May 6, 2026
Uncategorized

ನಿಡಿಗಲ್ ಹಳೆ ಸೇತುವೆ ಪರಿಸರದಲ್ಲಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ: ದಂಡ ವಸೂಲಿ

ಮುಂಡಾಜೆ: ಕಸ ಹಾಕಿದವರಿಂದಲೇ ಕಸ ವಿಲೇವಾರಿ ಮಾಡಿಸಿ ದಂಡವನ್ನು ವಸೂಲಿ ಮಾಡಿದ ಘಟನೆ ಮುಂಡಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.

ಭಾನುವಾರ ರಾತ್ರಿ ಮುಂಡಾಜೆ ಗ್ರಾಪಂ ವ್ಯಾಪ್ತಿಯ ನಿಡಿಗಲ್ ಹಳೆ ಸೇತುವೆ ಪರಿಸರದಲ್ಲಿ ಕಸವನ್ನು ತಂದು ಹಾಕಲಾಗಿತ್ತು.ಈ ಕಸದಲ್ಲಿ ಸಿಕ್ಕ ಕೆಲವು ಪತ್ರ,ದಾಖಲೆ ಇತ್ಯಾದಿಗಳನ್ನು ಪರಿಶೀಲಿಸಿದಾಗ ಇದು ಕಕ್ಕಿಂಜೆ ಕಡೆಯ ವ್ಯಕ್ತಿಗಳು ತಂದು ಹಾಕಿರುವುದಕ್ಕೆ ಪುರಾವೆ ಸಿಕ್ಕಿತ್ತು. ಹಾಗೂ ಈ ದೃಶ್ಯ ಇತ್ತೀಚೆಗೆ ಸೇತುವೆಗೆ ಅಳವಡಿಸಿದ್ದ ಸಿಸಿ ಕ್ಯಾಮೆರಾದಲ್ಲೂ ಸೆರೆಯಾಗಿತ್ತು.ಕಸ ಸುರಿದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಸ್ಥಳಕ್ಕೆ ಕರೆಯಿಸಿ ಅವರಿಂದಲೇ ವಿಲೇವಾರಿ ಮಾಡಿಸಿ ಪಂಚಾಯಿತಿ ವತಿಯಿಂದ 2000 ರೂ. ದಂಡ ವಿಧಿಸಿ ಎಚ್ಚರಿಕೆ ನೀಡಲಾಗಿದೆ ಎಂದು ಮುಂಡಾಜೆ ಗ್ರಾಪಂ ಅಧ್ಯಕ್ಷ ಗಣೇಶ ಬಂಗೇರ ಹಾಗೂ ಪಿಡಿಒ ಗಾಯತ್ರಿ ಪಿ. ತಿಳಿಸಿದ್ದಾರೆ.

ಮುಂಡಾಜೆ ಹಾಗೂ ಕಲ್ಮಂಜ ಗ್ರಾಮ ಪಂಚಾಯಿತಿಗೆ ಸೇರಿದ ಇಲ್ಲಿನ ಹಳೆ ಮತ್ತು ಹೊಸ ಸೇತುವೆ ವ್ಯಾಪ್ತಿಯಲ್ಲಿ ಭಾರಿ ಪ್ರಮಾಣದ ಕಸ ಸಂಗ್ರಹವಾಗಿದ್ದು ಅದು ನದಿ ನೀರು ಆತಂಕ ವ್ಯಕ್ತವಾಗಿತ್ತು. ಗ್ರಾಮಸಭೆಯಲ್ಲೂ ಈ ವಿಚಾರ ಭಾರಿ ಚರ್ಚೆಗೊಳಗಾಗಿತ್ತು. ಬಳಿಕ ಕಳೆದ ವಾರ ಇಲ್ಲಿ ಸ್ವಚ್ಛತೆ ಕಾರ್ಯವನ್ನು 2 ಪಂಚಾಯಿತಿಗಳ ವತಿಗಳಿಂದ ನಿರ್ವಹಿಸಿ ಸೇತುವೆಗೆ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ.

Related posts

ಬೆನಕ ಆಸ್ಪತ್ರೆಯಿಂದ ಡಾ| ಕೇಶವ ರವರಿಗೆ ಗೌರವಾರ್ಪಣೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಕೋಳಿ ಗೂಡಿನಲ್ಲಿ ಬೃಹತ್ ಗಾತ್ರದ ನಾಗರಹಾವು ಪತ್ತೆ

Suddi Udaya

ಸಾಮಾಜಿಕ ಜಾಲ ತಾಣದಲ್ಲಿ ಆಕ್ಷೇಪಣಾಹ೯ ಪೋಸ್ಟ್ ವಸಂತ ಗಿಳಿಯಾರ್ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಿಜೆಪಿ ರಾಜ್ಯಧ್ಯಕ್ಷರಾದ ಬಿ ವೈ ವಿಜಯೇಂದ್ರರವರಿಂದ ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್ ಡೆಚ್ಚಾರ್ ರವರಿಗೆ ಪೋನ್ ಕರೆ

Suddi Udaya

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya

ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ

Suddi Udaya
error: Content is protected !!