23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅತ್ಯಂತ ಕುತೂಹಲ ಕೆರಳಿಸಿದ ಮಡಂತ್ಯಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ : ಅಧ್ಯಕ್ಷರಾಗಿ ಜೋಯಲ್ ಗಾಡ್ಫಿ ಮೆಂಡೋನ್ಸಾ, ಹಾಗೂ ಉಪಾಧ್ಯಕ್ಷರಾಗಿ ಕಾಂತಪ್ಪ ಗೌಡ ಆಯ್ಕೆ

ಮಡಂತ್ಯಾರು:ಸಹಕಾರಿ ರಂಗದಲ್ಲಿ ಅತ್ಯಂತ ಕುತೂಹಲ ಕೆರಳಿಸಿದ ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರಿ ಭಾರತಿಯ ಅಭ್ಯರ್ಥಿ, ಅಲ್ಪ ಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಯುವ ನಾಯಕ, ಎಂ.ಬಿ ಎ ಪದವೀಧರ ಜೋಯಲ್ ಗಾಡ್ಫಿ ಮೆಂಡೋನ್ಸಾ ಅಧ್ಯಕ್ಷರಾಗಿ ಹಾಗೂ
ಉಪಾಧ್ಯಕ್ಷರಾಗಿ, ಮಡಂತ್ಯಾರು ಗ್ರಾ.ಪಂ ಮಾಜಿ ಸದಸ್ಯ, ಹಾ.ಉ.ಸಹಕಾರಿ ಸಂಘದ ಮಾಜಿ ಅಧ್ಯಕ್ಷ, ಮಾಜಿ ಸೈನಿಕ ಕಾಂತಪ್ಪ ಗೌಡ ಆಯ್ಕೆಯಾದರು.

ನಿರ್ದೇಶಕರುಗಳಾಗಿ ಕಳೆದ ಅವಧಿಯ ಅಧ್ಯಕ್ಷ ಅರವಿಂದ ಜೈನ್, ಕಳೆದ ಬಾರಿಯ ಉಪಾಧ್ಯಕ್ಷೆ ಶ್ರೀಮತಿ ಧನಲಕ್ಷ್ಮಿ, ಕುಮಾರ ನಾಯ್ಕ, ಅಮಿತಾ ಪ್ರಿಯಾ ಲೋಬೋ, ಮಹಾಬಲ ಕೆ, ಸುರೇಶ್ ಎಸ್ ಕಿಶೋರ್ ಕುಮಾರ್, ಪದ್ಮನಾಭ ಸಾಲಿಯಾನ್, ಗೋಪಾಲಕೃಷ್ಣ ಕೆ, ಗಣೇಶ್ ಮೂಲ್ಯ ಆಯ್ಕೆಯಾದರು.

ಸಹಕಾರಿ ಭಾರತಿ 9 ರಲ್ಲಿ ಜಯಗಳಿಸಿದೆ ಹಾಗೂ ಕಾಂಗ್ರೇಸ್ ಬೆಂಬಲಿತ 3 ಅಭ್ಯರ್ಥಿಗಳು ವಿಜಯಶಾಲಿಯಾಗಿದ್ದಾರೆ.

ವಿಲಾಸ್ ಚುನಾವಣಾ ಪ್ರಕ್ರಿಯೆಯನ್ನು ನಡೆಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೋಕಿಂ ಡಿಸೋಜಾ, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಪ್ರತಿನಿಧಿ ಸಿರಾಜುದ್ದೀನ್ ಹಾಗೂ ಸಿಬ್ಬಂದಿಗಳು ಸಹಕರಿಸಿದರು.

Related posts

ಮುಂಡಾಜೆ ಹಿ. ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ. ರಿಗೆ ರಾಷ್ಟ್ರ ಮಟ್ಟದ ಗೋಲ್ಡನ್ ಆರೋ ಪ್ರಶಸ್ತಿ

Suddi Udaya

ಶಿರ್ಲಾಲು : ಬಿಲ್ಲವ ಸಮಾಜ ಬಾಂಧವರ 10ನೇ ವರ್ಷದ ‘ಕೆಸರು ಗದ್ದೆ’ ಕ್ರೀಡಾಕೂಟ

Suddi Udaya

ಬಳ್ಳಮಂಜ ಬ್ರಹ್ಮಕಲಶೋತ್ಸವ-ಶ್ರೀ ಅನಂತ ಮತ್ತು ಶ್ರೀ ಈಶ್ವರ ದೇವರ ಬ್ರಹ್ಮಕಲಶಾಭೀಷೇಕ-ಬ್ರಹ್ಮರಥೋತ್ಸವ

Suddi Udaya

ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಸುವ ನೌಕರರಿಗೆ 3 ತಿಂಗಳ ಸಂಬಳ ನೀಡದೆ ಸತಾಯಿಸುತ್ತಿರುವ ಡಿಪಿ ಕಂಪನಿ: ಕಾರ್ಮಿಕರ ಆಕ್ರೋಶ, ಪ್ರತಿಭಟನೆ

Suddi Udaya

ಆರಂಬೋಡಿ : ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

Suddi Udaya

ನಾರಾವಿ: “ಕಲ್ಕುಡ ಮಹಿಮೆ” ತುಳು ಭಕ್ತಿ ಗೀತೆ ಬಿಡುಗಡೆ

Suddi Udaya
error: Content is protected !!