25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಎಸ್ ಡಿ ಎಂ ಕಬ್ ಬುಲ್ ಬುಲ್ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳಿಂದ ಪ್ರಶಸ್ತಿ ಪ್ರಧಾನ


ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಮಂಗಳೂರು ಆಯೋಜಿಸಿದ ಕಬ್ ಬುಲ್ ಬುಲ್ ತೃತೀಯ ಚರಣ /ಗರಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಮುಲೈ ಮುಗಿಲನ್ ರವರಿಂದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಜಿಲ್ಲಾಧಿಕಾರಿಗಳ ನಿವಾಸದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಕಬ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳಿಂದ ಪ್ರಶಸ್ತಿ ಪತ್ರವನ್ನು ಸ್ವೀಕರಿಸಿದರು. ಕಬ್ ವಿದ್ಯಾರ್ಥಿಗಳಾದ ವಿಹಾನ್ ಅಹನ್ ಜೈನ್ , ಚಿರಾಗ್ ,ದೈವಿಕ್ ರೈ ಬುಲ್ ಬುಲ್ ವಿದ್ಯಾರ್ಥಿಗಳಾದ ಆದ್ವಿ ಎಲ್ ರೈ , ಯಕ್ಷಿತಾ ಪ್ರಶಸ್ತಿ ಪತ್ರವನ್ನು ಸ್ವೀಕರಿಸಿರುತ್ತಾರೆ .

ಈ ಸಂದರ್ಭದಲ್ಲಿ ಜಿಲ್ಲಾ ಸಂಸ್ಥೆಯ ಕಾರ್ಯದರ್ಶಿಗಳಾದ ಪ್ರತಿಮ್ ಕುಮಾರ್, ಗೈಡ್ ಆಯುಕ್ತರಾದ ವಿಮಲಾ ರಂಗಯ್ಯ , ಸ್ಕೌಟ್ ಆಯುಕ್ತರಾದ ಬಿ ಎಂ ತುಂಬೆ, ಸಹ ಕಾರ್ಯದರ್ಶಿಗಳಾದ ಜಯವಂತಿ ಸೋನ್ಸ್ ,ಡಿಟಿಸಿ ಶಾಂತರಾಮ ಪ್ರಭು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂಆರ್ ರವರ ಮಾರ್ಗದರ್ಶನದಲ್ಲಿ ,ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಶಿಕ್ಷಕಿ ಪ್ರಮೀಳ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡುತ್ತಿದ್ದಾರೆ.

Related posts

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ಘಟಕ ಉದ್ಘಾಟನೆ

Suddi Udaya

ಎಸ್.ಡಿ.ಎಂ ಸ್ವಾಯತ್ತ ಕಾಲೇಜು : ವಾರ್ಷಿಕ ಕ್ರೀಡಾಕೂಟ

Suddi Udaya

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮದ ಬಳಿ ಗುಡ್ಡದಲ್ಲಿ ಅಪರಿಚಿತ ಮಾನವ ದೇಹದ ತಲೆಬುರುಡೆ ಹಾಗೂ ಮೂಳೆಗಳು ಪತ್ತೆ :ಆಶ್ರಮದಿಂದ ಕಾಣೆಯಾಗಿದ್ದ ವ್ಯಕ್ತಿಯದೆಂದು ಶಂಕೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಶ್ರೀ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಸೌಜನ್ಯ ಸಾವು ಪ್ರಕರಣ: ಸರಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಲಿ: ಡಾ. ಹೆಗ್ಗಡೆ

Suddi Udaya

ಉಜಿರೆ ಎಸ್‌ಡಿಎಂ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ಮಹಿಳಾ ಟೇಬಲ್ ಟೆನ್ನಿಸ್ ಚಾಂಪಿಯನ್

Suddi Udaya
error: Content is protected !!