July 23, 2026
Uncategorized

ನಿಡಿಗಲ್ ಹಳೆ ಸೇತುವೆ ಪರಿಸರದಲ್ಲಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ: ದಂಡ ವಸೂಲಿ

ಮುಂಡಾಜೆ: ಕಸ ಹಾಕಿದವರಿಂದಲೇ ಕಸ ವಿಲೇವಾರಿ ಮಾಡಿಸಿ ದಂಡವನ್ನು ವಸೂಲಿ ಮಾಡಿದ ಘಟನೆ ಮುಂಡಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.

ಭಾನುವಾರ ರಾತ್ರಿ ಮುಂಡಾಜೆ ಗ್ರಾಪಂ ವ್ಯಾಪ್ತಿಯ ನಿಡಿಗಲ್ ಹಳೆ ಸೇತುವೆ ಪರಿಸರದಲ್ಲಿ ಕಸವನ್ನು ತಂದು ಹಾಕಲಾಗಿತ್ತು.ಈ ಕಸದಲ್ಲಿ ಸಿಕ್ಕ ಕೆಲವು ಪತ್ರ,ದಾಖಲೆ ಇತ್ಯಾದಿಗಳನ್ನು ಪರಿಶೀಲಿಸಿದಾಗ ಇದು ಕಕ್ಕಿಂಜೆ ಕಡೆಯ ವ್ಯಕ್ತಿಗಳು ತಂದು ಹಾಕಿರುವುದಕ್ಕೆ ಪುರಾವೆ ಸಿಕ್ಕಿತ್ತು. ಹಾಗೂ ಈ ದೃಶ್ಯ ಇತ್ತೀಚೆಗೆ ಸೇತುವೆಗೆ ಅಳವಡಿಸಿದ್ದ ಸಿಸಿ ಕ್ಯಾಮೆರಾದಲ್ಲೂ ಸೆರೆಯಾಗಿತ್ತು.ಕಸ ಸುರಿದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಸ್ಥಳಕ್ಕೆ ಕರೆಯಿಸಿ ಅವರಿಂದಲೇ ವಿಲೇವಾರಿ ಮಾಡಿಸಿ ಪಂಚಾಯಿತಿ ವತಿಯಿಂದ 2000 ರೂ. ದಂಡ ವಿಧಿಸಿ ಎಚ್ಚರಿಕೆ ನೀಡಲಾಗಿದೆ ಎಂದು ಮುಂಡಾಜೆ ಗ್ರಾಪಂ ಅಧ್ಯಕ್ಷ ಗಣೇಶ ಬಂಗೇರ ಹಾಗೂ ಪಿಡಿಒ ಗಾಯತ್ರಿ ಪಿ. ತಿಳಿಸಿದ್ದಾರೆ.

ಮುಂಡಾಜೆ ಹಾಗೂ ಕಲ್ಮಂಜ ಗ್ರಾಮ ಪಂಚಾಯಿತಿಗೆ ಸೇರಿದ ಇಲ್ಲಿನ ಹಳೆ ಮತ್ತು ಹೊಸ ಸೇತುವೆ ವ್ಯಾಪ್ತಿಯಲ್ಲಿ ಭಾರಿ ಪ್ರಮಾಣದ ಕಸ ಸಂಗ್ರಹವಾಗಿದ್ದು ಅದು ನದಿ ನೀರು ಆತಂಕ ವ್ಯಕ್ತವಾಗಿತ್ತು. ಗ್ರಾಮಸಭೆಯಲ್ಲೂ ಈ ವಿಚಾರ ಭಾರಿ ಚರ್ಚೆಗೊಳಗಾಗಿತ್ತು. ಬಳಿಕ ಕಳೆದ ವಾರ ಇಲ್ಲಿ ಸ್ವಚ್ಛತೆ ಕಾರ್ಯವನ್ನು 2 ಪಂಚಾಯಿತಿಗಳ ವತಿಗಳಿಂದ ನಿರ್ವಹಿಸಿ ಸೇತುವೆಗೆ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ.

Related posts

ನಮ್ಮ ನಡೆ ಮತಗಟ್ಟೆ ಕಡೆ ಮತದಾರರ ಜಾಗೃತಿ ಆಂದೋಲನ

Suddi Udaya

ಮಾಜಿ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಅವರಿಂದ ಗುರುದ್ವಾರ ಭೇಟಿ

Suddi Udaya

ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ತಾಲೂಕು ಇದರ ವಾರ್ಷಿಕ ಸಭೆ ಹಾಗೂ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ಉಜಿರೆ : ಹಳೆಪೇಟೆ ಬಳಿ ಸಂಚರಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ

Suddi Udaya

ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!