25.3 C
ಪುತ್ತೂರು, ಬೆಳ್ತಂಗಡಿ
May 7, 2026
Uncategorized

ನಿಡಿಗಲ್ ಹಳೆ ಸೇತುವೆ ಪರಿಸರದಲ್ಲಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ: ದಂಡ ವಸೂಲಿ

ಮುಂಡಾಜೆ: ಕಸ ಹಾಕಿದವರಿಂದಲೇ ಕಸ ವಿಲೇವಾರಿ ಮಾಡಿಸಿ ದಂಡವನ್ನು ವಸೂಲಿ ಮಾಡಿದ ಘಟನೆ ಮುಂಡಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.

ಭಾನುವಾರ ರಾತ್ರಿ ಮುಂಡಾಜೆ ಗ್ರಾಪಂ ವ್ಯಾಪ್ತಿಯ ನಿಡಿಗಲ್ ಹಳೆ ಸೇತುವೆ ಪರಿಸರದಲ್ಲಿ ಕಸವನ್ನು ತಂದು ಹಾಕಲಾಗಿತ್ತು.ಈ ಕಸದಲ್ಲಿ ಸಿಕ್ಕ ಕೆಲವು ಪತ್ರ,ದಾಖಲೆ ಇತ್ಯಾದಿಗಳನ್ನು ಪರಿಶೀಲಿಸಿದಾಗ ಇದು ಕಕ್ಕಿಂಜೆ ಕಡೆಯ ವ್ಯಕ್ತಿಗಳು ತಂದು ಹಾಕಿರುವುದಕ್ಕೆ ಪುರಾವೆ ಸಿಕ್ಕಿತ್ತು. ಹಾಗೂ ಈ ದೃಶ್ಯ ಇತ್ತೀಚೆಗೆ ಸೇತುವೆಗೆ ಅಳವಡಿಸಿದ್ದ ಸಿಸಿ ಕ್ಯಾಮೆರಾದಲ್ಲೂ ಸೆರೆಯಾಗಿತ್ತು.ಕಸ ಸುರಿದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಸ್ಥಳಕ್ಕೆ ಕರೆಯಿಸಿ ಅವರಿಂದಲೇ ವಿಲೇವಾರಿ ಮಾಡಿಸಿ ಪಂಚಾಯಿತಿ ವತಿಯಿಂದ 2000 ರೂ. ದಂಡ ವಿಧಿಸಿ ಎಚ್ಚರಿಕೆ ನೀಡಲಾಗಿದೆ ಎಂದು ಮುಂಡಾಜೆ ಗ್ರಾಪಂ ಅಧ್ಯಕ್ಷ ಗಣೇಶ ಬಂಗೇರ ಹಾಗೂ ಪಿಡಿಒ ಗಾಯತ್ರಿ ಪಿ. ತಿಳಿಸಿದ್ದಾರೆ.

ಮುಂಡಾಜೆ ಹಾಗೂ ಕಲ್ಮಂಜ ಗ್ರಾಮ ಪಂಚಾಯಿತಿಗೆ ಸೇರಿದ ಇಲ್ಲಿನ ಹಳೆ ಮತ್ತು ಹೊಸ ಸೇತುವೆ ವ್ಯಾಪ್ತಿಯಲ್ಲಿ ಭಾರಿ ಪ್ರಮಾಣದ ಕಸ ಸಂಗ್ರಹವಾಗಿದ್ದು ಅದು ನದಿ ನೀರು ಆತಂಕ ವ್ಯಕ್ತವಾಗಿತ್ತು. ಗ್ರಾಮಸಭೆಯಲ್ಲೂ ಈ ವಿಚಾರ ಭಾರಿ ಚರ್ಚೆಗೊಳಗಾಗಿತ್ತು. ಬಳಿಕ ಕಳೆದ ವಾರ ಇಲ್ಲಿ ಸ್ವಚ್ಛತೆ ಕಾರ್ಯವನ್ನು 2 ಪಂಚಾಯಿತಿಗಳ ವತಿಗಳಿಂದ ನಿರ್ವಹಿಸಿ ಸೇತುವೆಗೆ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ ಕಂಪೌಂಡ್ ಕುಸಿತ

Suddi Udaya

86 ಸೀಮ್ ಕಾರ್ಡ್ ಸಹಿತ ಬೆಳ್ತಂಗಡಿ ಯ ಇಬ್ಬರನ್ನು ಬಂಧಿಸಿದ ಮಂಗಳೂರು ಪೊಲೀಸರು: ವಿದೇಶ ದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್‌ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ ಆರೋಪ

Suddi Udaya

ಸುಲ್ಕೇರಿಮೊಗ್ರು: ವಿಶಿಷ್ಟ ಸಾಧಕ ರಘು ಮಾಳಿಗೆ ನಿಧನ

Suddi Udaya

ಉಜಿರೆ ಗುರು ಮಂದಿರ ನಿರ್ಮಾಣದ ಸಮಾಲೋಚನೆ ಸಭೆ

Suddi Udaya

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

Suddi Udaya

ಹಲ್ಲೆಗೆ ಯತ್ನ: ಸೌಜನ್ಯ ತಾಯಿ ಕುಸುಮಾವತಿರವರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya
error: Content is protected !!