25.8 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಉಜಿರೆ: ಎಂಪೀರಿಯಾ ಕಾರ್ಪೋರೇಶನ್ ಸಂಸ್ಥೆಯ 2ನೇ ವರ್ಷದ ಸಂಭ್ರಮಾಚರಣೆ ಹಾಗೂ ಮಾಹಿತಿ ಕಾರ್ಯಾಗಾರ

ಉಜಿರೆ: ಮಂಗಳೂರು ಎಂಪೀರಿಯಾ ಕಾರ್ಪೋರೇಶನ್ ಸಂಸ್ಥೆಯ 2ನೇ ವರ್ಷದ ಸಂಭ್ರಮಾಚರಣೆ ಹಾಗೂ ಮಾಹಿತಿ ಕಾರ್ಯಾಗಾರವು ಮಾ.2 ರಂದು ಉಜಿರೆ ಒಶಿಯನ್ ಪರ್ಲ್ ನಲ್ಲಿ ನಡೆಯಿತು.

ಗೋಕುಲಮಾರ್ಟ್ ಫರ್ನಿಚರ್ & ಇಲೆಕ್ಟ್ರಾನಿಕ್ಸ್ ವಿಂಗ್ ಇದರ ಮ್ಯಾನೇಜಿಂಗ್ ಡೈರೆಕ್ಟರ್ ಕಿಶನ್ ಆಚಾರ್ಯ ಮಾಹಿತಿ ಕಾರ್ಯಾಗಾರವನ್ನು ನಡೆಸಿಕೊಟ್ಟರು. ಎಂಪೀರಿಯಾ ಕಾರ್ಪೋರೇಶನ್ ಹಾಗೂ ಗೋವರ್ಧನ ಗಿರಿ ಕೋ ಆಪರೇಟಿವ್ ಸೊಸೈಟಿಯ ಮುಖ್ಯ ಪ್ರವರ್ತಕ ನಿಶಾನ್ ಕೃಷ್ಣ ಭಂಡಾರಿ ಸಂಸ್ಥೆಯ ಕಾರ್ಯ ಯೋಜನೆ ಮತ್ತು ಸಂಸ್ಥೆ ಬೆಳೆದು ಬಂದ ಹಾದಿಯನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಾದ ಮುಂಡಾಜೆ ಯಂಗ್ ಚಾಲೆಂಜರ್ಸ್ ನ ನಾಮದೇವ ರಾವ್, ಪುಷ್ಪರಾಜ್ ಗೌಡ, ಜಯರಾಜ್ ಸಾಲ್ಯಾನ್, ನಾಟಿ ವೈದ್ಯ ಬಾಬು ಮುಗೇರ ರವರುಗಳನ್ನು ಸನ್ಮಾನಿಸಲಾಯಿತು.

