May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು 5 ಮೆಗಾ ವಾಲ್ಟ್ ವಿದ್ಯುತ್ ಫೀಡರನ್ನು 10 ಮೆಗಾ ವಾಲ್ಟ್ ವಿದ್ಯುತ್ ಫೀಡರ್ ಪರಿವರ್ತಿಸಲು ಮನವಿ

ಬೆಳ್ತಂಗಡಿ: ವೇಣೂರು ಸಬ್ ಸ್ಕ್ರೆಷನ್ ಎರಡು ವಿದ್ಯುತ್ ಫೀಡರ್ ಗಳಿದ್ದು ಕಳೆದ ಬಾರಿ ಒಂದು ವಿದ್ಯುತ್ ಫೀಡರನ್ನು 5 ಮೆಗಾವೋಲ್ಟ್ ನಿಂದ 8 ಮೆಗಾ ವೋಲ್ಟ್ ಗೆ ಪರಿವರ್ತಿಸಿ ವೇಣೂರು ಮತ್ತು ಸುತ್ತ ಮುತ್ತಲಿನ ಗ್ರಾಮದ ರೈತರು ಮತ್ತು ಗ್ರಾಮಸ್ಥರಿಗೆ ತುಂಬಾ ಅನುಕೂಲವಾಗಿದೆ.
ಇದೀಗ ಆಗಾಗ ವಿದ್ಯುತ್ ಕಡಿತವಾಗುವುದರಿಂದ ಈಗ ಬಾಕಿ ಇರುವ ವಿದ್ಯುತ್ ಫೀಡರನ್ನು ಸಹ ಐದು ಮೆಗಾ ವೋಲ್ಟ್ ನಿಂದ ಹತ್ತು ಮೆಗಾ ವೋಲ್ಟ್ ಪರಿವರ್ತಿಸಿ ವಿದ್ಯುತ್ ಸಮಸ್ಯೆಯನ್ನು ಪರಿಹರಿಸುವಂತೆ ಸರ್ಕಾರದ ಗಮನವನ್ನು ಸೆಳೆಯಬೇಕೆಂದು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ನಗರದ ಅಧ್ಯಕ್ಷ ದಯಾನಂದ ದೇವಾಡಿಗ ಇವರ ನೇತೃತ್ವದಲ್ಲಿ ಮನವಿಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಶೇಖರ್ ಕುಕ್ಕೇಡಿ, ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷರಾದ ಜಯರಾಮ್ ಶೆಟ್ಟಿ, ಮಹಿಳಾ ಕಾಂಗ್ರೆಸ್ ನಗರದ ಅಧ್ಯಕ್ಷರಾದ ವಂದನಾ ಬಂಡಾರಿ, ತಾಲೂಕು ಆರಾಧನಾ ಸಮಿತಿಯ ಸದಸ್ಯರಾದ ಬಾಲಕೃಷ್ಣ ಭಟ್, ಗ್ಯಾರಂಟಿ ಯೋಜನೆಯ ಸದಸ್ಯರಾದ ಸತೀಶ್ ಹೆಗ್ಡೆ, ಪಕ್ಷದ ಪ್ರಮುಖರಾದ, ರಮೇಶ್ ಪೂಜಾರಿ ಪಡ್ಡಾಯಿ ಮಜಲ್, ಹರೀಶ್ ಪೊಕ್ಕಿ, ಅಶ್ರಫ್ ಕರಿಮಣೇಲು, ತೋಮಸ್ ಅಂಡಿಂಜೆ, ಹಾಗೂ ಪಕ್ಷದ ಕಾರ್ಯಕರ್ತರು ಸಾರ್ವಜನಿಕರು ಉಪಸ್ಥಿತರಿದ್ದರು.

Related posts

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಸಂಸತ್ತು ಚುನಾವಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರ ಹುಟ್ಟು ಹಬ್ಬದ ಪ್ರಯುಕ್ತ ವಾಲ್ಮೀಕಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ರುಡ್ ಸೆಟ್ ಸಂಸ್ಥೆಯಲ್ಲಿ ರೆಫ್ರಿಜರೇಷನ್ ಮತ್ತು ಏರ್‌ ಕಂಡೀಷನಿಂಗ್ ತರಬೇತಿ ಸಮಾರೋಪ

Suddi Udaya

ಶೇ.100 ತೆರಿಗೆ ವಸೂಲಾತಿ: ನಾವೂರು ಗ್ರಾ.ಪಂ. ಗೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿಯವರಿಂದ ಅಭಿನಂದನೆ

Suddi Udaya

ಬಂದಾರು: ಬೈಪಾಡಿ ಭಗವಾನ್ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಶಾಂತಿಚಕ್ರ ಆರಾಧನೆ

Suddi Udaya

ಕೋರ್ಟ್ ನಲ್ಲಿ ಬುರುಡೆ ಚಿನ್ನಯ್ಯನ ಮೂರು ದಿನಗಳ ಹೇಳಿಕೆ ಇಂದಿಗೆ ಮುಕ್ತಾಯ

Suddi Udaya
error: Content is protected !!