32.5 C
ಪುತ್ತೂರು, ಬೆಳ್ತಂಗಡಿ
March 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ಗ್ರಾ.ಪಂ. ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

ಶಿರ್ಲಾಲು ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ವಿಶೇಷಚೇತನರ ಸಮನ್ವಯ ಗ್ರಾಮ ಸಭೆಯನ್ನು ಸರ್ಕಾರದ ಆದೇಶದಂತೆ ಫೆ. 28 ರಂದು ಶಿರ್ಲಾಲು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾ ಎಂ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸುಶೀಲಾ ಸ್ವಾಗತಿಸಿದರು. ಹಾಗೂ 2024-25 ನೇ ಸಾಲಿನ ವಿಶೇಷಚೇತನರ ವಾರ್ಷಿಕ ವರದಿಯನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ಹರೀಶ್ ಇವರು ವಾಚಿಸಿದರು.
ವಿಕಲಚೇತನರಿಗೆ ವಿಕಲಚೇತನರ ಇಲಾಖೆ ಹಾಗೂ ಇತರ ಎಲ್ಲಾ ಇಲಾಖೆಗಳಿಂದ ಸಿಗುವ ಸರಕಾರದ ಸಮಗ್ರ ಮಾಹಿತಿಯನ್ನು ತಾಲೂಕು ವಿವಿದೊದ್ದೇಶ ಪುನರ್ವಸತಿ ಸಂಯೋಜಕರಾದ ಜೋನ್ ಬ್ಯಾಪ್ಟಿಸ್ಟ್ ಡಿ ಸೋಜಾ ನೀಡಿದರು.
2024-25 ನೇ ಸಾಲಿನ ಶೇಕಡಾ 5% ರ ಅನುದಾನದಲ್ಲಿ 3 ಜನ ವಿಕಲಚೇತನರಿಗೆ ನೀರಿನ ಟ್ಯಾಂಕ್ ಹಾಗೂ ಒಬ್ಬರಿಗೆ ವಾಕಿಂಗ್ ಸ್ಟಿಕ್ ಮತ್ತು ವಿಶೇಷಚೇತನ ವಿದ್ಯಾರ್ಥಿಗೆ ಸ್ಟಡಿ ಟೇಬಲ್ ನೀಡಲಾಯಿತು, ಹಾಗೂ 5 ಜನ ವಿಕಲಚೇತನರಿಗೆ ಮನೆದುರಸ್ತಿಗೆ ಮತ್ತು ವೈದ್ಯಕೀಯ ಸಹಾಯಧನದ ಚೆಕ್ ಹಸ್ತಾಂತರಿಸಲಾಯಿತು.

ಪಂಚಾಯತ್ ಅಬಿವೃದ್ದಿ ಅಧಿಕಾರಿಯವರು ಪಂಚಾಯತ್ ನಿಂದ ವಿಕಲಚೇತನರಿಗೆ ಸಿಗುವ ಸೌಲಭ್ಯ ಹಾಗೂ ಉದ್ಯೋಗ ಖಾತರಿ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಪಂಚಾಯತ್ ಉಪಾಧ್ಯಕ್ಷರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಗ್ರಾಮ ಪಂಚಾಯತ್ ಅಧ್ಯಕ್ಷರು ಪಂಚಾಯತ್ ಹಾಗೂ ಇತರ ಇಲಾಖೆಗಳ ಪ್ರಯೋಜನಗಳನ್ನು ಹೆಚ್ಚಿನ ರೀತಿಯಲ್ಲಿ ಸದುಪಯೋಗಪಡಿಸಿಕೊಳ್ಳಬೇಕಾಗಿ ತಿಳಿಸಿದರು.


ವಿಕಲಚೇತನರ ಬೇಡಿಕೆಗಳನ್ನು ಸಭೆಯಲ್ಲಿ ಪಡೆದುಕೊಳ್ಳಲಾಯಿತು.
ಸಭೆಯಲ್ಲಿ ಪಂಚಾಯತ್ ಸಿಬ್ಬಂದಿಗಳು, ಗ್ರಂಥಾಲಯ ಮೇಲ್ವೀಚಾರಕಿ, ಸಂಜೀವಿನಿ ಒಕ್ಕೂಟದ ಎಮ್.ಬಿ.ಕೆ, ಎಲ್.ಸಿಆರ್ ಪಿ, ಪಶುಸಖಿ ಸಹಕರಿಸಿದರು. ಸಭೆಯಲ್ಲಿ ಪಂಚಾಯತ್ ನ ಸರ್ವ ಸದಸ್ಯರು, ಅಳದಂಗಡಿ ಗ್ರಾಮ ಪಂಚಾಯತ್ ನ ವಿ ಆರ್ ಡಬ್ಲೂ ಸಂದ್ಯಾ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ವಿಕಲಚೇತನರು ಹಾಗೂ ಪೋಷಕರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ನಾಮಪತ್ರ ಹಿಂತೆಗೆದುಕೊಂಡ ಇಬ್ಬರು ಅಭ್ಯರ್ಥಿಗಳು

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಕಲ್ಮಂಜ: ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ-ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಲಾಯಿಲ: ಗುರಿಂಗಾನ ಸೇತುವೆ ಹಾನಿಗೊಳಗಾಗಿದ್ದು ಸ್ಥಳಕ್ಕೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಕದಿರು (ತೆನೆ) ಹಬ್ಬ 

Suddi Udaya

ಶಿರ್ತಾಡಿ: ಸಾಯಿ ಎಂಟರ್ಪ್ರೈಸಸ್ ನಲ್ಲಿ 4 ನೇ ಹಂತದ ಲಕ್ಕಿ ಸ್ಕೀಮ್: 15 ಸದಸ್ಯರನ್ನು ಸೇರಿಸಿದ ಸದಸ್ಯರಿಗೆ ಸ್ಕೀಮ್ ಕಾರ್ಡ್ ಉಚಿತ

Suddi Udaya
error: Content is protected !!