26.3 C
ಪುತ್ತೂರು, ಬೆಳ್ತಂಗಡಿ
March 3, 2025
Uncategorized

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

ಸರಳಿಕಟ್ಟೆ: ಇಲ್ಲಿನ ಜುಮ್ಮಾ ಮಸೀದಿ ವ್ಯಾಪ್ತಿಯ 175 ಕುಟುಂಬಗಳಿಗೆ ಈ ಬಾರಿಯ ರಂಝಾನ್ ಕಿಟ್ ವಿತರಿಸಲಾಯಿತು.

ಸ್ಥಳೀಯ ಜುಮ್ಮಾ ಮಸೀದಿಯ ಖತೀಬ್ ಬಹು. ಅಬ್ದುರ್ರಹೀಂ ಅಝ್ಹರಿ ಸಖಾಫಿಯವರು ದುವಾ ನೆರವೇರಿಸುವ ಮೂಲಕ ಸರಳಿಕಟ್ಟೆ ಮಸೀದಿ ವಠಾರದಲ್ಲಿ ನಡೆದ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸರಳಿಕಟ್ಟೆ ಜಮಾಅತ್ ವ್ಯಾಪ್ತಿಯಲ್ಲಿರುವ ಬಡ ಹಾಗೂ ಮಧ್ಯಮ ಕುಟುಂಬಗಳು ಸೇರಿದಂತೆ 175 ಕುಟುಂಬಗಳಿಗೆ ಆಹಾರ ಪದಾರ್ಥಗಳ ಕಿಟ್ ವಿತರಿಸುವ ಮೂಲಕ ಸರಳಿಕಟ್ಟೆ ಗೈಸ್ ಅತ್ಯಂತ ಪುಣ್ಯದ ಮತ್ತು ಗೌರವದ ಕಾರ್ಯವನ್ನು ನೆರವೇರಿಸಿದೆ.

ಸರಳಿಕಟ್ಟೆ ಊರಿನ ಉದ್ಯಮಿಗಳ,ದಾನಿಗಳ ನೆರವಿನಿಂದ ಸರಳಿಕಟ್ಟೆ ಗೈಸ್ ಜಮಾಅತ್ ವ್ಯಾಪ್ತಿಯ ಸದಸ್ಯರ ಚಿಕಿತ್ಸೆಯ ವೆಚ್ಚ, ನಿರ್ಗತಿಕರಿಗೆ ನೆರವು, ಮನೆ ನಿರ್ಮಾಣಕ್ಕೆ ಸಹಾಯ, ಮದುವೆಗೆ ಸಹಾಯಧನ ಸೇರಿದಂತೆ ಹತ್ತಾರು ಸಮಾಜಮುಖಿ‌ ಕಾರ್ಯಗಳನ್ನು ಸದಾ ನಡೆಸುತ್ತಾ ಮುನ್ನಡೆಯುತ್ತಿದೆ.

ರಂಝನ್ ಕಿಟ್ 175 ಕುಟುಂಬಗಳ ಮನೆಗಳಿಗೆ ತಲುಪಿಸುವ ಕಾರ್ಯವನ್ನು ಸರಳಿಕಟ್ಟೆ ಗೈಸ್ ಪದಾಧಿಕಾರಗಳೇ ವಾಹನಗಳ ಮೂಲಕ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಮಸೀದಿ ಆಡಳಿತ ಸಮಿತಿ ಅಧ್ಯಕ್ಷರಾದ ಹಾಜಿ ಪಿ.ಎಂ. ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿ ಅಬ್ದುಲ್ಲತೀಫ್ ಪಿ.ಎಸ್, ಜೊತೆ ಕಾರ್ಯದರ್ಶಿ ಆಸಿಫ್ ಪುಯಿಲ, ಸಮಿತಿ ಸದಸ್ಯರಾದ ಅಬ್ಬಾಸ್ ಮಡಿಕೆರೆಬೆಟ್ಟು, ನಾಸಿರ್ ಎಸ್, ಸಮದ್ ಎಸ್, ಉದ್ಯಮಿಗಳಾದ ಅಶ್ರಫ್ ಬಂಡಾಡ್, ಮುಸ್ತಫಾ ಕಾಜಿನಳಿಕೆ, ಉನೈಸ್ ಚಿಂಗಾಣಿಬೆಟ್ಟು, ನವಾಝ್ ಪಿ.ಎಸ್. ಹೈದರ್ ಗುಂಪಕಲ್ಲು, ಮುಸ್ತಫಾ ಕುರುಬರಪಾಲು, ನೌಮನ್ ಸರಳಿಕಟ್ಟೆ, ಖಾಸಿಂ ಮೇಗಿನಪುಯಿಲ, ಅಬ್ಬಾಸ್ ನೆಲ್ಲಿಪಳಿಕೆ ಉಪಸ್ಥಿತರಿದ್ದರು.

Related posts

ಅರಣ್ಯ ಇಲಾಖೆಯಿಂದ ಪ್ರಗತಿ ಬಂಧು ತಂಡಗಳಿಗೆ ಗಿಡ ವಿತರಣೆ

Suddi Udaya

ಅಳದಂಗಡಿ: ಮಾಗ್ದೇಲಿನ್ ಪಿಂಟೋ ನಿಧನ

Suddi Udaya

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಕನ್ನಡ ರಾಜ್ಯೋತ್ಸವದ ಅಂಗವಾಗಿ ನೀಡಲಿರುವ 2025 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವಪ್ರಶಸ್ತಿಗೆ ಜನಪದ ಕ್ಷೇತ್ರದಲ್ಲಿ ಉದಯಕುಮಾರ ಲಾಯಿಲ ಆಯ್ಕೆ

Suddi Udaya

ರಕ್ತೇಶ್ವರಿಪದವು ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಬೆಳ್ಳಿ ಹಬ್ಬ

Suddi Udaya

ಗೇರುಕಟ್ಟೆ ಪೇಟೆಯ ಬಳಿಯ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶ ವ ಪತ್ತೆ

Suddi Udaya
error: Content is protected !!