May 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ: ಬೈಕ್ ಗೆ ಡಿಕ್ಕಿ ಹೊಡೆದ ಆಟೋರಿಕ್ಷಾ : ಬೈಕ್ ಸವಾರರಿಗೆ ಗಾಯ

ನಾರಾವಿ :ಇಲ್ಲಿಯ ಸತ್ಕಾರ್‌ ಹೋಟೆಲ್‌ ಬಳಿ ಆಟೋ ರಿಕ್ಷಾ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರರಿಗೆ ಗಾಯಗಳಾದ ಘಟನೆ ಮಾ.2 ರಂದು ನಡೆದಿದೆ

ಘಟನೆ ವಿವರ: ಮಾ.2 ರಂದು ನಾರಾವಿ ಗ್ರಾಮದ ಸತ್ಕಾರ್‌ ಹೋಟೆಲ್‌ ಬಳಿ ಕಾರ್ಕಳ-ನಾರಾವಿ-ಗುರುವಾಯನಕೆರೆ ಸಾರ್ವಜನಿಕ ರಸ್ತೆಯಲ್ಲಿ ಅಟೋರಿಕ್ಷಾ ಚಾಲಕ ರವಿಚಂದ್ರ ರವರು ಅಳದಂಗಡಿ ಕಡೆಯಿಂದ ದುಡುಕುತನ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿ ಬೈಕ್‌ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ರಮೇಶ್ ಮೂಲ್ಯ ರವರ ಬಲಕೈ, ಬಲಕಾಲಿಗೆ, ಬಲಬದಿ ಹಣೆಗೆ ತರಚಿದ ಗಾಯ ಹಾಗೂ ಸಹ ಸವಾರ ಮಂಜುನಾಥರವರ ಬಲಕಾಲಿಗೆ ಮುರಿತದ ಗಾಯ ಮತ್ತು ಬಲಕೈಗೆ ತರಚಿದ ಗಾಯ ಉಂಟಾಗಿ ಹೆಚ್ಚು ಗಾಯಗೊಂಡ ಸಹ ಸವಾರ ಮಂಜುನಾಥರವರನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕೊಕ್ಕಡ ಕಪಿಲಾ ಜೇಸಿ ಸಂಸ್ಥೆಯ ಜೇಸಿ ಸಪ್ತಾಹ

Suddi Udaya

ಉಜಿರೆ ಎಸ್ ಡಿ ಎಂ ಪಿ.ಯು ಕಾಲೇಜಿನಲ್ಲಿ ಯೋಗ ಶಿಬಿರ ಸಮಾರೋಪ 

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆ

Suddi Udaya

ಕನ್ಯಾಡಿ ಸೇವಾನಿಕೇತನಕ್ಕೆ ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಭೇಟಿ

Suddi Udaya

ಬಳಂಜ ಗ್ರಾ.ಪಂ. ನಲ್ಲಿ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya
error: Content is protected !!