May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎರಡನೇ ವಾತಿಕಾನ್ ಮಹಾಸಮ್ಮೇಳನದ ಸಂವಿಧಾನಿಕ ದಾಖಲೆಗಳ ಕುರಿತು ವಿಶೇಷ ಕಲಿಕಾ ಶಿಬಿರ

ಬೆಳ್ತಂಗಡಿ: ಕ್ರಿಸ್ತ ಯೇಸುವಿನ ಜನನದ 2025 ನೇ ವರ್ಷದ ಅಂಗವಾಗಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಜ್ಞಾನನಿಲಯ ಪಾಲನಾ ಕೇಂದ್ರದಲ್ಲಿ ವಿಶೇಷ ಕಲಿಕಾ ಶಿಬಿರ ಹಮ್ಮಿಕೊಳ್ಳಲಾಯಿತು. ಶಿಬಿರದಲ್ಲಿ ಕೇರಳದ ಪಾಲಕ್ಕಾಡ್ ಧರ್ಮಪ್ರಾಂತ್ಯದ ಯಾಜಕರಾದ ವಂದನೀಯ ಡಾ. ಅರುಣ್ ಕಲಮತ್ತಂರವರು ಸಂಪನ್ಮೂಲ ವ್ಯಕ್ತಿಗಳಾಗಿದ್ದರು.

1965 ರಲ್ಲಿ ಕೊನೆಗೊಂಡ ಎರಡನೇ ವಾತಿಕಾನ್ ಮಹಾಸಮ್ಮೇಳನದ ಆಧುನಿಕ ಕಾಲದ ಧರ್ಮಸಭೆಯ ಸಂವಿಧಾನಿಕ ದಾಖಲೆಗಳ ಕುರಿತು ಚರ್ಚಿಸಲಾಯಿತು. ಧರ್ಮಸಭೆಯು ಸಮಾಜದಲ್ಲಿ ಒಳಿತಿನ, ಧಾರ್ಮಿಕತೆಯ ಕಾವಲುಗಾರನಾಗಿರಲು ಎರಡನೇ ವಾತಿಕಾನ್ ಮಹಾಸಮ್ಮೇಳನವು ನಮಗೆ ಆಹ್ವಾನ ನೀಡುತ್ತದೆ. ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅತಿ ವಂದನೀಯ ಲಾರೆನ್ಸ್ ಮುಕ್ಕುಜ್ಹಿ ಯವರು ” ಆಧುನಿಕ ಲೋಕಕ್ಕೆ ದಾರಿದೀಪವಾಗಿರುವ ಎರಡನೇ ವಾತಿಕ್ಕಾನ್ ಮಹಾಸಮ್ಮೇಳನದ ದಾಖಲೆಗಳು ಆಳವಾಗಿ ತಿಳಿಯುವುದು ಅನಿವಾರ್ಯ ಹಾಗೂ ಲೋಕ ಸಮಾಧಾನಕ್ಕೆ ಅವಶ್ಯವಾದದ್ದು” ಎಂದರು.

ಧರ್ಮಪ್ರಾಂತ್ಯದ ಎಲ್ಲ ಧರ್ಮಗುರುಗಳು ಹಾಗೂ ಧರ್ಮ ಭಗಿನೀಯರು ಪ್ರಸ್ತುತ ಕಲಿಕಾ ಶಿಬಿರದಲ್ಲಿ ಭಾಗವಹಿಸಿದರು.

Related posts

ಮರೋಡಿ: ಅರುಣೋದಯ ಯುವಕ ಮಂಡಲದಿಂದ ‘ಆಟಿದ ತಿನಸ್ ಬಂಜರ ವನಸ್’ ಕಾರ್ಯಕ್ರಮ

Suddi Udaya

ಆಟೋ ಚಾಲಕ- ಮಾಲಕ ಸಂಘದ ಮಾಜಿ ಅಧ್ಯಕ್ಷ ಶಿವಯ್ಯ ಪೂಜಾರಿ ನಿಧನ

Suddi Udaya

ಉಜಿರೆ: ಅನುಗ್ರಹ ಶಾಲೆಯಲ್ಲಿ ರಸ್ತೆ ಸಂಚಾರ ಮತ್ತು ಸುರಕ್ಷಾ ಕ್ರಮದ ಬಗ್ಗೆ ಮಾಹಿತಿ ಕಾರ್‍ಯಗಾರ

Suddi Udaya

ಬೆಳ್ತಂಗಡಿ ಮಾದರಿ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರೋತ್ಸವ ಆಚರಣೆ

Suddi Udaya

ಕನ್ಯಾಡಿ ಶ್ರೀಗಳ ಚಾತುರ್ಮಾಸಕ್ಕೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಗಣ್ಯರ ಭೇಟಿ

Suddi Udaya

ಸಮಾಜಸೇವಕ ಚಾಂಡಿ ರವರಿಗೆ ವಿನ್ಸೆಂಟ್ ಡಿ’ಪೌಲ್ ದಿನದಲ್ಲಿ ಸನ್ಮಾನ

Suddi Udaya
error: Content is protected !!