ಪಿಲಿಗೂಡು ಬಾರ್ಯಾ ಬನ್ನೆಂಗಳದಲ್ಲಿ ನೂತನವಾಗಿ ರಚನೆಯಾಗುತ್ತಿರುವ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಕೊಡ ಮಾಡಿದ ಎರಡು ಲಕ್ಷ ಅನುದಾನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಮಹಾಬಲ ಕುಲಾಲ್ ರವರು ಸಮಿತಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.
ತಾಲೂಕು ಜನಜಾಗೃತಿ ಕಾರ್ಯಕಾರಿಣಿ ಸಮಿತಿ ಸದಸ್ಯರೂ ಹಾಗೂ ಬನ್ನೆಂಗಳ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಗುಣಕರ್ ಅಗ್ನಾಡಿ, ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯದರ್ಶಿ ಚಂದ್ರಶೇಖರ್ ಬಾರ್ಯ ಗುರುವಾಯನಕೆರೆ , ಯೋಜನಾ ಕಚೇರಿ ವ್ಯಾಪ್ತಿಯ ಯೋಜನಾಧಿಕಾರಿ ದಯಾನಂದ ಪೂಜಾರಿ, ಸೇವಾಪ್ರತಿನಿಧಿ ಶ್ರೀಮತಿ ವಿಶಾಲಾಕ್ಷಿ, ಒಕ್ಕೂಟದ ಅಧ್ಯಕ್ಷ ಮೋಹನ್ ಗೌಡ, ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.













