September 6, 2026
Uncategorized

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

ಸರಳಿಕಟ್ಟೆ: ಇಲ್ಲಿನ ಜುಮ್ಮಾ ಮಸೀದಿ ವ್ಯಾಪ್ತಿಯ 175 ಕುಟುಂಬಗಳಿಗೆ ಈ ಬಾರಿಯ ರಂಝಾನ್ ಕಿಟ್ ವಿತರಿಸಲಾಯಿತು.

ಸ್ಥಳೀಯ ಜುಮ್ಮಾ ಮಸೀದಿಯ ಖತೀಬ್ ಬಹು. ಅಬ್ದುರ್ರಹೀಂ ಅಝ್ಹರಿ ಸಖಾಫಿಯವರು ದುವಾ ನೆರವೇರಿಸುವ ಮೂಲಕ ಸರಳಿಕಟ್ಟೆ ಮಸೀದಿ ವಠಾರದಲ್ಲಿ ನಡೆದ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸರಳಿಕಟ್ಟೆ ಜಮಾಅತ್ ವ್ಯಾಪ್ತಿಯಲ್ಲಿರುವ ಬಡ ಹಾಗೂ ಮಧ್ಯಮ ಕುಟುಂಬಗಳು ಸೇರಿದಂತೆ 175 ಕುಟುಂಬಗಳಿಗೆ ಆಹಾರ ಪದಾರ್ಥಗಳ ಕಿಟ್ ವಿತರಿಸುವ ಮೂಲಕ ಸರಳಿಕಟ್ಟೆ ಗೈಸ್ ಅತ್ಯಂತ ಪುಣ್ಯದ ಮತ್ತು ಗೌರವದ ಕಾರ್ಯವನ್ನು ನೆರವೇರಿಸಿದೆ.

ಸರಳಿಕಟ್ಟೆ ಊರಿನ ಉದ್ಯಮಿಗಳ,ದಾನಿಗಳ ನೆರವಿನಿಂದ ಸರಳಿಕಟ್ಟೆ ಗೈಸ್ ಜಮಾಅತ್ ವ್ಯಾಪ್ತಿಯ ಸದಸ್ಯರ ಚಿಕಿತ್ಸೆಯ ವೆಚ್ಚ, ನಿರ್ಗತಿಕರಿಗೆ ನೆರವು, ಮನೆ ನಿರ್ಮಾಣಕ್ಕೆ ಸಹಾಯ, ಮದುವೆಗೆ ಸಹಾಯಧನ ಸೇರಿದಂತೆ ಹತ್ತಾರು ಸಮಾಜಮುಖಿ‌ ಕಾರ್ಯಗಳನ್ನು ಸದಾ ನಡೆಸುತ್ತಾ ಮುನ್ನಡೆಯುತ್ತಿದೆ.

ರಂಝನ್ ಕಿಟ್ 175 ಕುಟುಂಬಗಳ ಮನೆಗಳಿಗೆ ತಲುಪಿಸುವ ಕಾರ್ಯವನ್ನು ಸರಳಿಕಟ್ಟೆ ಗೈಸ್ ಪದಾಧಿಕಾರಗಳೇ ವಾಹನಗಳ ಮೂಲಕ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಮಸೀದಿ ಆಡಳಿತ ಸಮಿತಿ ಅಧ್ಯಕ್ಷರಾದ ಹಾಜಿ ಪಿ.ಎಂ. ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿ ಅಬ್ದುಲ್ಲತೀಫ್ ಪಿ.ಎಸ್, ಜೊತೆ ಕಾರ್ಯದರ್ಶಿ ಆಸಿಫ್ ಪುಯಿಲ, ಸಮಿತಿ ಸದಸ್ಯರಾದ ಅಬ್ಬಾಸ್ ಮಡಿಕೆರೆಬೆಟ್ಟು, ನಾಸಿರ್ ಎಸ್, ಸಮದ್ ಎಸ್, ಉದ್ಯಮಿಗಳಾದ ಅಶ್ರಫ್ ಬಂಡಾಡ್, ಮುಸ್ತಫಾ ಕಾಜಿನಳಿಕೆ, ಉನೈಸ್ ಚಿಂಗಾಣಿಬೆಟ್ಟು, ನವಾಝ್ ಪಿ.ಎಸ್. ಹೈದರ್ ಗುಂಪಕಲ್ಲು, ಮುಸ್ತಫಾ ಕುರುಬರಪಾಲು, ನೌಮನ್ ಸರಳಿಕಟ್ಟೆ, ಖಾಸಿಂ ಮೇಗಿನಪುಯಿಲ, ಅಬ್ಬಾಸ್ ನೆಲ್ಲಿಪಳಿಕೆ ಉಪಸ್ಥಿತರಿದ್ದರು.

Related posts

ಮೇ 26: ಕಾಯರ್ತಡ್ಕ ನಂದಗೋಕುಲ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ, ಗೋನಂದಾರತಿ, ದೀಪೋತ್ಸವ

Suddi Udaya

ಕಡಿರುದ್ಯಾವರ ಸಿರಿಬೈಲು ಮುತ್ತಲಕೋಡಿ ಪರಿಸರದಲ್ಲಿಕಂಡು ಬಂದ ಕಾಡಾನೆ

Suddi Udaya

ಪುಕ್ಕಟೆ ಪ್ರಚಾರಕ್ಕಾಗಿ ಬಿಜೆಪಿ ಸರ್ಕಾರದ ಸಾಧನೆಗಳನ್ನು ತನ್ನದೆಂದು ಬಿಂಬಿಸುವ ಬೆಳ್ತಂಗಡಿ ಕಾಂಗ್ರೆಸಿಗರು – ಗಣೇಶ್ ಗೌಡ ನಾವೂರು

Suddi Udaya

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya

ಮೇಲಂತಬೆಟ್ಟು: ನಲ್ಕೆತ್ಯಾರು ಬ್ರಹ್ಮಬೈದರ್ಕಳ ಗರಡಿ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ನಡ ಕೇಳ್ತಾಜೆ ಮಂಚಕಲ್ಲಿನಲ್ಲಿ ರಸ್ತೆಗೆಅಡ್ಡವಾಗಿ ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

Suddi Udaya
error: Content is protected !!