24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸಮುದಾಯ ಬಾನುಲಿ ಕೇಂದ್ರ ರೇಡಿಯೋ ನಿನಾದ 90.4 ಎಫ್.ಎಂ. ವತಿಯಿಂದ ‘ನಮ್ಮ ಹಿರಿಯರು ನಮ್ಮ ಗೌರವ’ ಮಾಹಿತಿ ಕಾರ್ಯಕ್ರಮ

ಬೆಳಾಲು : ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸಮುದಾಯ ಬಾನುಲಿ ಕೇಂದ್ರ ರೇಡಿಯೋ ನಿನಾದ 90.4 ಎಫ್.ಎಂ. ವತಿಯಿಂದ ಹಿರಿಯ ನಾಗರಿಕರಿಗಾಗಿ ‘ನಮ್ಮ ಹಿರಿಯರು ನಮ್ಮ ಗೌರವ’ ಮಾಹಿತಿ ಕಾರ್ಯಕ್ರಮವು ಮಾ.1 ರಂದು ಬೆಳಾಲು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಭಾರತ ಸರ್ಕಾರ, ಕಮ್ಯೂನಿಟಿ ರೇಡಿಯೋ ಅಸೋಸಿಯೇಶನ್, ನವದೆಹಲಿ ಹಾಗೂ ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ವಿಭಾಗದ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ. ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಅವರು ಮಾತನಾಡಿ, “ಇಂದಿನ ದಿನಗಳಲ್ಲಿ ಹಿರಿಯ ನಾಗರಿಕರು ಹಲವಾರು ಶೋಷಣೆಗಳಿಗೆ ಒಳಗಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಹಾಯವಾಣಿಯ ಮಾಹಿತಿ ನೀಡುತ್ತಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಿರಿಯ ನಾಗರಿಕರಿಗಾಗಿ ಪ್ರತ್ಯೇಕ ವೈವಿಧ್ಯ ಕಾರ್ಯಕ್ರಮ ಆಯೋಜಿಸಲಾಗುವುದು” ಎಂದರು.

ಸಂಪನ್ಮೂಲ ವ್ಯಕ್ತಿ, ರೇಡಿಯೋ ನಿನಾದ ಸಮುದಾಯ ಬಾನುಲಿ ಕೇಂದ್ರದ ಕಾರ್ಯಕ್ರಮ ಸಂಯೋಜಕ ವಿ.ಕೆ. ಕಡಬ ಅವರು, ಹಿರಿಯ ನಾಗರಿಕರ ಸಹಾಯವಾಣಿ, ಪಿಂಚಣಿ ಯೋಜನೆ ಕುರಿತಾಗಿ ಮಾಹಿತಿ ನೀಡಿದರು. ಅಲ್ಲದೆ ಹಿರಿಯ ನಾಗರಿಕರ ಜೊತೆ ಸಂವಾದ ನಡೆಸಿದರು.

ಮುಖ್ಯ ಅತಿಥಿ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ತಾರಾನಾಥ್ ನಾಯ್ಕ್ ಕೆ. ಅವರು ಮಾತನಾಡಿ, ಸರ್ಕಾರಿ ಸವಲತ್ತುಗಳನ್ನು ಗ್ರಾ.ಪಂ. ಮೂಲಕ ಪಡೆಯುವಂತೆ ಸಲಹೆ ನೀಡಿದರು.

ಎಸ್.ಡಿ.ಎಂ. ಸಮಾಜಕಾರ್ಯ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳಾದ ಪಲ್ಲವಿ ಸ್ವಾಗತಿಸಿ, ಸುಶಾಂತ್ ವಂದಿಸಿ, ಶ್ರೇಯಾ ನಿರೂಪಿಸಿದರು. ಪವನ್ ಮತ್ತು ಪ್ರಕೃತ್ ಎಸ್. ಕಾರ್ಯಕ್ರಮ ಸಂಯೋಜಿಸಿದರು.

Related posts

ಎಕ್ಸೆಲ್ ಬೆಳಕು ಯೋಜನೆಯಡಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya

ಡಿ. 13-14 ಬಳಂಜ ಶಾಲೆಗೆ ಅಮೃತ ಸಂಭ್ರಮ, ವಿಶೇಷ ಕಾರ್ಯಕ್ರಮಗಳ ಆಯೋಜನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೇಸಿಗೆ ಶಿಬಿರ

Suddi Udaya

ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಗೆ ಅಮೆರಿಕದ ಪೆನ್ಸಿಲ್ವೇನಿಯ ವಿಶ್ವವಿದ್ಯಾಲಯದ ಅಧ್ಯಯನ ತಂಡ ಭೇಟಿ

Suddi Udaya

ವಾಲಿಬಾಲ್ ಪಂದ್ಯಾಟ: ಚಂದ್ರಶೇಖರ ಗೌಡ ಕೊಯ್ಯೂರು ದ್ವಿತೀಯ ಸ್ಥಾನ

Suddi Udaya

ವೇಣೂರು 5 ಮೆಗಾ ವಾಲ್ಟ್ ವಿದ್ಯುತ್ ಫೀಡರನ್ನು 10 ಮೆಗಾ ವಾಲ್ಟ್ ವಿದ್ಯುತ್ ಫೀಡರ್ ಪರಿವರ್ತಿಸಲು ಮನವಿ

Suddi Udaya
error: Content is protected !!