25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು 5 ಮೆಗಾ ವಾಲ್ಟ್ ವಿದ್ಯುತ್ ಫೀಡರನ್ನು 10 ಮೆಗಾ ವಾಲ್ಟ್ ವಿದ್ಯುತ್ ಫೀಡರ್ ಪರಿವರ್ತಿಸಲು ಮನವಿ

ಬೆಳ್ತಂಗಡಿ: ವೇಣೂರು ಸಬ್ ಸ್ಕ್ರೆಷನ್ ಎರಡು ವಿದ್ಯುತ್ ಫೀಡರ್ ಗಳಿದ್ದು ಕಳೆದ ಬಾರಿ ಒಂದು ವಿದ್ಯುತ್ ಫೀಡರನ್ನು 5 ಮೆಗಾವೋಲ್ಟ್ ನಿಂದ 8 ಮೆಗಾ ವೋಲ್ಟ್ ಗೆ ಪರಿವರ್ತಿಸಿ ವೇಣೂರು ಮತ್ತು ಸುತ್ತ ಮುತ್ತಲಿನ ಗ್ರಾಮದ ರೈತರು ಮತ್ತು ಗ್ರಾಮಸ್ಥರಿಗೆ ತುಂಬಾ ಅನುಕೂಲವಾಗಿದೆ.
ಇದೀಗ ಆಗಾಗ ವಿದ್ಯುತ್ ಕಡಿತವಾಗುವುದರಿಂದ ಈಗ ಬಾಕಿ ಇರುವ ವಿದ್ಯುತ್ ಫೀಡರನ್ನು ಸಹ ಐದು ಮೆಗಾ ವೋಲ್ಟ್ ನಿಂದ ಹತ್ತು ಮೆಗಾ ವೋಲ್ಟ್ ಪರಿವರ್ತಿಸಿ ವಿದ್ಯುತ್ ಸಮಸ್ಯೆಯನ್ನು ಪರಿಹರಿಸುವಂತೆ ಸರ್ಕಾರದ ಗಮನವನ್ನು ಸೆಳೆಯಬೇಕೆಂದು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ನಗರದ ಅಧ್ಯಕ್ಷ ದಯಾನಂದ ದೇವಾಡಿಗ ಇವರ ನೇತೃತ್ವದಲ್ಲಿ ಮನವಿಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಶೇಖರ್ ಕುಕ್ಕೇಡಿ, ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷರಾದ ಜಯರಾಮ್ ಶೆಟ್ಟಿ, ಮಹಿಳಾ ಕಾಂಗ್ರೆಸ್ ನಗರದ ಅಧ್ಯಕ್ಷರಾದ ವಂದನಾ ಬಂಡಾರಿ, ತಾಲೂಕು ಆರಾಧನಾ ಸಮಿತಿಯ ಸದಸ್ಯರಾದ ಬಾಲಕೃಷ್ಣ ಭಟ್, ಗ್ಯಾರಂಟಿ ಯೋಜನೆಯ ಸದಸ್ಯರಾದ ಸತೀಶ್ ಹೆಗ್ಡೆ, ಪಕ್ಷದ ಪ್ರಮುಖರಾದ, ರಮೇಶ್ ಪೂಜಾರಿ ಪಡ್ಡಾಯಿ ಮಜಲ್, ಹರೀಶ್ ಪೊಕ್ಕಿ, ಅಶ್ರಫ್ ಕರಿಮಣೇಲು, ತೋಮಸ್ ಅಂಡಿಂಜೆ, ಹಾಗೂ ಪಕ್ಷದ ಕಾರ್ಯಕರ್ತರು ಸಾರ್ವಜನಿಕರು ಉಪಸ್ಥಿತರಿದ್ದರು.

Related posts

ಪುದುವೆಟ್ಟು : ನೂತನ ಬಸದಿಯ ಪಂಚಕಲ್ಯಾಣ ಮತ್ತು ನೂತನ ಬಿಂಬದ ಪ್ರತಿಷ್ಠಾ ಮಹೋತ್ಸವ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ, ಶೈಕ್ಷಣಿಕ ನಿಧಿ ವಿತರಣೆ

Suddi Udaya

ಬೆಳ್ತಂಗಡಿ: ಹಿರಿಯ ವಕೀಲ ಶ್ರೀಧರ ಗೌಡ ನಿಧನ

Suddi Udaya

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಮೆಟ್ರಿ ಕ್ ಮೇಳ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನ ಮಂದಿರಕ್ಕೆ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರ ಭೇಟಿ

Suddi Udaya

ಶಾಲೆತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ಸಹಕಾರ ಭಾರತಿ ಅಭ್ಯರ್ಥಿಗಳ ಅವಿರೋಧ ಆಯ್ಕೆ

Suddi Udaya
error: Content is protected !!