July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅತ್ಯಂತ ಕುತೂಹಲ ಕೆರಳಿಸಿದ ಮಡಂತ್ಯಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ : ಅಧ್ಯಕ್ಷರಾಗಿ ಜೋಯಲ್ ಗಾಡ್ಫಿ ಮೆಂಡೋನ್ಸಾ, ಹಾಗೂ ಉಪಾಧ್ಯಕ್ಷರಾಗಿ ಕಾಂತಪ್ಪ ಗೌಡ ಆಯ್ಕೆ

ಮಡಂತ್ಯಾರು:ಸಹಕಾರಿ ರಂಗದಲ್ಲಿ ಅತ್ಯಂತ ಕುತೂಹಲ ಕೆರಳಿಸಿದ ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರಿ ಭಾರತಿಯ ಅಭ್ಯರ್ಥಿ, ಅಲ್ಪ ಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಯುವ ನಾಯಕ, ಎಂ.ಬಿ ಎ ಪದವೀಧರ ಜೋಯಲ್ ಗಾಡ್ಫಿ ಮೆಂಡೋನ್ಸಾ ಅಧ್ಯಕ್ಷರಾಗಿ ಹಾಗೂ
ಉಪಾಧ್ಯಕ್ಷರಾಗಿ, ಮಡಂತ್ಯಾರು ಗ್ರಾ.ಪಂ ಮಾಜಿ ಸದಸ್ಯ, ಹಾ.ಉ.ಸಹಕಾರಿ ಸಂಘದ ಮಾಜಿ ಅಧ್ಯಕ್ಷ, ಮಾಜಿ ಸೈನಿಕ ಕಾಂತಪ್ಪ ಗೌಡ ಆಯ್ಕೆಯಾದರು.

ನಿರ್ದೇಶಕರುಗಳಾಗಿ ಕಳೆದ ಅವಧಿಯ ಅಧ್ಯಕ್ಷ ಅರವಿಂದ ಜೈನ್, ಕಳೆದ ಬಾರಿಯ ಉಪಾಧ್ಯಕ್ಷೆ ಶ್ರೀಮತಿ ಧನಲಕ್ಷ್ಮಿ, ಕುಮಾರ ನಾಯ್ಕ, ಅಮಿತಾ ಪ್ರಿಯಾ ಲೋಬೋ, ಮಹಾಬಲ ಕೆ, ಸುರೇಶ್ ಎಸ್ ಕಿಶೋರ್ ಕುಮಾರ್, ಪದ್ಮನಾಭ ಸಾಲಿಯಾನ್, ಗೋಪಾಲಕೃಷ್ಣ ಕೆ, ಗಣೇಶ್ ಮೂಲ್ಯ ಆಯ್ಕೆಯಾದರು.

ಸಹಕಾರಿ ಭಾರತಿ 9 ರಲ್ಲಿ ಜಯಗಳಿಸಿದೆ ಹಾಗೂ ಕಾಂಗ್ರೇಸ್ ಬೆಂಬಲಿತ 3 ಅಭ್ಯರ್ಥಿಗಳು ವಿಜಯಶಾಲಿಯಾಗಿದ್ದಾರೆ.

ವಿಲಾಸ್ ಚುನಾವಣಾ ಪ್ರಕ್ರಿಯೆಯನ್ನು ನಡೆಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೋಕಿಂ ಡಿಸೋಜಾ, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಪ್ರತಿನಿಧಿ ಸಿರಾಜುದ್ದೀನ್ ಹಾಗೂ ಸಿಬ್ಬಂದಿಗಳು ಸಹಕರಿಸಿದರು.

Related posts

ಏಷಿಯನ್ ನೆಟ್ ಬಾಲ್ ಚಾಂಪಿಯನ್ಶಿಪ್’ ಕ್ರೀಡಾಕೂಟ: ಭಾರತ ತಂಡದ ಪ್ರಾಥಮಿಕ ತರಬೇತಿ ಶಿಬಿರಕ್ಕೆ ಎಸ್.ಡಿ.ಎಂ ಕಾಲೇಜಿನ ಚಿಂತನ್ ಬಿ ಸಿ, ಪುನೀತ್ ಆಯ್ಕೆ

Suddi Udaya

ಮೊಗ್ರು: ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ -ಮುಗೇರಡ್ಕ, ಶ್ರೀರಾಮ ಶಿಶುಮಂದಿರದ ದ್ವಿತೀಯ ವರ್ಷದ ವಾರ್ಷಿಕೋತ್ಸವ ಮತ್ತು ಭಾರತ್ ಮಾತ ಪೂಜನ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ಪೇಪರ್ ಲೇಸ್ ರಿಜಿಸ್ಟ್ರೇಷನ್ ತರಬೇತಿ

Suddi Udaya

ಧರ್ಮಸ್ಥಳ: ಬೀಡಿನಲ್ಲಿ ಹೊಸ ಅಕ್ಕಿ ಊಟ

Suddi Udaya

ಬಾರ್ಯ ಪ್ಯಾಕ್ಸ್ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ದಿಗ್ವಿಜಯ

Suddi Udaya

ಬೆಳ್ತಂಗಡಿ ತಾಲೂಕು 19ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

Suddi Udaya
error: Content is protected !!