24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎರಡನೇ ವಾತಿಕಾನ್ ಮಹಾಸಮ್ಮೇಳನದ ಸಂವಿಧಾನಿಕ ದಾಖಲೆಗಳ ಕುರಿತು ವಿಶೇಷ ಕಲಿಕಾ ಶಿಬಿರ

ಬೆಳ್ತಂಗಡಿ: ಕ್ರಿಸ್ತ ಯೇಸುವಿನ ಜನನದ 2025 ನೇ ವರ್ಷದ ಅಂಗವಾಗಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಜ್ಞಾನನಿಲಯ ಪಾಲನಾ ಕೇಂದ್ರದಲ್ಲಿ ವಿಶೇಷ ಕಲಿಕಾ ಶಿಬಿರ ಹಮ್ಮಿಕೊಳ್ಳಲಾಯಿತು. ಶಿಬಿರದಲ್ಲಿ ಕೇರಳದ ಪಾಲಕ್ಕಾಡ್ ಧರ್ಮಪ್ರಾಂತ್ಯದ ಯಾಜಕರಾದ ವಂದನೀಯ ಡಾ. ಅರುಣ್ ಕಲಮತ್ತಂರವರು ಸಂಪನ್ಮೂಲ ವ್ಯಕ್ತಿಗಳಾಗಿದ್ದರು.

1965 ರಲ್ಲಿ ಕೊನೆಗೊಂಡ ಎರಡನೇ ವಾತಿಕಾನ್ ಮಹಾಸಮ್ಮೇಳನದ ಆಧುನಿಕ ಕಾಲದ ಧರ್ಮಸಭೆಯ ಸಂವಿಧಾನಿಕ ದಾಖಲೆಗಳ ಕುರಿತು ಚರ್ಚಿಸಲಾಯಿತು. ಧರ್ಮಸಭೆಯು ಸಮಾಜದಲ್ಲಿ ಒಳಿತಿನ, ಧಾರ್ಮಿಕತೆಯ ಕಾವಲುಗಾರನಾಗಿರಲು ಎರಡನೇ ವಾತಿಕಾನ್ ಮಹಾಸಮ್ಮೇಳನವು ನಮಗೆ ಆಹ್ವಾನ ನೀಡುತ್ತದೆ. ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅತಿ ವಂದನೀಯ ಲಾರೆನ್ಸ್ ಮುಕ್ಕುಜ್ಹಿ ಯವರು ” ಆಧುನಿಕ ಲೋಕಕ್ಕೆ ದಾರಿದೀಪವಾಗಿರುವ ಎರಡನೇ ವಾತಿಕ್ಕಾನ್ ಮಹಾಸಮ್ಮೇಳನದ ದಾಖಲೆಗಳು ಆಳವಾಗಿ ತಿಳಿಯುವುದು ಅನಿವಾರ್ಯ ಹಾಗೂ ಲೋಕ ಸಮಾಧಾನಕ್ಕೆ ಅವಶ್ಯವಾದದ್ದು” ಎಂದರು.

ಧರ್ಮಪ್ರಾಂತ್ಯದ ಎಲ್ಲ ಧರ್ಮಗುರುಗಳು ಹಾಗೂ ಧರ್ಮ ಭಗಿನೀಯರು ಪ್ರಸ್ತುತ ಕಲಿಕಾ ಶಿಬಿರದಲ್ಲಿ ಭಾಗವಹಿಸಿದರು.

Related posts

ಚಂದ್ರಯಾನ-3 ಯಶಸ್ವಿಯಾದ ಹಿನ್ನಲೆ: ವಿ.ಹಿಂ.ಪ. ಮತ್ತು ಭಜರಂಗದಳ ಕಾರ್ಯಕರ್ತರಿಂದ ಗುರುವಾಯನಕೆರೆಯಲ್ಲಿ ಸಂಭ್ರಮಾಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಚಿತ್ರಕಲಾ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ

Suddi Udaya

ಶ್ರೀ ಕ್ಷೇತ್ರ ಕೊಲಕಾಡಿಯಿಂದ ಧರ್ಮಸ್ಥಳ ಭೇಟಿ

Suddi Udaya

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಕಾಲುಬಾಯಿ ರೋಗ ಲಸಿಕಾ ಅಭಿಯಾನ

Suddi Udaya

ಮೇ 10: ಮೇಲಂತಬೆಟ್ಟು ಸ.ಪ್ರ.ದ. ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ‘ಸ್ನೇಹ ಸಮ್ಮಿಲನ’

Suddi Udaya

ಕಳೆಂಜ: ಭಾರಿ ಗಾಳಿ ಮಳೆಯಿಂದಾಗಿ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya
error: Content is protected !!