22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ನಿಡಿಗಲ್ ಹಳೆ ಸೇತುವೆ ಪರಿಸರದಲ್ಲಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ: ದಂಡ ವಸೂಲಿ

ಮುಂಡಾಜೆ: ಕಸ ಹಾಕಿದವರಿಂದಲೇ ಕಸ ವಿಲೇವಾರಿ ಮಾಡಿಸಿ ದಂಡವನ್ನು ವಸೂಲಿ ಮಾಡಿದ ಘಟನೆ ಮುಂಡಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.

ಭಾನುವಾರ ರಾತ್ರಿ ಮುಂಡಾಜೆ ಗ್ರಾಪಂ ವ್ಯಾಪ್ತಿಯ ನಿಡಿಗಲ್ ಹಳೆ ಸೇತುವೆ ಪರಿಸರದಲ್ಲಿ ಕಸವನ್ನು ತಂದು ಹಾಕಲಾಗಿತ್ತು.ಈ ಕಸದಲ್ಲಿ ಸಿಕ್ಕ ಕೆಲವು ಪತ್ರ,ದಾಖಲೆ ಇತ್ಯಾದಿಗಳನ್ನು ಪರಿಶೀಲಿಸಿದಾಗ ಇದು ಕಕ್ಕಿಂಜೆ ಕಡೆಯ ವ್ಯಕ್ತಿಗಳು ತಂದು ಹಾಕಿರುವುದಕ್ಕೆ ಪುರಾವೆ ಸಿಕ್ಕಿತ್ತು. ಹಾಗೂ ಈ ದೃಶ್ಯ ಇತ್ತೀಚೆಗೆ ಸೇತುವೆಗೆ ಅಳವಡಿಸಿದ್ದ ಸಿಸಿ ಕ್ಯಾಮೆರಾದಲ್ಲೂ ಸೆರೆಯಾಗಿತ್ತು.ಕಸ ಸುರಿದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಸ್ಥಳಕ್ಕೆ ಕರೆಯಿಸಿ ಅವರಿಂದಲೇ ವಿಲೇವಾರಿ ಮಾಡಿಸಿ ಪಂಚಾಯಿತಿ ವತಿಯಿಂದ 2000 ರೂ. ದಂಡ ವಿಧಿಸಿ ಎಚ್ಚರಿಕೆ ನೀಡಲಾಗಿದೆ ಎಂದು ಮುಂಡಾಜೆ ಗ್ರಾಪಂ ಅಧ್ಯಕ್ಷ ಗಣೇಶ ಬಂಗೇರ ಹಾಗೂ ಪಿಡಿಒ ಗಾಯತ್ರಿ ಪಿ. ತಿಳಿಸಿದ್ದಾರೆ.

ಮುಂಡಾಜೆ ಹಾಗೂ ಕಲ್ಮಂಜ ಗ್ರಾಮ ಪಂಚಾಯಿತಿಗೆ ಸೇರಿದ ಇಲ್ಲಿನ ಹಳೆ ಮತ್ತು ಹೊಸ ಸೇತುವೆ ವ್ಯಾಪ್ತಿಯಲ್ಲಿ ಭಾರಿ ಪ್ರಮಾಣದ ಕಸ ಸಂಗ್ರಹವಾಗಿದ್ದು ಅದು ನದಿ ನೀರು ಆತಂಕ ವ್ಯಕ್ತವಾಗಿತ್ತು. ಗ್ರಾಮಸಭೆಯಲ್ಲೂ ಈ ವಿಚಾರ ಭಾರಿ ಚರ್ಚೆಗೊಳಗಾಗಿತ್ತು. ಬಳಿಕ ಕಳೆದ ವಾರ ಇಲ್ಲಿ ಸ್ವಚ್ಛತೆ ಕಾರ್ಯವನ್ನು 2 ಪಂಚಾಯಿತಿಗಳ ವತಿಗಳಿಂದ ನಿರ್ವಹಿಸಿ ಸೇತುವೆಗೆ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ.

Related posts

ಬಿ.ವಿಜಯ ಕುಮಾರ್ ಪೊಲೀಸ್ ಮಹಾ ನಿರ್ದೇಶಕರು ಮತ್ತು ಮಹಾ ನಿರೀಕ್ಷೀ ಕರು ಬೆಂಗಳೂರು ಇವರು ನೀಡುವ ಪ್ರತಿಷ್ಠಿತ ಪೊಲೀಸ್ ಚಿನ್ನದ ಪದಕಕ್ಕೆ ಆಯ್ಕೆ

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ
ಎಕ್ಸ್‌ಪೀರಿಯ-2ಕೆ22 ರಾಜ್ಯ ಮಟ್ಟದ ವಿಜ್ಞಾನ ಮೇಳ ಉದ್ಘಾಟನೆ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ನಂದಿನಿ ಹಾಲಿನ ದರ 4 ರೂ. ಏರಿಕೆ

Suddi Udaya

ಪ್ರೋ. ಕೆ.ಯಸ್ ಭಗವಾನ್ ಅವರ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಖಂಡನೆ

Suddi Udaya

ಜ.25: ಬೆಳ್ತಂಗಡಿಯಲ್ಲಿ ಕೋಟಕ್ ಲೈಫ್ ಉದ್ಘಾಟನೆ

Suddi Udaya
error: Content is protected !!