28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎರಡನೇ ವಾತಿಕಾನ್ ಮಹಾಸಮ್ಮೇಳನದ ಸಂವಿಧಾನಿಕ ದಾಖಲೆಗಳ ಕುರಿತು ವಿಶೇಷ ಕಲಿಕಾ ಶಿಬಿರ

ಬೆಳ್ತಂಗಡಿ: ಕ್ರಿಸ್ತ ಯೇಸುವಿನ ಜನನದ 2025 ನೇ ವರ್ಷದ ಅಂಗವಾಗಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಜ್ಞಾನನಿಲಯ ಪಾಲನಾ ಕೇಂದ್ರದಲ್ಲಿ ವಿಶೇಷ ಕಲಿಕಾ ಶಿಬಿರ ಹಮ್ಮಿಕೊಳ್ಳಲಾಯಿತು. ಶಿಬಿರದಲ್ಲಿ ಕೇರಳದ ಪಾಲಕ್ಕಾಡ್ ಧರ್ಮಪ್ರಾಂತ್ಯದ ಯಾಜಕರಾದ ವಂದನೀಯ ಡಾ. ಅರುಣ್ ಕಲಮತ್ತಂರವರು ಸಂಪನ್ಮೂಲ ವ್ಯಕ್ತಿಗಳಾಗಿದ್ದರು.

1965 ರಲ್ಲಿ ಕೊನೆಗೊಂಡ ಎರಡನೇ ವಾತಿಕಾನ್ ಮಹಾಸಮ್ಮೇಳನದ ಆಧುನಿಕ ಕಾಲದ ಧರ್ಮಸಭೆಯ ಸಂವಿಧಾನಿಕ ದಾಖಲೆಗಳ ಕುರಿತು ಚರ್ಚಿಸಲಾಯಿತು. ಧರ್ಮಸಭೆಯು ಸಮಾಜದಲ್ಲಿ ಒಳಿತಿನ, ಧಾರ್ಮಿಕತೆಯ ಕಾವಲುಗಾರನಾಗಿರಲು ಎರಡನೇ ವಾತಿಕಾನ್ ಮಹಾಸಮ್ಮೇಳನವು ನಮಗೆ ಆಹ್ವಾನ ನೀಡುತ್ತದೆ. ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅತಿ ವಂದನೀಯ ಲಾರೆನ್ಸ್ ಮುಕ್ಕುಜ್ಹಿ ಯವರು ” ಆಧುನಿಕ ಲೋಕಕ್ಕೆ ದಾರಿದೀಪವಾಗಿರುವ ಎರಡನೇ ವಾತಿಕ್ಕಾನ್ ಮಹಾಸಮ್ಮೇಳನದ ದಾಖಲೆಗಳು ಆಳವಾಗಿ ತಿಳಿಯುವುದು ಅನಿವಾರ್ಯ ಹಾಗೂ ಲೋಕ ಸಮಾಧಾನಕ್ಕೆ ಅವಶ್ಯವಾದದ್ದು” ಎಂದರು.

ಧರ್ಮಪ್ರಾಂತ್ಯದ ಎಲ್ಲ ಧರ್ಮಗುರುಗಳು ಹಾಗೂ ಧರ್ಮ ಭಗಿನೀಯರು ಪ್ರಸ್ತುತ ಕಲಿಕಾ ಶಿಬಿರದಲ್ಲಿ ಭಾಗವಹಿಸಿದರು.

Related posts

ಡಿ.5: ವಿದ್ಯುತ್ ನಿಲುಗಡೆ

Suddi Udaya

ಬಂದಾರು ಗ್ರಾಮಸ್ಥರಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಶಾಲಾ ಸುರಕ್ಷತೆ ಮತ್ತು ವಿಪತ್ತು ನಿರ್ವಹಣೆ ಅರಿವು ತರಬೇತಿ ಕಾರ್ಯಕ್ರಮ

Suddi Udaya

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಪ್ರಸನ್ನ ಶಿಕ್ಷಣ ಸಂಸ್ಥೆಗೆ ಭೇಟಿ

Suddi Udaya

ಮಡಂತ್ಯಾರು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಮಾವೇಶದ ಪೂರ್ವಭಾವಿ ಸಭೆ

Suddi Udaya
error: Content is protected !!