23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅತ್ಯಂತ ಕುತೂಹಲ ಕೆರಳಿಸಿದ ಮಡಂತ್ಯಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ : ಅಧ್ಯಕ್ಷರಾಗಿ ಜೋಯಲ್ ಗಾಡ್ಫಿ ಮೆಂಡೋನ್ಸಾ, ಹಾಗೂ ಉಪಾಧ್ಯಕ್ಷರಾಗಿ ಕಾಂತಪ್ಪ ಗೌಡ ಆಯ್ಕೆ

ಮಡಂತ್ಯಾರು:ಸಹಕಾರಿ ರಂಗದಲ್ಲಿ ಅತ್ಯಂತ ಕುತೂಹಲ ಕೆರಳಿಸಿದ ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರಿ ಭಾರತಿಯ ಅಭ್ಯರ್ಥಿ, ಅಲ್ಪ ಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಯುವ ನಾಯಕ, ಎಂ.ಬಿ ಎ ಪದವೀಧರ ಜೋಯಲ್ ಗಾಡ್ಫಿ ಮೆಂಡೋನ್ಸಾ ಅಧ್ಯಕ್ಷರಾಗಿ ಹಾಗೂ
ಉಪಾಧ್ಯಕ್ಷರಾಗಿ, ಮಡಂತ್ಯಾರು ಗ್ರಾ.ಪಂ ಮಾಜಿ ಸದಸ್ಯ, ಹಾ.ಉ.ಸಹಕಾರಿ ಸಂಘದ ಮಾಜಿ ಅಧ್ಯಕ್ಷ, ಮಾಜಿ ಸೈನಿಕ ಕಾಂತಪ್ಪ ಗೌಡ ಆಯ್ಕೆಯಾದರು.

ನಿರ್ದೇಶಕರುಗಳಾಗಿ ಕಳೆದ ಅವಧಿಯ ಅಧ್ಯಕ್ಷ ಅರವಿಂದ ಜೈನ್, ಕಳೆದ ಬಾರಿಯ ಉಪಾಧ್ಯಕ್ಷೆ ಶ್ರೀಮತಿ ಧನಲಕ್ಷ್ಮಿ, ಕುಮಾರ ನಾಯ್ಕ, ಅಮಿತಾ ಪ್ರಿಯಾ ಲೋಬೋ, ಮಹಾಬಲ ಕೆ, ಸುರೇಶ್ ಎಸ್ ಕಿಶೋರ್ ಕುಮಾರ್, ಪದ್ಮನಾಭ ಸಾಲಿಯಾನ್, ಗೋಪಾಲಕೃಷ್ಣ ಕೆ, ಗಣೇಶ್ ಮೂಲ್ಯ ಆಯ್ಕೆಯಾದರು.

ಸಹಕಾರಿ ಭಾರತಿ 9 ರಲ್ಲಿ ಜಯಗಳಿಸಿದೆ ಹಾಗೂ ಕಾಂಗ್ರೇಸ್ ಬೆಂಬಲಿತ 3 ಅಭ್ಯರ್ಥಿಗಳು ವಿಜಯಶಾಲಿಯಾಗಿದ್ದಾರೆ.

ವಿಲಾಸ್ ಚುನಾವಣಾ ಪ್ರಕ್ರಿಯೆಯನ್ನು ನಡೆಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೋಕಿಂ ಡಿಸೋಜಾ, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಪ್ರತಿನಿಧಿ ಸಿರಾಜುದ್ದೀನ್ ಹಾಗೂ ಸಿಬ್ಬಂದಿಗಳು ಸಹಕರಿಸಿದರು.

Related posts

ನಿಡ್ಲೆ: ನೆಡಿಲು ನಾರಾಯಣ ಗೌಡರವರ ತೋಟಕ್ಕೆ ನುಗ್ಗಿದ್ದ ಒಂಟಿ ಸಲಗ: ಹಲವು ಬಾಳೆ ಗಿಡ ಹಾಗೂ ಅಡಿಕೆ ಗಿಡಗಳಿಗೆ ಹಾನಿ

Suddi Udaya

ಬೆಳ್ತಂಗಡಿ ತಾ.ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಅಧ್ಯಕ್ಷರಾಗಿ ಹರೀಶ್ ಕಾರಿಂಜ, ಕಾರ್ಯದರ್ಶಿಯಾಗಿ ಯತೀಶ್ ಸಿರಿಮಜಲು ಪುನರಾಯ್ಕೆ

Suddi Udaya

ಗುರುವಾಯನಕೆರೆ ವಿದ್ವತ್ ಕಾಲೇಜಿನಲ್ಲಿ ಕಿಚನಾಮಿಕ್ಸ್ ಸಡಗರ

Suddi Udaya

ರೆಖ್ಯ: ಸಾರ್ವಜನಿಕ ಶ್ರೀ ಕೃಷ್ಣಾ ಜನ್ಮಾಷ್ಟಮಿ ಆಚರಣಾ ಸಮಿತಿ ರಚನೆ

Suddi Udaya

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಮಂಜುನಾಥ್ ಗುಡಿಗಾರ್ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲಾ ಆರಂಭೋತ್ಸವ

Suddi Udaya
error: Content is protected !!