಯನ್ ದೇವದಾಸ್ ಶೆಟ್ಟಿ ಹಾಗೂ ಚಿತ್ರ ಕಲಾವಿದ ಧನುಷ್ ಇವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಆಶಾಲತಾ ಗುಡಿಗಾರ್ ಗ್ರಾಮ ಪಂಚಾಯತ್, ಸದಸ್ಯರಾದ ಆನಂದ ಅಡಿಲು, ಎಸ್ಡಿಎಂಸಿ ಅಧ್ಯಕ್ಷರಾದ ಆನಂದ ಕೊಪ್ಪದ ಕೋಡಿ ಹಾಗೂ ಲಯನ್ ಅಶೋಕ್ ಬಿ.ಪಿ ಉಪಸ್ಥಿತರಿದ್ದರು. ಅತಿಥಿ ಶಿಕ್ಷಕಿ ಸುಜಾತ ಧನ್ಯವಾದ ವಿತ್ತರು.ಪ್ರಾಥಮಿಕ ಪದವೀಧರ ಶಿಕ್ಷಕಿ ಮೇಘ ಎಮ್.ಕೆ ಇವರು ಕಾರ್ಯಕ್ರಮ ನಿರೂಪಣೆ ಮಾಡಿದರು.

Related posts

ಮಡಂತ್ಯಾರು: ‘ನೇತ್ರ ವೈದ್ಯರ ನಡೆ ಗ್ರಾಮ ಪಂಚಾಯತ್ ಕಡೆ’ ಯೋಜನಡಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಬಂದಾರು: ಮತಪ್ರಚಾರ ಮಹಾ ಅಭಿಯಾನ

Suddi Udaya

ನಡ: ಅರಣ್ಯ ಇಲಾಖೆ, ಗ್ರಾ.ಪಂ. ನಡ ಮತ್ತು ವಿಪತ್ತು ತಂಡದ ವತಿಯಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya

ರಸ್ತೆ ಬದಿ ವಾಹನ ನಿಲ್ಲಿಸುವರಿಗೆ ಎಚ್ಚರಿಕೆ, ಬ್ಯಾಟರಿ ಕಳ್ಳರಿದ್ದಾರೆ: ಸುಲ್ಕೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಲವು ವಾಹನಗಳ ಬ್ಯಾಟರಿ ಕಳವು; ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ರೆಖ್ಯ: ಕಾಂಗ್ರೆಸ್ ಮುಖಂಡ ಸುನಿಲ್ ಕೋಟಿಮಾರ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಶ್ರೀರಾಮ ಪ್ರತಿಷ್ಠೆಯ ಸಂಭ್ರಮದ ಸಮಯ ಕಾಂಗ್ರೆಸ್ ತುಷ್ಟೀಕರಣದ ನೀತಿಗೆ ಅಂಟಿಕೊಂಡಿರುವುದು ವಿಪರ್ಯಾಸ: ಪ್ರತಾಪ್‌ಸಿಂಹ ನಾಯಕ್

Suddi Udaya
error: Content is protected !!