25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎರಡನೇ ವಾತಿಕಾನ್ ಮಹಾಸಮ್ಮೇಳನದ ಸಂವಿಧಾನಿಕ ದಾಖಲೆಗಳ ಕುರಿತು ವಿಶೇಷ ಕಲಿಕಾ ಶಿಬಿರ

ಬೆಳ್ತಂಗಡಿ: ಕ್ರಿಸ್ತ ಯೇಸುವಿನ ಜನನದ 2025 ನೇ ವರ್ಷದ ಅಂಗವಾಗಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಜ್ಞಾನನಿಲಯ ಪಾಲನಾ ಕೇಂದ್ರದಲ್ಲಿ ವಿಶೇಷ ಕಲಿಕಾ ಶಿಬಿರ ಹಮ್ಮಿಕೊಳ್ಳಲಾಯಿತು. ಶಿಬಿರದಲ್ಲಿ ಕೇರಳದ ಪಾಲಕ್ಕಾಡ್ ಧರ್ಮಪ್ರಾಂತ್ಯದ ಯಾಜಕರಾದ ವಂದನೀಯ ಡಾ. ಅರುಣ್ ಕಲಮತ್ತಂರವರು ಸಂಪನ್ಮೂಲ ವ್ಯಕ್ತಿಗಳಾಗಿದ್ದರು.

1965 ರಲ್ಲಿ ಕೊನೆಗೊಂಡ ಎರಡನೇ ವಾತಿಕಾನ್ ಮಹಾಸಮ್ಮೇಳನದ ಆಧುನಿಕ ಕಾಲದ ಧರ್ಮಸಭೆಯ ಸಂವಿಧಾನಿಕ ದಾಖಲೆಗಳ ಕುರಿತು ಚರ್ಚಿಸಲಾಯಿತು. ಧರ್ಮಸಭೆಯು ಸಮಾಜದಲ್ಲಿ ಒಳಿತಿನ, ಧಾರ್ಮಿಕತೆಯ ಕಾವಲುಗಾರನಾಗಿರಲು ಎರಡನೇ ವಾತಿಕಾನ್ ಮಹಾಸಮ್ಮೇಳನವು ನಮಗೆ ಆಹ್ವಾನ ನೀಡುತ್ತದೆ. ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅತಿ ವಂದನೀಯ ಲಾರೆನ್ಸ್ ಮುಕ್ಕುಜ್ಹಿ ಯವರು ” ಆಧುನಿಕ ಲೋಕಕ್ಕೆ ದಾರಿದೀಪವಾಗಿರುವ ಎರಡನೇ ವಾತಿಕ್ಕಾನ್ ಮಹಾಸಮ್ಮೇಳನದ ದಾಖಲೆಗಳು ಆಳವಾಗಿ ತಿಳಿಯುವುದು ಅನಿವಾರ್ಯ ಹಾಗೂ ಲೋಕ ಸಮಾಧಾನಕ್ಕೆ ಅವಶ್ಯವಾದದ್ದು” ಎಂದರು.

ಧರ್ಮಪ್ರಾಂತ್ಯದ ಎಲ್ಲ ಧರ್ಮಗುರುಗಳು ಹಾಗೂ ಧರ್ಮ ಭಗಿನೀಯರು ಪ್ರಸ್ತುತ ಕಲಿಕಾ ಶಿಬಿರದಲ್ಲಿ ಭಾಗವಹಿಸಿದರು.

Related posts

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ದೈವದ ಆಸನ(ಮುಕ್ಕಾರ್) ಸಮಪ೯ಣೆ: ವಾಸ್ತು ಶಿಲ್ಪಿ ಸುಂದರ ಆಚಾರ್ಯ ಮಡೆಂಜಿಮಾರುರವರಿಗೆ ಕ್ಷೇತ್ರದಿಂದ ಗೌರವಾರ್ಪಣೆ

Suddi Udaya

ಶಿರ್ಲಾಲು ಗ್ರಾಮ ಸಭೆ: ಶಿರ್ಲಾಲುವಿನಲ್ಲಿರುವ ಗೋಮಾಲಾ ಜಾಗವನ್ನು ಕಂದಾಯ ಇಲಾಖೆ ತನ್ನ ಸುಪರ್ಧಿಗೆ ಪಡೆಯಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ವಿಟಿಯು ಅಂತರ್ ಕಾಲೇಜು ಕ್ರಿಕೆಟ್ ಟೂರ್ನಿ : ಉಜಿರೆಯ ಎಸ್.ಡಿ.ಎಂ ಗೆ ಪ್ರಶಸ್ತಿ

Suddi Udaya

ಕುಂಭಶ್ರೀ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಗಿರೀಶ್ ಕೆ.ಎಚ್.ರವರಿಗೆ ಸನ್ಮಾನ

Suddi Udaya

ಬಾರ್ಯ: ಖಾಸಗಿ ಬ್ಯಾಂಕಿನ ಎಟಿಎಂ ನಿಂದ ದರೋಡೆಗೆ ಯತ್ನ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆ

Suddi Udaya
error: Content is protected !!