22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಆಚರಣೆ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅಂಗಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ವಿಜ್ಞಾನ ಸಂಘದ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನವನ್ನು ಬಹಳ ವಿಶಿಷ್ಟ ರೀತಿಯಲ್ಲಿ, ಅರ್ಥಪೂರ್ಣವಾಗಿ ಆಚರಿಸಲಾಯಿತು.

ರಾಷ್ಟ್ರೀಯ ವಿಜ್ಞಾನ ದಿನದ ವಿಶೇಷ ಪ್ರತಿಜ್ಞಾವಿಧಿ ಮತ್ತು ರಾಷ್ಟ್ರೀಯ ವಿಜ್ಞಾನ ದಿನದ ಮಹತ್ವದ ಕುರಿತು ವಿಚಾರ ಮಂಡನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಿಜ್ಞಾನಕ್ಕೆ ಸಂಬಂಧಪಟ್ಟ ವಿಶಿಷ್ಟವಾದ ರಂಗೋಲಿ, ಭಿತ್ತಿ ಪತ್ರಗಳನ್ನು ರಚಿಸಲಾಗಿತ್ತು. ವಿವಿಧ ತರಗತಿಯ ಮಕ್ಕಳಿಗೆ ವಿಜ್ಞಾನದ ಕುರಿತ ಪದಬಂಧ, ಚಿತ್ರಕಲಾ ಸ್ಪರ್ಧೆ, ವಿಜ್ಞಾನ ರಸಪ್ರಶ್ನೆ , ವಿಜ್ಞಾನ ಹಾಗೂ ಗಣಿತದ ಮಾದರಿಗಳ ತಯಾರಿಕೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

ಸಂಜೆಯ ಅಸೆಂಬ್ಲಿಯಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿಯವರಾದ ಶ್ರೀಮತಿ ಪರಿಮಳ ಎಮ್.ವಿ ಇವರು ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು. ಶಿಕ್ಷಕಿಯರಾದ ಶ್ರೀಮತಿ ಅನುಷಾ ಮತ್ತು ಶ್ರೀಮತಿ ಅಂಜು ರೂಪುಗೊಳಿಸಿದ ಕಾರ್ಯಕ್ರಮದಲ್ಲಿ ಎಲ್ಲ ವಿಜ್ಞಾನ ಹಾಗೂ ಗಣಿತ ಶಿಕ್ಷಕರು ಪಾಲ್ಗೊಂಡಿದ್ದರು.

Related posts

ಧರ್ಮಸ್ಥಳ-ನಾರಾವಿ ನಡುವಿನ ಸರಕಾರಿ ಬಸ್ ತಡೆ ಹಿಡಿದಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಇಂದು ಸಂಜೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಬೃಹತ್ ಪ್ರತಿಭಟನೆ

Suddi Udaya

ಕಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಪಂಚಾಯತ್ ಅನುದಾನದಿಂದ ಅಳವಡಿಸಿದ ಸೋಲಾರ್ ಲೈಟ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ರೆಖ್ಯ ,ಕಳೆಂಜ, ಕೊಕ್ಕಡ, ಶಿಶಿಲ ರಸ್ತೆಗಳಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ವೇಗ ನಿಯಂತ್ರಕ ಉಬ್ಬುಗಳಿಗೆ ಬಣ್ಣ ಬಳಿಯುವ ಕಾರ್ಯ

Suddi Udaya

ಹವ್ಯಾಸಿ ಕಲಾವಿದ ಶಶಿಧರ.ಕೆ ಅವರ ಷಷ್ಟ್ಯಬ್ಧ ಕಾರ್ಯಕ್ರಮದ ಪ್ರಯುಕ್ತ ಯಕ್ಷಭಾರತಿಯಿಂದ ಅಭಿನಂದನೆ ಮತ್ತು ತಾಳಮದ್ದಳೆ

Suddi Udaya

ಬೆಳ್ತಂಗಡಿ: ಲಯನ್ಸ್ ಜಿಲ್ಲಾ ರಾಜ್ಯಪಾಲ, ಖ್ಯಾತ ಉದ್ಯಮಿ ಸಂಜೀತ್ ಶೆಟ್ಟಿ ರವರ ಅಧಿಕೃತ ಭೇಟಿ ಹಾಗೂ ಸ್ಥಾಪಕರ ದಿನಾಚರಣೆ

Suddi Udaya

ಕೊಕ್ಕಡ: ಶ್ರೀ ಲಕ್ಷ್ಮೀ ಪ್ರೋಫೇಶನಲ್ ಲೇಡಿಸ್ ಬ್ಯೂಟಿಪಾರ್ಲರ್ ಶುಭಾರಂಭ

Suddi Udaya
error: Content is protected !!