28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಶ್ರೀಕೃಷ್ಣ ಭಜನಾ ಮಂಡಳಿ ಭಜನೋತ್ಸವ

ಕೊಯ್ಯೂರು: ಕೊಯ್ಯೂರು ಅದೂರು ಪೇರಾಲ್ ಶ್ರೀ ಕೃಷ್ಣ ಭಜನಾ ಮಂಡಳಿ ಹಾಗೂ ಶ್ರೀ ಕೃಷ್ಣ ಮಹಿಳಾ ಭಜನಾ ತಂಡ ಅದೂರು ಪೇರಾಲ್ ಜಂಟಿ ಆಶ್ರಯದಲ್ಲಿ ಭಕ್ತಿಯ ಹೆಜ್ಜೆ ಭಕ್ತರ ಮನದ ಮನೆಗಳತ್ತ ಎಂಬ ನಗರ ಭಜನಾ ಮಂಗಳೋತ್ಸವ ಮತ್ತು ಸತ್ಯ ನಾರಾಯಣ ಪೂಜೆ ಮಾ.1 ರಂದು ರಾತ್ರಿ ಮಂಡಳಿ ವಠಾರದಲ್ಲಿ ನಡೆಯಿತು.

ಬೆಂಗಳೂರು ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ ಮಾತನಾಡುತ್ತಾ ಹಿಂದು, ಧರ್ಮ ಜಾಗೃತಿ ಮೂಡಿಸಲು ಭಜನಾ ಸಪ್ತಾಹದಂತಹ ಅನೇಕ ಕಾರ್ಯಕ್ರಮದಲ್ಲಿ ಮಕ್ಕಳ ಭಾಗವಹಿಸಿಕೆಯಿಂದ ಸನಾತನ ಧರ್ಮ ಉಳಿಯಲು ಸಾಧ್ಯ ಎಂದು ಹೇಳಿದರು.


ಕೃಷಿಕರಾದ ಪ್ರಚಂಡ ಭಾನು ಭಟ್ ಉಪಸ್ಥಿತರಿದ್ದರು. ಅಮಂತ್ರಿತ ಭಜನಾ ಮಂಡಳಿ ಸದಸ್ಯರಿಂದ ಏಕಕಾಲದಲ್ಲಿ ಕುಣಿತ ಭಜನೆ ನಡೆಯಿತು.


ಕುಣಿತ ಭಜನಾ ಮಂಡಳಿ ರಾಜ್ಯಾಧ್ಯಕ್ಷ ಚಂದ್ರಶೇಖರ ಸಾಲ್ಯಾನ್ ಸ್ವಾಗತಿಸಿ, ಲಿಂಗಪ್ಪಗೌಡ ಬೆರ್ಕೆ ನಿರೂಪಿಸಿ , ವಂದಿಸಿದರು. ಭಜನಾ ಮಂಡಳಿ ಅಧ್ಯಕ್ಷರು, ಪದಾಧಿಕಾರಿಗಳು, ಸಂಘದ ಸದಸ್ಯರು, ಕೊಯ್ಯೂರು ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಭಕ್ತರು ಮತ್ತಿತರರಿದ್ದರು.

Related posts

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಎನ್.ಡಿ.ಪಿ.ಎಸ್ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ಒಟ್ಟು 11 ಕೆಜಿ 365 ಗ್ರಾಂ ಗಾಂಜಾ ಹಾಗೂ 42.57 ಗ್ರಾಂ ಎಂ.ಡಿ.ಎಂ.ಎ ಮಾದಕ ವಸ್ತುಗಳ ವಿಲೇವಾರಿ

Suddi Udaya

ನೆರ್ತನೆ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಪವನ್, ಕಾರ್ಯದರ್ಶಿ ಸಂದೀಪ್ ಆಯ್ಕೆ

Suddi Udaya

ಉಜಿರೆ ರುಡ್‌ಸೆಟ್‌ ಸಂಸ್ಥೆಯ ವಾರ್ಷಿಕ ವರದಿ ಬಿಡುಗಡೆ

Suddi Udaya

ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್ ಬೆಳ್ತಂಗಡಿ ಸೇವಾ ಸಾಧನ ವತಿಯಿಂದ ಮಾದಕ ವಸ್ತು ಜಾಗೃತಿ ಹಾಗೂ ಡ್ರ್ಯಾಗನ್ ಫ್ರೂಟ್ಸ್ ವಿತರಣೆ

Suddi Udaya

ವೇಣೂರು: ಬಜಿರೆ ನಿವಾಸಿ ಶ್ರೀಮತಿ ವಸಂತಿ ನಿಧನ

Suddi Udaya
error: Content is protected !!