25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಎಸ್ ಡಿ ಎಂ ಕಬ್ ಬುಲ್ ಬುಲ್ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳಿಂದ ಪ್ರಶಸ್ತಿ ಪ್ರಧಾನ


ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಮಂಗಳೂರು ಆಯೋಜಿಸಿದ ಕಬ್ ಬುಲ್ ಬುಲ್ ತೃತೀಯ ಚರಣ /ಗರಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಮುಲೈ ಮುಗಿಲನ್ ರವರಿಂದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಜಿಲ್ಲಾಧಿಕಾರಿಗಳ ನಿವಾಸದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಕಬ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳಿಂದ ಪ್ರಶಸ್ತಿ ಪತ್ರವನ್ನು ಸ್ವೀಕರಿಸಿದರು. ಕಬ್ ವಿದ್ಯಾರ್ಥಿಗಳಾದ ವಿಹಾನ್ ಅಹನ್ ಜೈನ್ , ಚಿರಾಗ್ ,ದೈವಿಕ್ ರೈ ಬುಲ್ ಬುಲ್ ವಿದ್ಯಾರ್ಥಿಗಳಾದ ಆದ್ವಿ ಎಲ್ ರೈ , ಯಕ್ಷಿತಾ ಪ್ರಶಸ್ತಿ ಪತ್ರವನ್ನು ಸ್ವೀಕರಿಸಿರುತ್ತಾರೆ .

ಈ ಸಂದರ್ಭದಲ್ಲಿ ಜಿಲ್ಲಾ ಸಂಸ್ಥೆಯ ಕಾರ್ಯದರ್ಶಿಗಳಾದ ಪ್ರತಿಮ್ ಕುಮಾರ್, ಗೈಡ್ ಆಯುಕ್ತರಾದ ವಿಮಲಾ ರಂಗಯ್ಯ , ಸ್ಕೌಟ್ ಆಯುಕ್ತರಾದ ಬಿ ಎಂ ತುಂಬೆ, ಸಹ ಕಾರ್ಯದರ್ಶಿಗಳಾದ ಜಯವಂತಿ ಸೋನ್ಸ್ ,ಡಿಟಿಸಿ ಶಾಂತರಾಮ ಪ್ರಭು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂಆರ್ ರವರ ಮಾರ್ಗದರ್ಶನದಲ್ಲಿ ,ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಶಿಕ್ಷಕಿ ಪ್ರಮೀಳ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡುತ್ತಿದ್ದಾರೆ.

Related posts

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ : ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಭೇಟಿ

Suddi Udaya

ಬಾಂಜಾರು ಮಲೆ ಮತಗಟ್ಟೆಯಲ್ಲಿ ಶೇ 100 ಮತದಾನ: ಹೊಸ ದಾಖಲೆ ನಿರ್ಮಿಸಿದ ಬಾಂಜಾರುಮಲೆಯ ಮತದಾರರು

Suddi Udaya

ಬೆಳ್ತಂಗಡಿ ಎಸ್.ಕೆಎಸ್.ಎಸ್.ಎಫ್ ನಿಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya

ಮನೆಯೊಳಗೆ ಅಕ್ರಮ ಗಾಂಜಾ ದಾಸ್ತಾನು: ಪುಂಜಾಲಕಟ್ಟೆ ಪೊಲೀಸರಿಂದ ದಾಳಿ

Suddi Udaya

ಮಾ.1 : ಎಸ್.ಡಿ.ಪಿ.ಐ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಪಕ್ಷ ಸಮಾವೇಶ

Suddi Udaya

ಬೆಳ್ತಂಗಡಿ : ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

Suddi Udaya
error: Content is protected !!