23.8 C
ಪುತ್ತೂರು, ಬೆಳ್ತಂಗಡಿ
July 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಗೆ ಚಾಲನೆ : -ವಿಶಿಷ್ಟ ವಿನೂತನ ವಜ್ರಾಭರಣ ಖರೀದಿಗೆ ಸುಮಧುರ ಅವಕಾಶ

ಬೆಳ್ತಂಗಡಿ: ಚಿನ್ನಾಭರಣಗಳ ಮೂಲಕ ಬೆಳ್ತಂಗಡಿಗೆ ಮೆರಗು ತಂದ ಸಂಸ್ಥೆ ಮುಳಿಯ. ಗ್ರಾಹಕರಾಗಿ ಬರುತ್ತಿದ್ದ ನಾನು ಇಂದು ಅತಿಥಿಯಾಗಿರುವುದು ಸಂತಸ ತಂದಿದೆ. ಆಭರಣ ಖರೀದಿಗೆಂದು ಚಿಂತಿಸಿದಾಗ ಮನದಲ್ಲಿ ಬರುವುದು ಮುಳಿಯ ಸಂಸ್ಥೆ. ವ್ಯವಹಾರದಲ್ಲಿ ಆತಿಥ್ಯವನ್ನು ಸದಾ ಗ್ರಾಹಕರಿಗೆ ನೀಡುತ್ತಿದ್ದು ಇದರಿಂದ ಸಂಸ್ಥೆ ಜನಮನಸದಲ್ಲಿ ನೆಳ್ಮೆಯ ಸಂಸ್ಥೆಯಾಗಿ ಬೆಳೆದು ನಿಂತಿದೆ ಎಂದು ಮುಂಡಾಜೆ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ. ಅಭಿಪ್ರಾಯ ವ್ಯಕ್ತಪಡಿಸಿದರು.

ಅವರು ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ನಲ್ಲಿ ಮಾ 3ರಂದು ನಡೆದ ಡೈಮಾಂಡ್ ಪೆಸ್ಟ್ ಚಾಲನೆ ಸಮಾರಂಭದಲ್ಲಿ ಮಾತನಾಡಿದರು.

ಜೇಸಿಐ ಭಾರತದ ವಲಯ 15 ರ ಉಪಾಧ್ಯಕ್ಷ ರಂಜಿತ್ ಹೆಚ್.ಡಿ ಮಾತನಾಡಿ, 80 ದಶಕದಿಂದ ಜನರೊಂದಿಗೆ ಅವಿನಾಭವ ಸಂಬಂಧವನ್ನು ಉಳಿಸಿಕೊಂಡು ಬಂದಿರುವ ಸಂಸ್ಥೆ ಮುಳಿಯ. ಚಿನ್ನಾಭಾರಣಗಳಲ್ಲಿ ಉತ್ತಮ ಗುಣ ಮಟ್ಟವನ್ನು ನೀಡುತ್ತಾ ಬಂದಿರುವ ಮುಳಿಯ ವಿನೂತನ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ವ್ಯವಹಾರಕ್ಕೆ ಸಾಮಾಜಿಕವಾಗಿ ತೊಡಗಿಸಿಕೊಂಡು ಜನರ ಕಷ್ಟಗಳಿಗೆ ಸ್ಪಂದಿಸುತ್ತಿರುವ ಸಂಸ್ಥೆ ಮುಳಿಯ ಎಂದು ಅಭಿಪ್ರಾಯಪಟ್ಟರು.

ಮಾರ್ಕೇಟಿಂಗ್ ಕನ್ಸಲ್‌ಟೆಂಟ್ ವೇಣು ಶರ್ಮ ಮಾತನಾಡಿ, ಚಿನ್ನಭಾರಣ ಸುರಕ್ಷಿತ ಹೂಡಿಕೆಯ ಉದ್ಯಮವಾಗಿದೆ. ವಿಶಿಷ್ಟ ಹಾಗೂ ವಿನೂತನ ವಜ್ರಭಾರಣಗಳ ಸಂಗ್ರಹಣೆ ಈ ಬಾರಿಯ ಡೈಮಾಂಡ್ ಫೆಸ್ಟ್ನಲ್ಲಿದೆ. ಜೀವನದ ಮೊದಲ ವಜ್ರಾಭರಣ ಖರೀದಿಯನ್ನು ಮುಳಿಯೊಂದಿಗೆ ಪ್ರಾರಂಭಿಸಿ ಎಂದು ಹೇಳಿದರು.


ಕಾರ್ಯನಿರ್ವಾಹಕ ಕಾರ್ಯದರ್ಶಿ ಶಿವಕೃಷ್ಣ ಮೂರ್ತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗ್ರಾಹಕರು, ಸಿಬ್ಬಂದಿ ವರ್ಗವದರು ಭಾಗವಹಿಸಿದ್ದರು. ಶಾಖಾ ಪ್ರಬಂಧಕ ಲೋಹಿತ್ ಸ್ವಾಗತಿಸಿ, ಸಿಬ್ಬಂದಿ ಅಶ್ವಥ್ ವಂದಿಸಿ, ಕನ್ನಿಕಾ ನಿರೂಪಿಸಿದರು.

Related posts

ವೇಣೂರು: ನವೋದಯ ಚೈತನ್ಯ ವಿಮಾ ಮೊತ್ತದ ಚೆಕ್ ವಿತರಣೆ

Suddi Udaya

ಕಣಿಯೂರು: ವಿದ್ಯುತ್ ತಂತಿ ಸ್ಪರ್ಶಿಸಿ ನವಿಲು ಸಾವು

Suddi Udaya

ಸವಣಾಲು ಫಲ್ಗುಣಿ ಕುಣಿತ ಭಜನಾ ತಂಡ ಹಾಗೂ ಶಾಲಾ ಮಕ್ಕಳಿಗೆ ಬ್ಯಾಗ್ ಮತ್ತು ಕೊಡೆ ವಿತರಣೆ

Suddi Udaya

ಪೆರಾಡಿ :ಬಂಟರ ಸಂಘ (ರಿ.)ಬೆಳ್ತಂಗಡಿ ಮತ್ತು ಬಂಟರ ಗ್ರಾಮ ಸಮಿತಿ ಪೆರಾಡಿ ಇದರ ಸರ್ವ ಸದಸ್ಯರ ಕುಟುಂಬ ಮಿಲನ ಕಾರ್ಯಕ್ರಮ

Suddi Udaya

ಎಸ್‌ಡಿಎಂ ಕಾಲೇಜು: ‘ಬರೋಡಾ ಅಚೀವರ್ಸ್ ಅವಾರ್ಡ್-2026’

Suddi Udaya

ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಚಲನಚಿತ್ರ ನಿರ್ದೇಶಕ ವಿನು ಬಳಂಜ

Suddi Udaya
error: Content is protected !!