ಎಂಪೀರಿಯಾ ಸಂಸ್ಥೆಯ ಸಾಧಕರಾದ ಮಮತಾ ತೋಟತ್ತಾಡಿ, ಅಂಟೋನಿ, ಮಹಮ್ಮದ್ ನಜಿರ್, ಆಯಿಷತ್ ಜೆಸಿಲಾ, ವರ್ಗಿಸ್, ಪ್ರಶಾಂತ್ ಗೇರುಕಟ್ಟೆ, ಹರಿಣಿ, ಜಯಲಕ್ಷ್ಮಿ, ಧನರಾಜ್, ಗುಣವತಿ, ಕೇಶವ ಗೌಡ, ಶ್ರೀಧರ್ ಶೆಟ್ಟಿಪಾಲ್, ಜಯಂತಿ ಕಾಶಿಪಟ್ನ, ಧನಂಜಯ್, ಸುಂದರ ಡಿ. ಧರ್ಮಸ್ಥಳ, ಮುಕುಂದ ಎಂ.ಕೆ, ಶಶಿಧರ ಧರ್ಮಸ್ಥಳ, ಸುನಿತಾ ಧರ್ಮಸ್ಥಳ, ಮಿಥುನ್ ಕುಮಾರ್, ಚಂದ್ರಶೇಖರ್ ಭವ್ಯ, ಚಂದ್ರಶೇಖರ್ ಗೌಡ ಭವ್ಯಶ್ರೀ, ಕಮಲಾಕ್ಷ ಗೌಡ ಕಡಿರುದ್ಯಾವರ, ಹರಿಣಾಕ್ಷಿ ಶ್ರೀನಿವಾಸ ಮಂಗಳೂರು, ಪ್ರಮೋದ್ ನಾಯ್ಕ ಕಾನರ್ಪ, ಮುಕೇಶ್ ಮೂಡಿಗೆರೆ, ವರ್ಗಿಸ್ ಪಾಲೇಲಿ, ಪ್ರಮೋದ್ ಕವಿತಾ ರವರುಗಳನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಆಯೋಜಕರಾದ ನಂದೀಶ್ ಕೆ. ಭಂಡಾರಿ ಮುಂಡಾಜೆ, ರಾಮಚಂದ್ರ ಗೌಡ ಕೆ. ಕಾನರ್ಪ, ಭವ್ಯ ಚಂದ್ರಶೇಖರ್ ಗೌಡ ಕಾನರ್ಪ, ಭವ್ಯಶ್ರೀ ಚಂದ್ರಶೇಖರ್ ಗೌಡ ಕಡಿರುದ್ಯಾವರ, ಹಾಗೂ ನೂತನ ಹೂಡಿಕೆದಾರರು ಉಪಸ್ಥಿತರಿದ್ದರು.

ಯುವ ಸಾಹಿತಿ ಚಂದ್ರಹಾಸ ಬಳಂಜ ನಿರೂಪಿಸಿದರು. ಕಾರ್ಯಕ್ರಮದ ಆಯೋಜಕರಾದ ಭವ್ಯ ಚಂದ್ರಶೇಖರ್ ಗೌಡ ಕಾನರ್ಪ ವಂದಿಸಿದರು. ಚಿತ್ರ: ಸುರೇಶ್ ಕೌಡಂಗೆ

Related posts

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಮತ್ತಷ್ಟು ವಿಘ್ನ : ಚುನಾವಣೆಯಲ್ಲಿ ನಿಯಮಗಳ ಉಲ್ಲಂಘನೆ ಮೂರು ಮಂದಿ ನಿರ್ದೇಶಕರಿಂದ ಚುನಾವಣಾಧಿಕಾರಿಗಳಿಗೆ ಮನವಿ

Suddi Udaya

ಕಿಲ್ಲೂರು ಇರ್ಷಾದುಶ್ಶಿಬಿಯಾನ್ ಅರಬಿಕ್ ಮದರಸ ವಿದ್ಯಾರ್ಥಿಗಳಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಕೊಯ್ಯೂರು ಸ .ಹಿ ಪ್ರಾ. ಶಾಲೆ ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ರವರಿಗೆ ಐಐಬಿ ಬೆಸ್ಟ್ ಬುಸಿನೆಸ್ ಲೀಡರ್‌ಶಿಪ್ ಅವಾರ್ಡ್ -2023 ಪ್ರಶಸ್ತಿ

Suddi Udaya

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾ ಪ್ರತಿಷ್ಠಾನದ ಸೇವಾಶ್ರಮದಲ್ಲಿ ಶುಶ್ರೂಷೆಯ ಪಡೆಯುತ್ತಿದ್ದ ವ್ಯಕ್ತಿ ನಾಪತ್ತೆ

Suddi Udaya

ಕಡಿರುದ್ಯಾವರದಲ್ಲಿ ಮದುಮಗಳಿಂದ ಮತ ಚಲಾವಣೆ

Suddi Udaya
error: Content is protected !!